ಇತರೆಕೆನಡಾದಲ್ಲಿ ಮಂಗಳೂರಿನ ಕನ್ನಡಿಗರ ಹೊಸ ಸಾಹಸ: 'ಬ್ಯಾರೀಸ್ ಸೂಪರ್...

ಕೆನಡಾದಲ್ಲಿ ಮಂಗಳೂರಿನ ಕನ್ನಡಿಗರ ಹೊಸ ಸಾಹಸ: ‘ಬ್ಯಾರೀಸ್ ಸೂಪರ್ ಮಾರ್ಕೆಟ್’ ಶುಭಾರಂಭ

ಒಂಟಾರಿಯೊ(ಕೆನಡಾ): ಇಲ್ಲಿನ ಒಂಟಾರಿಯೊದಲ್ಲಿನ ಮಿಸಿಸವುಗದಲ್ಲಿ ಮಂಗಳೂರಿನ 3 ಮಂದಿ ಬ್ಯಾರಿ ಯುವಕರು ಆರಂಭಿಸಿರುವ ‘ಬ್ಯಾರೀಸ್ ಸೂಪರ್ ಮಾರ್ಕೆಟ್’ ಫೆಬ್ರವರಿ 1ರಂದು ಅದ್ದೂರಿಯಾಗಿ ಶುಭಾರಂಭಗೊಂಡಿತು. ಈ ಶುಭಾರಂಭಕ್ಕೆ ಅಲ್ಲಿನ ಗಣ್ಯರು ಹಾಗೂ ಸ್ಥಳೀಯರು ಸಾಕ್ಷಿಯಾದರು.

‘ಬ್ಯಾರೀಸ್ ಸೂಪರ್ ಮಾರ್ಕೆಟ್’ನ್ನು ಮಿಸ್ಸಿಸುವಗ-ಎರಿನ್ ಮಿಲ್ಸ್ ನ ಸಂಸತ್ ಸದಸ್ಯೆ ಇಕ್ರಾ ಖಾಲಿದ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸ್ಥಳೀಯ ಜನತೆಯ ಅಗತ್ಯಗಳನ್ನು ಪೂರೈಸುವಲ್ಲಿ ಬ್ಯಾರೀಸ್ ಸೂಪರ್ ಮಾರ್ಕೆಟ್ ನ ಬದ್ಧತೆ ಬಗ್ಗೆ ಶ್ಲಾಘಿಸಿ, ನೂತನ ಮಳಿಗೆಗೆ ಶುಭ ಹಾರೈಸಿದರು.

ಉತ್ತರ ಅಮೆರಿಕ ಮುಸ್ಲಿಂ ಸಮುದಾಯದ ಗಣ್ಯರಾದ ಡಾ.ಅಬ್ದಲ್ಲಾ ಇದ್ರಿಸ್ ಅಲಿ ಅವರು ಈ ವೇಳೆ ಉಪಸ್ಥಿತರಿದ್ದರು. ಟೊರೊಂಟೊದಲ್ಲಿನ ಪ್ರಪ್ರಥಮ ಪೂರ್ಣಾವಧಿಯ ಇಸ್ಲಾಮಿಕ್ ಶಾಲೆ ಇಸ್ನಾದ ಸ್ಥಾಪಕರಾದ ಡಾ.ಅಲಿ ಅವರು ಮೂವರು ಯುವಕರ ಈ ಹೊಸ ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಶುಭ ಕೋರಿದರು. ಅವರೊಂದಿಗೆ ಇಸ್ನಾದ ಇಮಾಂ ಆದ ಶೇಖ್ ಹೊಸಾಂ ಹಿಲಾಲ್ ಸಮಾರಂಭದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಹಾಲ್ಟನ್ ಸರಕಾರಿ ಸಂಬಂಧಗಳ ಪ್ರಾಂಶುಪಾಲರು ಹಾಗೂ ಮಾಜಿ ಓಕ್ ವಿಲ್ಲೆ ಪ್ರಾಂತೀಯ ಕೌನ್ಸಿಲರ್ ಸ್ಟೀಫನ್ ಸ್ಪಾರ್ಲಿಂಗ್ ಉಪಸ್ಥಿತರಿದ್ದರು.

ಅಸಾಧಾರಣ ಸಾರ್ವಜನಿಕ ಸೇವೆ ಹಾಗೂ ಸಾಮುದಾಯಿಕ ವಕಾಲತ್ತಿಗಾಗಿ ಕೆನಡಾ ಹೌಸ್ ಆಫ್ ಕಾಮನ್ಸ್ ನ ವಿಶೇಷ ಮಾನ್ಯತಾ ಪ್ರಶಸ್ತಿಯನ್ನು ‘ಬ್ಯಾರೀಸ್ ಸೂಪರ್ ಮಾರ್ಕೆಟ್’ಗೆ ನೀಡಿ ಇಕ್ರಾ ಖಾಲಿದ್ ಗೌರವಿಸಿದರು.

ಕಾರ್ಯಕ್ರಮದಲ್ಲಿ ಐಕ್ಯತೆ ಹಾಗೂ ಸಂಭ್ರಮಾಚರಣೆಯ ಸ್ಪೂರ್ತಿಯೊಂದಿಗೆ ಕೆನಡಾದಲ್ಲಿ ನೆಲೆಸಿರುವ ಬ್ಯಾರಿ, ತುಳು, ಕೊಂಕಣಿ ಹಾಗೂ ಮಂಗಳೂರಿನ ಇತರ ಸಮುದಾಯಗಳ ಜನರು ಪಾಲ್ಗೊಂಡಿದ್ದರು.

ಬ್ಯಾರೀಸ್ ಸೂಪರ್ ಮಾರ್ಕೆಟ್ ನ ಪ್ರಾರಂಭವು ಕೇವಲ ವಾಣಿಜ್ಯ ಮಳಿಗೆಗಿಂತ ಮಹತ್ವದ್ದಾಗಿದ್ದು, ಅದು ವೈವಿಧ್ಯತೆ, ಒಳಗೊಳ್ಳುವಿಕೆ ಹಾಗೂ ಸಾಮುದಾಯಿಕ ಅಭಿವೃದ್ಧಿಯ ಬದ್ಧತೆಯನ್ನು ಹೊಂದಿದೆ. ಬ್ಯಾರೀಸ್ ಸೂಪರ್ ಮಾರ್ಕೆಟ್ ತನ್ನ ಪಯಣ ಪ್ರಾರಂಭಿಸಿದ್ದು, ಅದು ಕೇವಲ ಶಾಪಿಂಗ್ ತಾಣವಾಗುವ ಬದಲು, ಎಲ್ಲರೂ ತಮ್ಮ ಮನೆಯೆಂದೇ ಭಾವಿಸುವಂಥ ಆಹ್ಲಾದಕರ ಸಾಮುದಾಯಿಕ ಸ್ಥಳವನ್ನಾಗಿಸುವ ಗುರಿ ಹೊಂದಿದೆ ಎಂದು ಅದರ ಪಾಲುದಾರರಾದ ಹಫೀಝ್ ಅಬ್ದುಲ್ ಖಾದರ್, ಮುನೀರ್ ಅಹ್ಮದ್ ಹಾಗೂ ಹಾಶಿಮ್ ಅಶ್ರಫ್ ಈ ವೇಳೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

Hot this week

ನಾಳೆ ಒಮಾನಿನಲ್ಲಿ ‘ಮಸ್ಕತ್ ಗಡಿನಾಡ ಉತ್ಸವ-2025’ ಸಾಂಸ್ಕೃತಿಕ ಕಾರ್ಯಕ್ರಮ; ಆಮಂತ್ರಣ ಪತ್ರಿಕೆ ಅನಾವರಣ

ಮಸ್ಕತ್: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು, ಒಮಾನ್ ಘಟಕ ಮಸ್ಕತ್...

ತವರು ಪ್ರೇಮ ಮೆರೆದ ಹುಬ್ಬಳ್ಳಿ ಮೂಲದ ಕನ್ನಡಿಗ; ಲಂಡನಿನಲ್ಲಿ ತನ್ನ ಹೊಸ ‘ಟೆಸ್ಲಾ’ ಕಾರಿಗೆ ಧಾರವಾಡ ರಿಜಿಸ್ಟ್ರೇಷನ್ ಸಂಖ್ಯೆ!

ಲಂಡನ್: ವಿದೇಶದಲ್ಲಿದ್ದುಕೊಂಡು ತಮ್ಮ ತವರು ನಗರದೊಂದಿಗಿನ ಭಾವನಾತ್ಮಕ ಸಂಪರ್ಕವನ್ನು ಜೀವಂತವಾಗಿಡಲು ಇಲ್ಲೊಬ್ಬ...

Veteran expat Abdulaziz Kushalnagar passes away in Riyadh

Riyadh: Abdulaziz Kushalnagar, a long-time Indian expatriate from Kushalnagar...

ನಾಳೆ ದುಬೈನಲ್ಲಿ ‘ಗ್ಲೋಬಲ್ ಮೀಡಿಯಾ ಐಕನ್ ಪ್ರಶಸ್ತಿ 2025’ ಪ್ರದಾನ; ಭಾಗವಹಿಸಲಿರುವ ಸಚಿವರು-ಸ್ಯಾಂಡಲ್‌ವುಡ್ ತಾರೆಯರ ದಂಡು

ದುಬೈ: ಕರ್ನಾಟಕ ಮೀಡಿಯಾ ಜರ್ನಲಿಸ್ಟ್‌ ಯೂನಿಯನ್‌(KMJU) ಆಶ್ರಯದಲ್ಲಿ 'ಗ್ಲೋಬಲ್ ಮೀಡಿಯಾ ಐಕನ್...

Related Articles

Popular Categories