ಯುಎಇಅಬುಧಾಬಿ: ಕೆಸಿಎಫ್ ಮೀಲಾದ್ ಸಮಾವೇಶಕ್ಕೆ ಸ್ವಾಗತ ಸಮಿತಿ ರಚನೆ

ಅಬುಧಾಬಿ: ಕೆಸಿಎಫ್ ಮೀಲಾದ್ ಸಮಾವೇಶಕ್ಕೆ ಸ್ವಾಗತ ಸಮಿತಿ ರಚನೆ

ಅಬುಧಾಬಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ.ಎಫ್.) ಅಬುಧಾಬಿ ಝೋನ್ ವತಿಯಿಂದ ಆಯೋಜಿಸಲ್ಪಡುವ ವಿಶ್ವ ಪ್ರವಾದಿ ಪೈಗಂಬರ್(ಸ.)ರ 1499ನೇ ಮೀಲಾದ್ ಸಮಾವೇಶದ ಯಶಸ್ವಿಗೆ ಸ್ವಾಗತ ಸಮಿತಿಯನ್ನು ಇತ್ತೀಚೆಗೆ ಅಬುಧಾಬಿ ಕೆಸಿಎಫ್ ಸಭಾಭವನದಲ್ಲಿ ರಚಿಸಲಾಯಿತು.

ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಜಿ ಜಲ್ಲಿ, ಕನ್ವೀನರ್ ರಾಗಿ ಉಮರ್ ಈಶ್ವರಮಂಗಲ, ಕೋಶಾಧಿಕಾರಿಯಾಗಿ ಸಿದ್ದೀಕ್ ಎನ್.ಕೆ., ಸಲಹೆಗಾರರಾಗಿ ಅಬ್ದುಲ್ ಹಮೀದ್ ಸಅದಿ, ಪಿ.ಒಂ.ಎಚ್ ಈಶ್ವರಮಂಗಲ, ಇಬ್ರಾಹೀಂ ಸಖಾಫಿ ಕೆದುಂಬಾಡಿ, ಕೆ.ಎಚ್.ಸಖಾಫಿ ಈಶ್ವರಮಂಗಲ, ಹಾಜಿ ಮುಹಮ್ಮದ್ ಅಲಿ ವಳವೂರ್, ಇಬ್ರಾಹೀಂ ಬ್ರೈಟ್ ಮಾರ್ಬಲ್, ಇಕ್ಬಾಲ್ ಕುಂದಾಪುರ. ಕಾರ್ಯ ನಿರ್ವಾಹಕರಾಗಿ ಮುಹಮ್ಮದ್ ಹಸನ್ ಹಾಜಿ, ಸಿದ್ದೀಕ್ ಕೆ.ಎಚ್. ಇತರ ಕಾರ್ಯಕ್ರಮದ ಯಶಸ್ವಿಗಾಗಿ ಹಕೀಂ ತುರ್ಕಳಿಕೆ, ಹಸೈನಾರ್ ಅಮಾನಿ ಅಜ್ಜಾವರ, ಕಬೀರ್ ಬಾಯಂಬಾಡಿ, ನವಾಝ್ ಹಾಜಿ, ಹಾರಿಸ್ ಸಅದಿ, ಅಶ್ರಫ್ ಮುಸ್ಲಿಯಾರ್ ಕನ್ಯಾಡಿ, ನಿಝಾರ್ ಕುಂಬ್ಳೆ, ಇಂಜಿನಿಯರ್ ಅರ್ಶದ್, ಶರೀಫ್ ಕಾಜೂರ್, ಫಾರೂಕ್ ಸಖಾಫಿ, ಹಾಫಿಲ್ ಸಈದ್ ಹನೀಫಿ, ಅಮೀರ್ ಚಿಕ್ಕಮಗಳೂರು, ಮುಸ್ತಫ ಸಖಾಫಿ, ರಜಬ್ ನಾವುಂದ, ಶರೀಫ್ ಬೊಳ್ಮಾರ್, ಸುಹೈಲ್ ಬಜ್ಪೆ, ಹಮೀದ್ ಮುಸ್ಲಿಯಾರ್ ಕುಪ್ಪೆಟ್ಟಿ, ಹಿದಾಯತ್ ಕೊಡಗು ಒಳಗೊಂಡ ಮೀಲಾದ್ ಸಮಾವೇಶದ ಸ್ವಾಗತ ಸಮಿತಿಯನ್ನು ರಚಿಸಲಾಯಿತು.

‘ಮುತ್ತು ನಬಿ ಮನುಕುಲದ ಮಾರ್ಗದರ್ಶಿ’ ಎಂಬ ಶೀರ್ಷಿಕೆಯೊಂದಿಗೆ ಸೆಪ್ಟಂಬರ್ 8ರಂದು ಸಂಜೆ ಅಬುಧಾಬಿ ನಗರದ ಇಂಡಿಯನ್ ಇಸ್ಲಾಮಿಕ್ ಸೆಂಟರ್ ನಲ್ಲಿ ನಡೆಯುವ ಮೀಲಾದ್ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಕೇರಳದ ಧಾರ್ಮಿಕ ವಿದ್ವಾಂಸ ಸೈಯದ್ ಅಬ್ದುರ್ರಹ್ಮಾನ್ ಆಟ್ಟೀರಿ ತಂಙಳ್ ಭಾಗವಹಿಸುವರು. ಅವರಲ್ಲದೇ, ಸಾಮಾಜಿಕ ಧಾರ್ಮಿಕ ಮತ್ತು ಉದ್ಯಮ ಕ್ಷೇತ್ರದ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಕೆಸಿಎಫ್ ಪ್ರಕಟನೆ ತಿಳಿಸಿದೆ.

Hot this week

ಅಜ್ಮಾನ್; ತುಂಬೆ ಸಮೂಹ ಸಂಸ್ಥೆಯಿಂದ BCF ಅಧ್ಯಕ್ಷ ಡಾ.ಬಿ.ಕೆ.ಯೂಸುಫ್​ಗೆ ʼLIFE TIME ACHIEVEMENT AWARDʼ

ಅಜ್ಮಾನ್: ತುಂಬೆ ಸಂಸ್ಥೆಯ 28ನೇ ವಾರ್ಷಿಕ ಅನಿವಾಸಿ ಕನ್ನಡಿಗರ ಸ್ನೇಹ ಸಮ್ಮಿಳನ...

ದುಬೈ; ‘ಬದ್ರಿಯಾ ಪ್ರೀಮಿಯರ್ ಲೀಗ್(BPL)-ಸೀಸನ್ 8’; ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಅಲ್ ದನಾ XI ತಂಡ; ರಾಯಲ್ ಥಂಡರ್ ಕುಡ್ಲ ರನ್ನರ್ ಅಪ್

ದುಬೈ: ಅನಿವಾಸಿ ಕನ್ನಡಿಗರ ಸಾಮಾಜಿಕ ಸಂಘಟನೆಯಾದ ‘ಬದ್ರಿಯಾ ಫ್ರೆಂಡ್ಸ್ ಯುಎಇ’ ಆಶ್ರಯದಲ್ಲಿ...

ಶೀಘ್ರವೇ ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಳಗಾವಿ: ಅನಿವಾಸಿ ಕನ್ನಡಿಗರ ಬಹುಕಾಲದ ಅತ್ಯಂತ ಪ್ರಮುಖ ಬೇಡಿಕೆಯಾಗಿರುವ ಪ್ರತ್ಯೇಕ ಸಚಿವಾಲಯವನ್ನು...

ಡಿ.12ರಂದು ಬಹರೈನ್ ಕನ್ನಡ ಸಂಘದಿಂದ ‘ಕನ್ನಡ ವೈಭವ’ ಸಾಂಸ್ಕೃತಿಕ ಕಾರ್ಯಕ್ರಮ; ಮುತ್ತುಗಳ ದ್ವೀಪದಲ್ಲಿ ಹಾಡು, ಹಾಸ್ಯ, ನೃತ್ಯಗಳ ಮಹಾ ಸಂಗಮ

ಬಹರೈನ್: ಇಲ್ಲಿನ ರಾಜ್ಯಪ್ರಶಸ್ತಿ ಪುರಸ್ಕೃತ ಕನ್ನಡ ಸಂಘದ ವಾರ್ಷಿಕ ಕಾರ್ಯಕ್ರಮವಾದ "ಕನ್ನಡ...

Related Articles

Popular Categories