ಯುಎಸ್‌ಎಅಟ್ಲಾಂಟ ಕನ್ನಡಿಗರಿಂದ ಸಂಭ್ರಮದ ಸಂಕ್ರಾಂತಿ ಕಾರ್ಯಕ್ರಮ

ಅಟ್ಲಾಂಟ ಕನ್ನಡಿಗರಿಂದ ಸಂಭ್ರಮದ ಸಂಕ್ರಾಂತಿ ಕಾರ್ಯಕ್ರಮ

ಅಟ್ಲಾಂಟ: ಅಟ್ಲಾಂಟಾದ ಕನ್ನಡಿಗರ ನೃಪತುಂಗ ಕನ್ನಡ ಕೂಟ ಆಯೋಜಿಸಿದ್ದ ಸಂಕ್ರಾಂತಿ ಹಬ್ಬದ ಕಾರ್ಯಕ್ರಮಗಳು ಫೆ. 8 ಶನಿವಾರ ಜಾರ್ಜಿಯಾದ ಅಟ್ಲಾಂಟಾದಲ್ಲಿ ನಡೆಯಿತು.    

ರಂಗೋಲಿ ಸ್ಪರ್ಧೆ, ಚಿಣ್ಣರಿಂದ ಚಿತ್ರ ಬಿಡಿಸುವ ಸ್ಪರ್ಧೆ, ಚೆಸ್ ಸ್ಪರ್ಧೆ, ಪ್ರಶ್ನಾವಳಿ ಸ್ಪರ್ಧೆ, ಅಂತಾಕ್ಷರಿ, ಗಾಯನ, ನೃತ್ಯ ಹೀಗೆ ಹಲವು ಸ್ಪರ್ಧೆಗಳಿದ್ದವು.

ಕರ್ನಾಟಕದಿಂದ ಬಂದಿದ್ದ ರಾಘವೇಂದ್ರ ಆಚಾರ್ಯ ಅವರ ಸ್ಟ್ಯಾಂಡ್ ಅಪ್ ಕಾಮೆಡಿ ಹಾಗೂ ಅಟ್ಲಾಂಟದ ಕನ್ನಡತಿ ಮಹಿಮಾ ಹೊಳ್ಳ ಅವರು ಅದ್ಭುತ ಭರತನಾಟ್ಯ ಪ್ರದರ್ಶನ ನಡೆಯಿತು.  

ಇದೇ ಸಂದರ್ಭದಲ್ಲಿ ಅಟ್ಲಾಂಟ ನಗರದ ವಿವಿಧ ಭಾಗದಲ್ಲಿ ಸ್ವಯಂ ಸೇವಾ ಮನೋಭಾವದಿಂದ ವಾರಾಂತ್ಯದಲ್ಲಿ ಮಕ್ಕಳಿಗೆ ಕನ್ನಡ ಕಲಿಸುವ ಸುಮಾರು 10 ಕನ್ನಡ ಶಾಲೆಗಳನ್ನು ನಡೆಸುವ ಎಲ್ಲಾ ಶಿಕ್ಷಕರನ್ನೂ ಗೌರವಿಸಲಾಯಿತು.

ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದ ಕನ್ನಡ ಕೂಟ ತಂಡದಿಂದ ಉತ್ತಮ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Hot this week

ನಾಳೆ ಒಮಾನಿನಲ್ಲಿ ‘ಮಸ್ಕತ್ ಗಡಿನಾಡ ಉತ್ಸವ-2025’ ಸಾಂಸ್ಕೃತಿಕ ಕಾರ್ಯಕ್ರಮ; ಆಮಂತ್ರಣ ಪತ್ರಿಕೆ ಅನಾವರಣ

ಮಸ್ಕತ್: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು, ಒಮಾನ್ ಘಟಕ ಮಸ್ಕತ್...

ತವರು ಪ್ರೇಮ ಮೆರೆದ ಹುಬ್ಬಳ್ಳಿ ಮೂಲದ ಕನ್ನಡಿಗ; ಲಂಡನಿನಲ್ಲಿ ತನ್ನ ಹೊಸ ‘ಟೆಸ್ಲಾ’ ಕಾರಿಗೆ ಧಾರವಾಡ ರಿಜಿಸ್ಟ್ರೇಷನ್ ಸಂಖ್ಯೆ!

ಲಂಡನ್: ವಿದೇಶದಲ್ಲಿದ್ದುಕೊಂಡು ತಮ್ಮ ತವರು ನಗರದೊಂದಿಗಿನ ಭಾವನಾತ್ಮಕ ಸಂಪರ್ಕವನ್ನು ಜೀವಂತವಾಗಿಡಲು ಇಲ್ಲೊಬ್ಬ...

Veteran expat Abdulaziz Kushalnagar passes away in Riyadh

Riyadh: Abdulaziz Kushalnagar, a long-time Indian expatriate from Kushalnagar...

ನಾಳೆ ದುಬೈನಲ್ಲಿ ‘ಗ್ಲೋಬಲ್ ಮೀಡಿಯಾ ಐಕನ್ ಪ್ರಶಸ್ತಿ 2025’ ಪ್ರದಾನ; ಭಾಗವಹಿಸಲಿರುವ ಸಚಿವರು-ಸ್ಯಾಂಡಲ್‌ವುಡ್ ತಾರೆಯರ ದಂಡು

ದುಬೈ: ಕರ್ನಾಟಕ ಮೀಡಿಯಾ ಜರ್ನಲಿಸ್ಟ್‌ ಯೂನಿಯನ್‌(KMJU) ಆಶ್ರಯದಲ್ಲಿ 'ಗ್ಲೋಬಲ್ ಮೀಡಿಯಾ ಐಕನ್...

Related Articles

Popular Categories