ಇತರೆಹಜ್ ಯಾತ್ರೆಯ ಸಂದರ್ಭ 1,300 ಮಂದಿ ಮೃತ್ಯು: ವರದಿ

ಹಜ್ ಯಾತ್ರೆಯ ಸಂದರ್ಭ 1,300 ಮಂದಿ ಮೃತ್ಯು: ವರದಿ

ರಿಯಾದ್ : ಈ ವರ್ಷದ ಹಜ್ ಯಾತ್ರೆಯ ಸಂದರ್ಭದಲ್ಲಿ ಬಿಸಿಲ ಬೇಗೆ ಹಾಗೂ ಶಾಖ ಸಂಬಂಧಿತ ಸಮಸ್ಯೆಗಳಿಂದ 1,300ಕ್ಕೂ ಅಧಿಕ ಹಜ್ ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಸೌದಿ ಅರೆಬಿಯಾ ಸೋಮವಾರ ದೃಢಪಡಿಸಿದೆ.

ಸಾವನ್ನಪ್ಪಿದವರಲ್ಲಿ ಅಮೆರಿಕ, ಇಂಡೊನೇಶ್ಯಾ, ಭಾರತ, ಈಜಿಪ್ಟ್, ಜೋರ್ಡಾನ್ ಸೇರಿದಂತೆ 10 ದೇಶಗಳ ಯಾತ್ರಾರ್ಥಿಗಳು ಸೇರಿದ್ದಾರೆ. `ಈ ವರ್ಷ 1,75,000 ಭಾರತೀಯರು ಹಜ್‍ಗೆ ಭೇಟಿ ನೀಡಿದ್ದು ಯಾತ್ರೆಯ ಸಂದರ್ಭ ನೈಸರ್ಗಿಕ ಕಾರಣಗಳಿಂದ 98 ಭಾರತೀಯರು ಮರಣ ಹೊಂದಿದ್ದಾರೆ’ ಎಂದು ಭಾರತದ ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್ ಕಳೆದ ವಾರ ಸುದ್ಧಿಗೋಷ್ಟಿಯಲ್ಲಿ ಹೇಳಿದ್ದರು. ಹವಾಮಾನ ಬದಲಾವಣೆಯಿಂದ ಹಜ್ ಯಾತ್ರಾರ್ಥಿಗಳು ತೀವ್ರ ಪರಿಣಾಮ ಎದುರಿಸುತ್ತಿದ್ದಾರೆ. ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸುವ ಸ್ಥಳದಲ್ಲಿ ಪ್ರತೀ ದಶಕದಲ್ಲಿ 0.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಏರಿದೆ ಎಂದು ಅಧ್ಯಯನ ವರದಿಯೊಂದು ಹೇಳಿದೆ.

Hot this week

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಆಯ್ಕೆ

ದುಬೈ: ಕರ್ನಾಟಕ ಸಂಘ ಶಾರ್ಜಾ ಇದರ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ...

ರಮಝಾನ್-ಈದುಲ್ ಫಿತ್ರ್ ಅಂಗವಾಗಿ ಕನ್ನಡ ಸಂಘ ಬಹರೈನ್ ವತಿಯಿಂದ ಆಹಾರ ವಸ್ತುಗಳ ಕಿಟ್ ವಿತರಣೆ

ಬಹರೈನ್: ಪವಿತ್ರ ರಮಝಾನ್ ಮತ್ತು ಈದುಲ್ ಫಿತ್ರ್ ಹಬ್ಬದ ಅಂಗವಾಗಿ ಪ್ರಸ್ತುತ...

400 ಭಾರತೀಯರನ್ನು ತಾಯ್ನಾಡಿಗೆ ಕಳುಹಿಸಿದ ಬಹರೈನ್ ಕನ್ನಡ ಸಂಘ!

ಬಹರೈನ್: ತಾಯ್ನಾಡಿಗೆ ಮರಳಲು ಬಯಸಿದ ಸುಮಾರು 400 ಭಾರತೀಯರಿಗೆ ಕನ್ನಡ ಸಂಘ...

ಗಲ್ಫ್ ಸಂಘರ್ಷದ ನಡುವೆಯೂ ಪ್ರಯಾಣಿಕರಿಗೆ ‘ಓಯಸಿಸ್’ ಆಗಿರುವ ಒಮಾನ್!

ಮಸ್ಕತ್: ಇರಾನ್–ಅಮೇರಿಕ ಸಂಘರ್ಷದ ಪರಿಣಾಮವಾಗಿ ಮಧ್ಯಪ್ರಾಚ್ಯದ ವಾಯುಪ್ರದೇಶದಲ್ಲಿ ಅನಿಶ್ಚಿತತೆ ಉಂಟಾದ ಹಿನ್ನೆಲೆಯಲ್ಲಿ...

ಜರ್ಮನಿ; ರೈನ್ ಮೈನ್ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಲೋಕನಾಥ ರಾವ್ ಚೌಹಾಣ್ ಆಯ್ಕೆ

ಜರ್ಮನಿ: ರೈನ್ ಮೈನ್ ಕನ್ನಡ ಸಂಘದ ವಾರ್ಷಿಕ ಸಭೆಯು ಇತ್ತೀಚೆಗೆ ಜರ್ಮನಿಯ...

Related Articles

Popular Categories