ಯುಎಸ್‌ಎಅಟ್ಲಾಂಟ ಕನ್ನಡಿಗರಿಂದ ಸಂಭ್ರಮದ ಸಂಕ್ರಾಂತಿ ಕಾರ್ಯಕ್ರಮ

ಅಟ್ಲಾಂಟ ಕನ್ನಡಿಗರಿಂದ ಸಂಭ್ರಮದ ಸಂಕ್ರಾಂತಿ ಕಾರ್ಯಕ್ರಮ

ಅಟ್ಲಾಂಟ: ಅಟ್ಲಾಂಟಾದ ಕನ್ನಡಿಗರ ನೃಪತುಂಗ ಕನ್ನಡ ಕೂಟ ಆಯೋಜಿಸಿದ್ದ ಸಂಕ್ರಾಂತಿ ಹಬ್ಬದ ಕಾರ್ಯಕ್ರಮಗಳು ಫೆ. 8 ಶನಿವಾರ ಜಾರ್ಜಿಯಾದ ಅಟ್ಲಾಂಟಾದಲ್ಲಿ ನಡೆಯಿತು.    

ರಂಗೋಲಿ ಸ್ಪರ್ಧೆ, ಚಿಣ್ಣರಿಂದ ಚಿತ್ರ ಬಿಡಿಸುವ ಸ್ಪರ್ಧೆ, ಚೆಸ್ ಸ್ಪರ್ಧೆ, ಪ್ರಶ್ನಾವಳಿ ಸ್ಪರ್ಧೆ, ಅಂತಾಕ್ಷರಿ, ಗಾಯನ, ನೃತ್ಯ ಹೀಗೆ ಹಲವು ಸ್ಪರ್ಧೆಗಳಿದ್ದವು.

ಕರ್ನಾಟಕದಿಂದ ಬಂದಿದ್ದ ರಾಘವೇಂದ್ರ ಆಚಾರ್ಯ ಅವರ ಸ್ಟ್ಯಾಂಡ್ ಅಪ್ ಕಾಮೆಡಿ ಹಾಗೂ ಅಟ್ಲಾಂಟದ ಕನ್ನಡತಿ ಮಹಿಮಾ ಹೊಳ್ಳ ಅವರು ಅದ್ಭುತ ಭರತನಾಟ್ಯ ಪ್ರದರ್ಶನ ನಡೆಯಿತು.  

ಇದೇ ಸಂದರ್ಭದಲ್ಲಿ ಅಟ್ಲಾಂಟ ನಗರದ ವಿವಿಧ ಭಾಗದಲ್ಲಿ ಸ್ವಯಂ ಸೇವಾ ಮನೋಭಾವದಿಂದ ವಾರಾಂತ್ಯದಲ್ಲಿ ಮಕ್ಕಳಿಗೆ ಕನ್ನಡ ಕಲಿಸುವ ಸುಮಾರು 10 ಕನ್ನಡ ಶಾಲೆಗಳನ್ನು ನಡೆಸುವ ಎಲ್ಲಾ ಶಿಕ್ಷಕರನ್ನೂ ಗೌರವಿಸಲಾಯಿತು.

ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದ ಕನ್ನಡ ಕೂಟ ತಂಡದಿಂದ ಉತ್ತಮ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Hot this week

ಅಬುಧಾಬಿಗೆ ಸಚಿವ ಡಾ.ಜೈಶಂಕರ್ ಭೇಟಿ; ಕನ್ನಡಿಗರ ಕೂಟ ದುಬೈ-ಅಬುಧಾಬಿ ಕರ್ನಾಟಕ ಸಂಘ ಪ್ರತಿನಿಧಿತ್ವ

ಅಬುಧಾಬಿ: ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು...

ದುಬೈ; ‘ಬ್ಯಾರೀಸ್ ಪ್ರೀಮಿಯರ್ ಲೀಗ್-2026’ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕ್ರೌನ್ ಹೊನ್ನಾವರ; ನಫೀಸ್ ಗ್ರೂಪ್ ರನ್ನರ್ ಅಪ್

ದುಬೈ: ಶಾರ್ಜಾದ ಬಿಜೋಯ್ಸ್ ಕ್ರಿಕೆಟ್ ಕ್ರೀಡಾಗಂಣದಲ್ಲಿ ರವಿವಾರ ನಡೆದ 'ಬ್ಯಾರೀಸ್ ಪ್ರೀಮಿಯರ್...

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಆಯ್ಕೆ

ದುಬೈ: ಕರ್ನಾಟಕ ಸಂಘ ಶಾರ್ಜಾ ಇದರ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ...

ರಮಝಾನ್-ಈದುಲ್ ಫಿತ್ರ್ ಅಂಗವಾಗಿ ಕನ್ನಡ ಸಂಘ ಬಹರೈನ್ ವತಿಯಿಂದ ಆಹಾರ ವಸ್ತುಗಳ ಕಿಟ್ ವಿತರಣೆ

ಬಹರೈನ್: ಪವಿತ್ರ ರಮಝಾನ್ ಮತ್ತು ಈದುಲ್ ಫಿತ್ರ್ ಹಬ್ಬದ ಅಂಗವಾಗಿ ಪ್ರಸ್ತುತ...

Related Articles

Popular Categories