ಬಹರೈನ್ಕೆಸಿಎಫ್ ಬಹರೈನ್: ಭಾರತದ 78ನೇ ಸ್ವಾತಂತ್ರ್ಯೋತ್ಸವ ಸಂಗಮ

ಕೆಸಿಎಫ್ ಬಹರೈನ್: ಭಾರತದ 78ನೇ ಸ್ವಾತಂತ್ರ್ಯೋತ್ಸವ ಸಂಗಮ

ಮನಾಮ: “ವೈವಿಧ್ಯತೆ ನಮ್ಮ ದೇಶದ ಆತ್ಮ” ಎಂಬ ಘೋಷ ವಾಕ್ಯದೊಂದಿಗೆ ಭಾರತದ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಕಾರ್ಯಕ್ರಮವು ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಜಮಾಲುದ್ದೀನ್ ವಿಟ್ಲ ಅಧ್ಯಕ್ಷತೆಯಲ್ಲಿ ಕೆಸಿಎಫ್ ಸೆಂಟ್ರಲ್ ಕಚೇರಿ ಗುದೈಬಿಯಾದಲ್ಲಿ ನಡೆಯಿತು.

ಕೆಸಿಎಫ್ ಮನಾಮ ಸೆಕ್ಟರ್ ಅಧ್ಯಕ್ಷರಾದ ಅಹ್ಮದ್ ಉಸ್ತಾದ್ ದುಆ ಗೈದರು. ದಾರುಲ್ ಹುದಾ ತಂಬಿನಮಕ್ಕಿ ಸ್ಥಾಪನೆಯ ಸಾರಥಿ‌ ಖಲೀಲ್ ಹಿಮಮಿ ಸಖಾಫಿ ಕೊಟ್ಟಮುಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೆಸಿಎಫ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಜಮಾಲುದ್ದೀನ್ ವಿಟ್ಲ ಅಧ್ಯಕ್ಷೀಯ ಭಾಷಣ ಮಾಡಿದರು.

ಕೆಸಿಎಫ್ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯ ಸ್ವಾತಂತ್ರ್ಯೋತ್ಸವದ ಸಂದೇಶ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಅನಿವಾಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ರಾಜ್ ಕುಮಾರ್ ಹಾಗೂ ರಮೇಶ್ ರಾಮಚಂದ್ರನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಕೆಸಿಎಫ್ ಗುದೈಬಿಯಾ ಸೆಕ್ಟರ್ ಉಪಾಧ್ಯಕ್ಷರಾದ ಶಿಹಾಬ್ ಉಸ್ತಾದ್ ಪರಪ್ಪ ಹಾಗೂ ರಾಷ್ಟ್ರೀಯ ಸಮಿತಿ ಸಂಘಟನಾ ಇಲಾಖೆ ಅಧ್ಯಕ್ಷ ಖಲಂದರ್ ಉಸ್ತಾದ್ ಶುಭ ಹಾರೈಸಿದರು. ರಾಷ್ಟ್ರೀಯ ಸಮಿತಿ ಪಬ್ಲಿಕೇಶನ್ ವಿಂಗ್ ಕಾರ್ಯದರ್ಶಿ ತೌಫೀಖ್ ಬೆಳ್ತಂಗಡಿ ಸ್ವಾಗತಿಸಿದರು. ರಾಷ್ಟ್ರೀಯ ಸಮಿತಿ ಪಬ್ಲಿಕೇಶನ್ ವಿಂಗ್ ಅಧ್ಯಕ್ಷ‌ ಲತೀಫ್ ಪೆರೋಲಿ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರೀಯ ಸಮಿತಿ ಶಿಕ್ಷಣ ಇಲಾಖೆ ಕಾರ್ಯದರ್ಶಿ ಅಶ್ರಫ್ ರೆಂಜಾಡಿ ರಾಷ್ಟ್ರ ಗೀತೆ ಹಾಡಿದರು. ರಾಷ್ಟ್ರೀಯ ಸಮಿತಿ ಕೋಶಾಧಿಕಾರಿ ಸೂಫಿ ಪೈಂಬಚ್ಚಾಲ್ ಧನ್ಯವಾದ ಸಮರ್ಪಿಸಿದರು.

Hot this week

ಅಜ್ಮಾನ್; ತುಂಬೆ ಸಮೂಹ ಸಂಸ್ಥೆಯಿಂದ BCF ಅಧ್ಯಕ್ಷ ಡಾ.ಬಿ.ಕೆ.ಯೂಸುಫ್​ಗೆ ʼLIFE TIME ACHIEVEMENT AWARDʼ

ಅಜ್ಮಾನ್: ತುಂಬೆ ಸಂಸ್ಥೆಯ 28ನೇ ವಾರ್ಷಿಕ ಅನಿವಾಸಿ ಕನ್ನಡಿಗರ ಸ್ನೇಹ ಸಮ್ಮಿಳನ...

ದುಬೈ; ‘ಬದ್ರಿಯಾ ಪ್ರೀಮಿಯರ್ ಲೀಗ್(BPL)-ಸೀಸನ್ 8’; ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಅಲ್ ದನಾ XI ತಂಡ; ರಾಯಲ್ ಥಂಡರ್ ಕುಡ್ಲ ರನ್ನರ್ ಅಪ್

ದುಬೈ: ಅನಿವಾಸಿ ಕನ್ನಡಿಗರ ಸಾಮಾಜಿಕ ಸಂಘಟನೆಯಾದ ‘ಬದ್ರಿಯಾ ಫ್ರೆಂಡ್ಸ್ ಯುಎಇ’ ಆಶ್ರಯದಲ್ಲಿ...

ಶೀಘ್ರವೇ ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಳಗಾವಿ: ಅನಿವಾಸಿ ಕನ್ನಡಿಗರ ಬಹುಕಾಲದ ಅತ್ಯಂತ ಪ್ರಮುಖ ಬೇಡಿಕೆಯಾಗಿರುವ ಪ್ರತ್ಯೇಕ ಸಚಿವಾಲಯವನ್ನು...

ಡಿ.12ರಂದು ಬಹರೈನ್ ಕನ್ನಡ ಸಂಘದಿಂದ ‘ಕನ್ನಡ ವೈಭವ’ ಸಾಂಸ್ಕೃತಿಕ ಕಾರ್ಯಕ್ರಮ; ಮುತ್ತುಗಳ ದ್ವೀಪದಲ್ಲಿ ಹಾಡು, ಹಾಸ್ಯ, ನೃತ್ಯಗಳ ಮಹಾ ಸಂಗಮ

ಬಹರೈನ್: ಇಲ್ಲಿನ ರಾಜ್ಯಪ್ರಶಸ್ತಿ ಪುರಸ್ಕೃತ ಕನ್ನಡ ಸಂಘದ ವಾರ್ಷಿಕ ಕಾರ್ಯಕ್ರಮವಾದ "ಕನ್ನಡ...

Related Articles

Popular Categories