ಕುವೈತ್ಡಿಕೆಎಸ್‌ಸಿ ಕುವೈತ್; 5ನೇ ಬಾರಿಗೆ ಯೂಸುಫ್ ಅಬ್ಬಾಸ್ ಬಾರುದ್...

ಡಿಕೆಎಸ್‌ಸಿ ಕುವೈತ್; 5ನೇ ಬಾರಿಗೆ ಯೂಸುಫ್ ಅಬ್ಬಾಸ್ ಬಾರುದ್ ಅಧ್ಯಕ್ಷರಾಗಿ ಪುನರಾಯ್ಕೆ: ಪ್ರ.ಕಾರ್ಯದರ್ಶಿಯಾಗಿ ಲಿಯಾಕತ್, ಕೋಶಾಧಿಕಾರಿಯಾಗಿ ಇಮ್ತಿಯಾಝ್

ಕುವೈತ್: ಡಿಕೆಎಸ್‌ಸಿ ಇದರ ಕುವೈತ್ ರಾಷ್ಟ್ರೀಯ ಸಮಿತಿಯ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಸಾಲ್ಮಿಯ ಸುನ್ನಿ ಸೆಂಟರ್ ನಲ್ಲಿ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಯೂಸುಫ್ ಅಬ್ಬಾಸ್ ಬಾರೂದ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಗೌರವಾಧ್ಯಕ್ಷ ಶಫೀಕ್ ಅಹ್ಸನಿ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮವನ್ನು ಡಿಕೆಎಸ್‌ಸಿ ಕೇಂದ್ರ ಸಮಿತಿ ವೀಕ್ಷಕರಾಗಿ ಆಗಮಿಸಿದ್ದ, ಡಿಕೆಎಸ್‌ಸಿ ವಿಷನ್-30 ಇದರ ಚೇರ್ಮನ್ ಹಾತಿಂ ಹಾಜಿ ಕೂಳೂರು ಉದ್ಘಾಟಿಸಿದರು. ವಾರ್ಷಿಕ ವರದಿ ಮತ್ತು ಲೆಕ್ಕ ಪತ್ರ ಮಂಡನೆ ಬಳಿಕ ಸಭೆಯ ಅಂಗೀಕಾರ ಪಡೆಯಲಾಯಿತು.

ಡಿಕೆಎಸ್‌ಸಿ ಕುವೈತ್ ಇದರ ರಾಯಭಾರಿಯಾಗಿ ಆಗಮಿಸಿದ್ದ ಅಝೀಝ್ ಮೂಳೂರು ನೇತೃತ್ವದಲ್ಲಿ ಸಮಿತಿ ಬರ್ಕಾಸ್ತು ಗೊಳಿಸಿ ಹೊಸ ಸಮಿತಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.

ಸಭೆಯ ಒಮ್ಮತದ ಅಭಿಪ್ರಾಯದಂತೆ 5ನೇ ಬಾರಿಗೆ ಯೂಸುಫ್ ಅಬ್ಬಾಸ್ ಬಾರುದ್ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ಲಿಯಾಕತ್ ಗಂಗಾವಳಿ ಹಾಗೂ ಕೋಶಾಧಿಕಾರಿಯಾಗಿ ಇಮ್ತಿಯಾಝ್ ಸೂರಿಂಜೆ ಅವರನ್ನು ಆರಿಸಲಾಯಿತು.

15 ಮಂದಿ ಕಾರ್ಯಕಾರಿ ಸಮಿತಿಯನ್ನು ಒಳಗೊಂಡ ನೂತನ ಸಮಿತಿಯನ್ನು ಈ ವೇಳೆ ರಚಿಸಲಾಯಿತು. ಡಿಕೆಎಸ್‌ಸಿ ಸಂಸ್ಥೆಯ ಪರಿಚಯ ಮಾಡುವ ವಿಡಿಯೋವನ್ನು ಪ್ರದರ್ಶನ ಮಾಡಲಾಯಿತು.

ಅತಿಥಿಗಳನ್ನು ಸನ್ಮಾನಿಸಿ, ಕೇಂದ್ರ ಸಮಿತಿಯ ಕಳೆದ ವರ್ಷದ ಪ್ರಮುಖ ಯೋಜನೆಗಳನ್ನು ಸಭೆಗೆ ತಿಳಿಸಲಾಯಿತು. ಕುವೈತ್ ನಲ್ಲಿರುವ ಪ್ರಮುಖ ಸಂಘಟನೆಯ ನೇತಾರರ ಅಭಿನಂದನಾ ಭಾಷಣ ಮುಗಿದ ಬಳಿಕ ಗೌರವಾಧ್ಯಕ್ಷ ಅಬ್ದುರೆಹಮಾನ್ ಸಖಾಫಿ ದುಆ ನೆರವೇರಿಸಿದರು. ಶಫೀಕ್ ಅಹ್ಸನಿ ಸ್ವಾಗತಿಸಿ ಲಿಯಾಕತ್ ಗಂಗಾವಳಿ ವಂದಿಸಿದರು. ಕಾರ್ಯಕ್ರಮವನ್ನು ಹೈದರ್ ಉಚ್ಚಿಲ ನಿರೂಪಿಸಿದರು.

Hot this week

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

ಬಹರೈನ್‌; ‘ಕೆಸಿಎಫ್’ನಿಂದ ಈದ್ ಮಿಲಾದ್ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ

ಮನಾಮ: ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್) ಬಹರೈನ್‌ ವತಿಯಿಂದ ಪ್ರವಾದಿ ಮುಹಮ್ಮದ್‌ರವರ...

ಅಮೇರಿಕ; ಭಕ್ತಿ, ಬಸವತತ್ವ, ನಾಟಕ-ನೃತ್ಯ ವೈಭವದಿಂದ ಕಂಗೊಳಿಸಿದ VSNA ಮಹಾಸಮ್ಮೇಳನದ ಎರಡನೇ ದಿನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಸ್ಯಾನ್‌ಫೋರ್ಡ್ (ಉತ್ತರ ಕೆರೊಲಿನಾ: 48ನೇ ವೀರಶೈವ ಸೊಸೈಟಿ...

ಕನ್ನಡ ಸಂಘ ಬಹರೈನ್‌ನ ‘ಯಕ್ಷ ವೈಭವ 2026’ ಮುಹೂರ್ತ ಪೂಜೆ ಸಂಪನ್ನ

ಬಹರೈನ್‌: ಕನ್ನಡ ಸಂಘ ಬಹರೈನ್ ಅರ್ಪಿಸುವ ‘ಯಕ್ಷ ವೈಭವ 2026’ ರ...

ಅಮೇರಿಕ; ಉತ್ತರ ಕೆರೊಲಿನಾದಲ್ಲಿ 48ನೇ ವಿಎಸ್‌ಎನ್‌ಎ ಮಹಾಸಮ್ಮೇಳನಕ್ಕೆ ಅದ್ದೂರಿ ಚಾಲನೆ

-ಬೆಂಕಿ ಬಸಣ್ಣ, ಉತ್ತರ ಕೆರೊಲಿನಾ ಉತ್ತರ ಅಮೇರಿಕದ ವೀರಶೈವ-ಲಿಂಗಾಯತ ಸಮುದಾಯದ ಅತ್ಯಂತ ಹಿರಿಯ...

Related Articles

Popular Categories