ಯುಎಇಅಬ್ದುಲ್ಲ ಮಾದುಮೂಲೆಗೆ ಅಬುಧಾಬಿಯಲ್ಲಿ ಅದ್ಧೂರಿ ಬೀಳ್ಕೊಡುಗೆ

ಅಬ್ದುಲ್ಲ ಮಾದುಮೂಲೆಗೆ ಅಬುಧಾಬಿಯಲ್ಲಿ ಅದ್ಧೂರಿ ಬೀಳ್ಕೊಡುಗೆ

ಅಬುಧಾಬಿ: ಇಪ್ಪತ್ತೈದು ವರ್ಷಗಳ ದೀರ್ಘಕಾಲ ಅನಿವಾಸಿ ಜೀವನವನ್ನು ಕೊನೆಗೊಳಿಸಿ ತಾಯ್ನಾಡಿಗೆ ಮರಳುತ್ತಿರುವ ಸಾಮಾಜಿಕ ಮುಂದಾಳು, ಝಾಎದ್ ಫೌಂಡೇಶನ್ ಅಬುಧಾಬಿ ಇದರ ಆರ್ಥಿಕ ತಜ್ಞ , ಇಂಡಿಯನ್ ಸ್ಕೂಲ್ ಅಬುಧಾಬಿ ಇದರ ಬೋರ್ಡ್ ಸದಸ್ಯರೂ ಆಗಿದ್ದ ಅಬ್ದುಲ್ಲ ಮಾದುಮೂಲೆಯವರಿಗೆ ಅನಿವಾಸಿ ಕನ್ನಡಿಗ ಸಂಘಟನೆಯಾದ ಕೆಸಿಎಫ್ ಯುಎಇ ಇದರ ವತಿಯಿಂದ ಅದ್ಧೂರಿ ಬೀಳ್ಕೊಡುಗೆ ಸಮಾರಂಭವನ್ನು ಕೆಸಿಎಫ್ ಅಬುಧಾಬಿ ಕಚೇರಿಯಲ್ಲಿ ನಡೆಸಲಾಯ್ತು.

ಹಸೈನಾರ್ ಅಮಾನಿಯವರ ಅಧ್ಯಕ್ಷತೆಯಲ್ಲಿ ಪ್ರಾರಂಭಗೊಂಡ ಪ್ರಸ್ತುತ ಕಾರ್ಯಕ್ರಮದಲ್ಲಿ ಕೆಸಿಎಫ್ ಅಂತರ್‌ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಅಬ್ದುಲ್ ಹಮೀದ್ ಪಿಎಂಎಚ್, ಹಕೀಂ ತುರ್ಕಳಿಕೆ, ಕೆ ಎಚ್ ಸಖಾಫಿ ಮೊದಲಾದವರು ಮಾತನಾಡಿದರು.

ಸಂಘಟನೆಯ ಗೌರವ ಸ್ಮರಣಕೆಗಳನ್ನು ಸ್ವೀಕರಿಸಿದ ಅಬ್ದುಲ್ಲ ಮಾದುಮೂಲೆಯವರು ಕೆಸಿಎಫ್ ನ ಸಾಮಾಜಿಕ ಸಾಂಸ್ಕೃತಿಕ ಸೇವಾ ಚಟುವಟಿಕೆಯೊಂದಿಗಿನ ಅಭಿಮಾನವನ್ನು ಹಾಗೂ ಉತ್ತರ ಕರ್ನಾಟಕದಲ್ಲಿ ನಡೆಸಿಕೊಂಡು ಬರುತ್ತಿರುವ ಶೈಕ್ಷಣಿಕ ಕ್ರಾಂತಿಯನ್ನೂ ಅಭಿನಂದಿಸಿ ಮಾತನಾಡಿದರು. ಅದೇ ರೀತಿ ಸಮುದಾಯದ ಹಕ್ಕುಗಳ ರಕ್ಷಣೆಗೆ ವಿದ್ಯಾಭ್ಯಾಸ ಒಂದೇ ದಾರಿ, ಆದುದರಿಂದ ಯುವ ಸಮೂಹವು ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕಾಗಿದೆ ಎಂದರು.

ಕಬೀರ್ ಬಾಯಂಬಾಡಿ ಸ್ವಾಗತಿಸಿದರು. ಉಮರ್ ಈಶ್ವರಮಂಗಲ ವಂದಿಸಿದರು.

Hot this week

ಬಹರೈನ್: ಯಕ್ಷಗುರು ದೀಪಕ್ ರಾವ್ ಪೇಜಾವರರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಬಹರೈನ್: ಕಳೆದ ಒಂದು ದಶಕದಿಂದ ಬಹರೈನ್ ದ್ವೀಪರಾಷ್ಟ್ರದಲ್ಲಿ ನೆಲೆಸಿರುವ ಖ್ಯಾತ ಯಕ್ಷಗಾನ...

ನ್ಯೂಯಾರ್ಕ್ ಮೇಯರ್ ಆಗಿ ಭಾರತೀಯ ಮೂಲದ ಝೊಹ್ರಾನ್ ಮಮ್ದಾನಿ ಆಯ್ಕೆ ಸಂಭವ; ಗೆದ್ದರೆ, ಹಲವು ಇತಿಹಾಸ ಸೃಷ್ಟಿ!

ಜೂನ್ 24 ರಂದು ನಡೆದ ನ್ಯೂಯಾರ್ಕ್ ಮೇಯರ್ ಹುದ್ದೆಗೆ ಪಕ್ಷಗಳ ಅಭ್ಯರ್ಥಿಯ...

ಗಲ್ಫ್‌ನಲ್ಲಿ ಮತ್ತೆ ಕವಿದ ಯುದ್ಧದ ಕಾರ್ಮೋಡ; ವಲಸಿಗರನ್ನು ಕಾಡುತ್ತಿವೆ 1991ರ ಕೊಲ್ಲಿ ಯುದ್ಧದ ಕಹಿ ನೆನಪುಗಳು…!

ಇರಾನ್-ಇಸ್ರೇಲ್ ದಾಳಿಯಲ್ಲಿ ಅಮೇರಿಕ ನೇರವಾಗಿ ಭಾಗವಹಿಸುತ್ತಿರುವುದರಿಂದ , ಅಮೇರಿಕದ ಮಿತ್ರ ರಾಷ್ಟ್ರಗಳಾದ...

ಜೂನ್ 29ರಂದು ಯುಎಇ ಯಕ್ಷಗಾನ ಅಭ್ಯಾಸ ಕೇಂದ್ರದ ದಶಮಾನೋತ್ಸವ: 7 ಮಂದಿ ಸಾಧಕರಿಗೆ-ಮೂರು ಸಾಧಕ ಸಂಸ್ಥೆಗಳಿಗೆ ಸನ್ಮಾನ

ದುಬೈ:ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಕಾರ್ಯಕ್ರಮವು ಜೂನ್ 29ರಂದು...

Related Articles

Popular Categories