ಬಹರೈನ್ಬಹರೈನ್ : ಎನ್‌ಆರ್‌ಐ ಮುಹಮ್ಮದ್ ಮನ್ಸೂರ್ ಅವರಿಗೆ ಪ್ರತಿಷ್ಠಿತ...

ಬಹರೈನ್ : ಎನ್‌ಆರ್‌ಐ ಮುಹಮ್ಮದ್ ಮನ್ಸೂರ್ ಅವರಿಗೆ ಪ್ರತಿಷ್ಠಿತ ʼTOB ಐಕನ್ʼ ಪ್ರಶಸ್ತಿ ಪ್ರದಾನ

ಮನಾಮ, ಬಹರೈನ್ : ಬಹರೈನ್ ಸಂಸ್ಥಾನದ ಸಂಸತ್ತಿನ ಸ್ಪೀಕರ್ ಅಹ್ಮದ್ ಬಿನ್ ಸಲ್ಮಾನ್ ಅಲ್-ಮುಸಲ್ಲಮ್ ಉಪಸ್ಥಿತಿಯಲ್ಲಿ ಸಾರಾ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷ ಮುಹಮ್ಮದ್ ಮನ್ಸೂರ್ ಅವರಿಗೆ ದಿ ಟೈಮ್ಸ್ ಆಫ್ ಬಹ್ರೈನ್‌ನ ಪ್ರತಿಷ್ಠಿತ ʼTOB ಐಕನ್ʼ ಪ್ರಶಸ್ತಿ 2024 ಅನ್ನು ಪ್ರದಾನ ಮಾಡಿ ಗೌರವಿಸಲಾಯಿತು. ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಮುಹಮ್ಮದ್ ಮನ್ಸೂರ್ ಅವರು ಉದ್ಯಮ ವಲಯಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸಿ ನೀಡಲಾಗಿದೆ.

ಅಹ್ಮದ್ ಬಿನ್ ಸಲ್ಮಾನ್ ಅಲ್-ಮುಸಲ್ಲಮ್ ಅವರು ಕ್ಷೇತ್ರಗಳಿಗೆ ಗಣನೀಯ ಕೊಡುಗೆ ನೀಡಿರುವ ಪ್ರಶಸ್ತಿ ವಿಜೇತರನ್ನು ಈ ಸಂದರ್ಭದಲ್ಲಿ ಅಭಿನಂದಿಸಿದರು. ಬಹ್ರೈನ್ ಆರ್ಥಿಕತೆ ಹಾಗೂ ಸಮಾಜದ ಪ್ರಗತಿಯಲ್ಲಿ ಅವರು ನಿರ್ವಹಿಸಿರುವ ಗಮನಾರ್ಹ ಪಾತ್ರವನ್ನು ಅವರು ಶ್ಲಾಘಿಸಿದರು.

ಖ್ಯಾತ ಉದ್ಯಮಿ ಹಾಗೂ ಕ್ರೀಡಾ ಪೋಷಕರಾದ ಮುಹಮ್ಮದ್ ಮನ್ಸೂರ್ ಅವರು ತಮ್ಮ ವ್ಯಾವಹಾರಿಕ ಕೌಶಲದಿಂದ ಸಾರಾ ಸಮೂಹವನ್ನು ಹೊಸ ಎತ್ತರಕ್ಕೆ ಏರಿಸಿದ್ದಾರೆ. ಮಹಮ್ಮದ್ ಮನ್ಸೂರ್ ಅವರು ಬಹ್ರೈನ್ ಕ್ರಿಕೆಟ್ ಫೌಂಡೇಶನ್ ಹಾಗೂ ಲೈಫ್ ಎನ್ ಸ್ಟೈಲ್ ನಿಯತಕಾಲಿಕದ ಅಧ್ಯಕ್ಷರಾಗಿದ್ದಾರೆ. ವಿಶ್ವಸಂಸ್ಥೆಯ ಅಧೀನದಲ್ಲಿರುವ ದಿ ಕೌನ್ಸಿಲ್ ಇನ್ ದಿ ವರ್ಲ್ಡ್ ಯೂತ್ ಗ್ರೂಪ್‌ನ ನಿರ್ದೇಶಕರೂ ಆಗಿದ್ದಾರೆ.

ಮುಹಮ್ಮದ್ ಮನ್ಸೂರ್ ಅವರು ಕೆಎಚ್‌ಕೆ ಹೀರೋಸ್ ಫೌಂಡೇಶನ್‌ನ ಉಪಾಧ್ಯಕ್ಷ ಹಾಗೂ ಬಹ್ರೈನ್ ಇಂಡಿಯಾ ಸೊಸೈಟಿಯ ಆಡಳಿತ ಮಂಡಳಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಅವರ ಬಹುಮುಖ ಕೆಲಸವು ಪ್ರಗತಿ, ಅಭಿವೃದ್ಧಿ ಹಾಗೂ ಅಂತರ್ ಸಾಂಸ್ಕೃತಿಕ ಸಂಬಂಧಗಳ ಬಗ್ಗೆ ಅವರಿಗಿರುವ ಬದ್ಧತೆಯನ್ನು ಪ್ರತಿಫಲಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಖ್ಯಾತ ಉದ್ಯಮಿ ಹಾಗೂ ಕ್ರೀಡಾ ಪೋಷಕರಾದ ಮುಹಮ್ಮದ್ ಮನ್ಸೂರ್ ಅವರು ತಮ್ಮ ವ್ಯಾವಹಾರಿಕ ಕೌಶಲದಿಂದ ಸಾರಾ ಸಮೂಹವನ್ನು ಹೊಸ ಎತ್ತರಕ್ಕೆ ಏರಿಸಿದ್ದಾರೆ. ಮಹಮ್ಮದ್ ಮನ್ಸೂರ್ ಅವರು ಬಹ್ರೈನ್ ಕ್ರಿಕೆಟ್ ಫೌಂಡೇಶನ್ ಹಾಗೂ ಲೈಫ್ ಎನ್ ಸ್ಟೈಲ್ ನಿಯತಕಾಲಿಕದ ಅಧ್ಯಕ್ಷರಾಗಿದ್ದಾರೆ. ವಿಶ್ವಸಂಸ್ಥೆಯ ಅಧೀನದಲ್ಲಿರುವ ದಿ ಕೌನ್ಸಿಲ್ ಇನ್ ದಿ ವರ್ಲ್ಡ್ ಯೂತ್ ಗ್ರೂಪ್‌ನ ನಿರ್ದೇಶಕರೂ ಆಗಿದ್ದಾರೆ.

ಮುಹಮ್ಮದ್ ಮನ್ಸೂರ್ ಅವರು ಕೆಎಚ್‌ಕೆ ಹೀರೋಸ್ ಫೌಂಡೇಶನ್‌ನ ಉಪಾಧ್ಯಕ್ಷ ಹಾಗೂ ಬಹ್ರೈನ್ ಇಂಡಿಯಾ ಸೊಸೈಟಿಯ ಆಡಳಿತ ಮಂಡಳಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಅವರ ಬಹುಮುಖ ಕೆಲಸವು ಪ್ರಗತಿ, ಅಭಿವೃದ್ಧಿ ಹಾಗೂ ಅಂತರ್ ಸಾಂಸ್ಕೃತಿಕ ಸಂಬಂಧಗಳ ಬಗ್ಗೆ ಅವರಿಗಿರುವ ಬದ್ಧತೆಯನ್ನು ಪ್ರತಿಫಲಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Hot this week

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ರಕ್ತದಾನದಿಂದ ಮಾನವೀಯತೆಯ ಸಂದೇಶ ಸಾರಿದ ಕರ್ನಾಟಕ ಸಂಘ ಶಾರ್ಜಾ

ದುಬೈ: ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ಕರ್ನಾಟಕ ಸಂಘ ಶಾರ್ಜಾ ಮತ್ತು...

ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್‌ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಸಲಾಲ(ಒಮಾನ್): ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್ ನಲ್ಲಿ ಬ್ಯಾರೀಸ್ ಕಮ್ಯುನಿಟಿ...

ಭಾರತದ 80ನೇ ಸ್ವಾತಂತ್ರ್ಯೋತ್ಸವದಲ್ಲಿ ಕರ್ನಾಟಕ ಸಂಘ ಖತರ್‌ನ ಅದ್ದೂರಿ ಭಾಗವಹಿಸುವಿಕೆ

ದೋಹಾ(ಖತರ್): ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಾರತೀಯ ರಾಯಭಾರ ಕಚೇರಿ ದೋಹಾ...

ಬಹರೈನ್; ಆಗಸ್ಟ್ 21ರಂದು ‘ಕೆಸಿಎಫ್’ನಿಂದ ಗ್ರ್ಯಾಂಡ್ ಮೀಲಾದ್ ಕಾನ್ಫರೆನ್ಸ್

ಮನಾಮ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ...

Related Articles

Popular Categories