ಬಹರೈನ್ಬಹರೈನ್ : ಎನ್‌ಆರ್‌ಐ ಮುಹಮ್ಮದ್ ಮನ್ಸೂರ್ ಅವರಿಗೆ ಪ್ರತಿಷ್ಠಿತ...

ಬಹರೈನ್ : ಎನ್‌ಆರ್‌ಐ ಮುಹಮ್ಮದ್ ಮನ್ಸೂರ್ ಅವರಿಗೆ ಪ್ರತಿಷ್ಠಿತ ʼTOB ಐಕನ್ʼ ಪ್ರಶಸ್ತಿ ಪ್ರದಾನ

ಮನಾಮ, ಬಹರೈನ್ : ಬಹರೈನ್ ಸಂಸ್ಥಾನದ ಸಂಸತ್ತಿನ ಸ್ಪೀಕರ್ ಅಹ್ಮದ್ ಬಿನ್ ಸಲ್ಮಾನ್ ಅಲ್-ಮುಸಲ್ಲಮ್ ಉಪಸ್ಥಿತಿಯಲ್ಲಿ ಸಾರಾ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷ ಮುಹಮ್ಮದ್ ಮನ್ಸೂರ್ ಅವರಿಗೆ ದಿ ಟೈಮ್ಸ್ ಆಫ್ ಬಹ್ರೈನ್‌ನ ಪ್ರತಿಷ್ಠಿತ ʼTOB ಐಕನ್ʼ ಪ್ರಶಸ್ತಿ 2024 ಅನ್ನು ಪ್ರದಾನ ಮಾಡಿ ಗೌರವಿಸಲಾಯಿತು. ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಮುಹಮ್ಮದ್ ಮನ್ಸೂರ್ ಅವರು ಉದ್ಯಮ ವಲಯಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸಿ ನೀಡಲಾಗಿದೆ.

ಅಹ್ಮದ್ ಬಿನ್ ಸಲ್ಮಾನ್ ಅಲ್-ಮುಸಲ್ಲಮ್ ಅವರು ಕ್ಷೇತ್ರಗಳಿಗೆ ಗಣನೀಯ ಕೊಡುಗೆ ನೀಡಿರುವ ಪ್ರಶಸ್ತಿ ವಿಜೇತರನ್ನು ಈ ಸಂದರ್ಭದಲ್ಲಿ ಅಭಿನಂದಿಸಿದರು. ಬಹ್ರೈನ್ ಆರ್ಥಿಕತೆ ಹಾಗೂ ಸಮಾಜದ ಪ್ರಗತಿಯಲ್ಲಿ ಅವರು ನಿರ್ವಹಿಸಿರುವ ಗಮನಾರ್ಹ ಪಾತ್ರವನ್ನು ಅವರು ಶ್ಲಾಘಿಸಿದರು.

ಖ್ಯಾತ ಉದ್ಯಮಿ ಹಾಗೂ ಕ್ರೀಡಾ ಪೋಷಕರಾದ ಮುಹಮ್ಮದ್ ಮನ್ಸೂರ್ ಅವರು ತಮ್ಮ ವ್ಯಾವಹಾರಿಕ ಕೌಶಲದಿಂದ ಸಾರಾ ಸಮೂಹವನ್ನು ಹೊಸ ಎತ್ತರಕ್ಕೆ ಏರಿಸಿದ್ದಾರೆ. ಮಹಮ್ಮದ್ ಮನ್ಸೂರ್ ಅವರು ಬಹ್ರೈನ್ ಕ್ರಿಕೆಟ್ ಫೌಂಡೇಶನ್ ಹಾಗೂ ಲೈಫ್ ಎನ್ ಸ್ಟೈಲ್ ನಿಯತಕಾಲಿಕದ ಅಧ್ಯಕ್ಷರಾಗಿದ್ದಾರೆ. ವಿಶ್ವಸಂಸ್ಥೆಯ ಅಧೀನದಲ್ಲಿರುವ ದಿ ಕೌನ್ಸಿಲ್ ಇನ್ ದಿ ವರ್ಲ್ಡ್ ಯೂತ್ ಗ್ರೂಪ್‌ನ ನಿರ್ದೇಶಕರೂ ಆಗಿದ್ದಾರೆ.

ಮುಹಮ್ಮದ್ ಮನ್ಸೂರ್ ಅವರು ಕೆಎಚ್‌ಕೆ ಹೀರೋಸ್ ಫೌಂಡೇಶನ್‌ನ ಉಪಾಧ್ಯಕ್ಷ ಹಾಗೂ ಬಹ್ರೈನ್ ಇಂಡಿಯಾ ಸೊಸೈಟಿಯ ಆಡಳಿತ ಮಂಡಳಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಅವರ ಬಹುಮುಖ ಕೆಲಸವು ಪ್ರಗತಿ, ಅಭಿವೃದ್ಧಿ ಹಾಗೂ ಅಂತರ್ ಸಾಂಸ್ಕೃತಿಕ ಸಂಬಂಧಗಳ ಬಗ್ಗೆ ಅವರಿಗಿರುವ ಬದ್ಧತೆಯನ್ನು ಪ್ರತಿಫಲಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಖ್ಯಾತ ಉದ್ಯಮಿ ಹಾಗೂ ಕ್ರೀಡಾ ಪೋಷಕರಾದ ಮುಹಮ್ಮದ್ ಮನ್ಸೂರ್ ಅವರು ತಮ್ಮ ವ್ಯಾವಹಾರಿಕ ಕೌಶಲದಿಂದ ಸಾರಾ ಸಮೂಹವನ್ನು ಹೊಸ ಎತ್ತರಕ್ಕೆ ಏರಿಸಿದ್ದಾರೆ. ಮಹಮ್ಮದ್ ಮನ್ಸೂರ್ ಅವರು ಬಹ್ರೈನ್ ಕ್ರಿಕೆಟ್ ಫೌಂಡೇಶನ್ ಹಾಗೂ ಲೈಫ್ ಎನ್ ಸ್ಟೈಲ್ ನಿಯತಕಾಲಿಕದ ಅಧ್ಯಕ್ಷರಾಗಿದ್ದಾರೆ. ವಿಶ್ವಸಂಸ್ಥೆಯ ಅಧೀನದಲ್ಲಿರುವ ದಿ ಕೌನ್ಸಿಲ್ ಇನ್ ದಿ ವರ್ಲ್ಡ್ ಯೂತ್ ಗ್ರೂಪ್‌ನ ನಿರ್ದೇಶಕರೂ ಆಗಿದ್ದಾರೆ.

ಮುಹಮ್ಮದ್ ಮನ್ಸೂರ್ ಅವರು ಕೆಎಚ್‌ಕೆ ಹೀರೋಸ್ ಫೌಂಡೇಶನ್‌ನ ಉಪಾಧ್ಯಕ್ಷ ಹಾಗೂ ಬಹ್ರೈನ್ ಇಂಡಿಯಾ ಸೊಸೈಟಿಯ ಆಡಳಿತ ಮಂಡಳಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಅವರ ಬಹುಮುಖ ಕೆಲಸವು ಪ್ರಗತಿ, ಅಭಿವೃದ್ಧಿ ಹಾಗೂ ಅಂತರ್ ಸಾಂಸ್ಕೃತಿಕ ಸಂಬಂಧಗಳ ಬಗ್ಗೆ ಅವರಿಗಿರುವ ಬದ್ಧತೆಯನ್ನು ಪ್ರತಿಫಲಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Hot this week

ದುಬೈನಲ್ಲಿ ‘ಗಂಧರ್ವ ಗಮಕ ಶಾಲೆ’ ಉದ್ಘಾಟನೆ

ದುಬೈ: ಪದ್ಮಶ್ರೀ ಹೊಸಹಳ್ಳಿ ಕೇಶವಮೂರ್ತಿ ಅವರ ಶಿಷ್ಯ ಪರಂಪರೆಯನ್ನು ಮುಂದುವರಿಸುವ ಮಹತ್ವದ...

ದುಬೈಯಲ್ಲಿ ಸಂಪನ್ನಗೊಂಡ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ವೈಭವ

ದುಬೈ: ಅರಬ್ ಸಂಯುಕ್ತ ಸಂಸ್ಥಾನ ವಾಣಿಜ್ಯ ನಗರಿ ದುಬೈಯಲ್ಲಿ ಸಾಮೂಹಿಕ ಶ್ರೀ...

ಸಲಾಲದಲ್ಲಿ ಅದ್ದೂರಿಯಾಗಿ ನಡೆದ ಕನ್ನಡಿಗರ ‘ಸ್ನೇಹ ಸಂಗಮ’ ಕಾರ್ಯಕ್ರಮ

ಸಲಾಲ(ಒಮಾನ್): ಇಲ್ಲಿನ ಅನಿವಾಸಿ ಕನ್ನಡಿಗರ ಅನ್ನೂರ್ ಎಜುಕೇಶನಲ್ ಸೆಂಟರ್ ವತಿಯಿಂದ 'ಸ್ನೇಹ...

ವಿಶ್ವದಲ್ಲೇ ಮೊದಲ ಬಾರಿ ಜರ್ಮನ್ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಸಿದ್ಧತೆ

ವಿಶೇಷ ಸಂದರ್ಶನ: ಎಂ.ಇಕ್ಬಾಲ್ ಉಚ್ಚಿಲ, ದುಬೈ ಕರಾವಳಿ ಕರ್ನಾಟಕದ ಜನಪ್ರಿಯ ಕಲೆಯಾಗಿರುವ ಯಕ್ಷಗಾನವು...

ಫೆಬ್ರವರಿ 1ರಂದು ಶಾರ್ಜಾದಲ್ಲಿ ‘ಮಾರ್ಗದೀಪ ಪ್ರೀಮಿಯರ್ ಲೀಗ್-4’ ಕ್ರಿಕೆಟ್ ಟೂರ್ನಮೆಂಟ್; ಜರ್ಸಿ ಬಿಡುಗಡೆ

ದುಬೈ: ಮಾರ್ಗದೀಪ ಸಾಂಸ್ಕೃತಿಕ ಸಮಿತಿಯ ವತಿಯಿಂದ ದಿವಂಗತ ವಸಂತ್ ಬೇಕಲ್ ಸ್ಮರಣಾರ್ಥ...

Related Articles

Popular Categories