ಒಮಾನ್ಒಮಾನ್ ಕರಾವಳಿಯಲ್ಲಿ ಮುಳುಗಿದ ಹಡಗು: ಎಂಟು ಭಾರತೀಯರ ಸಹಿತ...

ಒಮಾನ್ ಕರಾವಳಿಯಲ್ಲಿ ಮುಳುಗಿದ ಹಡಗು: ಎಂಟು ಭಾರತೀಯರ ಸಹಿತ ಒಂಬತ್ತು ಮಂದಿಯ ರಕ್ಷಣೆ

ಹೊಸದಿಲ್ಲಿ: ಒಮನ್ ಕರಾವಳಿಯಲ್ಲಿ ಕಳೆದ ಭಾನುವಾರ ಮುಳುಗಿದ ಪ್ರೆಸ್ಟೀಜ್ ಫಾಲ್ಕನ್ ತೈಲ ಸಾಗಾಣಿಕೆ ಹಡಗಿನಲ್ಲಿದ್ದ 13 ಮಂದಿ ಭಾರತೀಯರ ಪೈಕಿ ಎಂಟು ಮಂದಿ ಸೇರಿದಂತೆ ಒಟ್ಟು ಒಂಬತ್ತು ಮಂದಿಯನ್ನು ರಕ್ಷಿಸಲಾಗಿದೆ. ರಕ್ಷಿಸಲ್ಪಟ್ಟ ಮತ್ತೊಬ್ಬ ಸಿಬ್ಬಂದಿ ಶ್ರೀಲಂಕಾ ಮೂಲದವರು ಎನ್ನಲಾಗಿದೆ.

“ಉಳಿದ ಸಿಬ್ಬಂದಿಯ ಹುಡುಕಾಟಕ್ಕಾಗಿ ಶೋಧ ಮತ್ತು ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ. ಈಗಾಗಲೇ ಪತ್ತೆಯಾಗಿರುವ ಎಲ್ಲ ಒಂಬತ್ತು ಮಂದಿ ಮಸ್ಕತ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜುಲೈ 14ರಂದು ರಾತ್ರಿ 10 ಗಂಟೆಯ ವೇಳೆಗೆ ಈ ಅವಘಡದ ಬಗ್ಗೆ ಪ್ರೆಸ್ಟೀಜ್ ಫಾಲ್ಕನ್ ಹಡಗಿನಿಂದ ಮಾಹಿತಿ ಸಿಕ್ಕಿತ್ತು. ಒಮಾನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಒಮಾನ್ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದು, ಶೋಧ ಕಾರ್ಯಾಚರಣೆಯಲ್ಲಿ ಭಾರತೀಯ ನೌಕಾಪಡೆ ಕೂಡಾ ಕೈಜೋಡಿಸಿದೆ.

ಒಮಾನ್ ಕರಾವಳಿಯ ರಾಸ್ ಮದ್ರಖಾದಿಂದ 25 ನಾಟಿಕಲ್ ಮೈಲು ದೂರದಲ್ಲಿ ಹಡಗು ಮುಳುಗಿತ್ತು. ಹಡಗು ಇನ್ನೂ ಮುಳುಗಿದ ಸ್ಥಿತಿಯಲ್ಲೇ ಇದೆ. ಇದರಲ್ಲಿ ಸಾಗಿಸಲಾಗುತ್ತಿದ್ದ ತೈಲ ಸಮುದ್ರಕ್ಕೆ ಸೋರಿಕೆಯಾಗಿದೆಯೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.

Hot this week

ಅಮೇರಿಕ; ‘ಆಟಾ’ ವತಿಯಿಂದ ‘ಬಿಸು ಪರ್ಬ 2026’ ಆಚರಣೆ: ತುಳು ಲಿಪಿ ತರಗತಿಗೆ ಚಾಲನೆ

ಉತ್ತರ ಅಮೇರಿಕ: ಅಖಿಲ ಅಮೆರಿಕಾ ತುಳು ಅಸೋಸಿಯೇಷನ್ (ಆಟಾ) ವತಿಯಿಂದ ಏಪ್ರಿಲ್...

ಅಟ್ಲಾಂಟ ಕನ್ನಡಿಗರಿಂದ ಯುಗಾದಿ-ಹೊಸ ತೊಡಕು ಆಚರಣೆ

ಅಟ್ಲಾಂಟ ಕನ್ನಡಿಗರು ಯುಗಾದಿಯನ್ನು ಏಪ್ರಿಲ್ 11 ಹಾಗೂ ಹೊಸತೊಡಕು ಹಬ್ಬವನ್ನು ಏಪ್ರಿಲ್...

ಖತರ್‌ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ಸ್ವೀಕಾರ

ದೋಹಾ(ಖತರ್):ಕರ್ನಾಟಕ ಸಂಘ ಖತರ್‌ನ 2026–2028 ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸುಬ್ರಹ್ಮಣ್ಯ ಹೆಬ್ಬಾಗಿಲು...

ಫ್ಲೋರಿಡಾ ತುಳು ಕೂಟದ 5ನೇ ವಾರ್ಷಿಕೋತ್ಸವ: ಸಂಭ್ರಮದ ಪಿಕ್ನಿಕ್‌ನೊಂದಿಗೆ ಸಂಸ್ಕೃತಿಯ ಅನಾವರಣ

ಪೊಂಪಾನೋ ಬೀಚ್(ಫ್ಲೋರಿಡಾ): ಫ್ಲೋರಿಡಾ ತುಳು ಕೂಟವು ತನ್ನ ಐದನೇ ವರ್ಷದ ಸಂಭ್ರಮವನ್ನು...

ಅಬುಧಾಬಿಗೆ ಸಚಿವ ಡಾ.ಜೈಶಂಕರ್ ಭೇಟಿ; ಕನ್ನಡಿಗರ ಕೂಟ ದುಬೈ-ಅಬುಧಾಬಿ ಕರ್ನಾಟಕ ಸಂಘ ಪ್ರತಿನಿಧಿತ್ವ

ಅಬುಧಾಬಿ: ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು...

Related Articles

Popular Categories