ಕುವೈತ್ಕುವೈತ್‌: ಅಗ್ನಿ ಅವಘಡದಲ್ಲಿ ಕೇರಳ ಮೂಲದ ಒಂದೇ ಕುಟುಂಬದ...

ಕುವೈತ್‌: ಅಗ್ನಿ ಅವಘಡದಲ್ಲಿ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಮೃತ್ಯು

ಕುವೈತ್‌: ಕುವೈತ್‌ನ ಅಬ್ಬಸ್ಸಿಯಾ ಎಂಬಲ್ಲಿನ ತಮ್ಮ ನಿವಾಸದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕೇರಳದ ಪಟ್ಟಣಂತಿಟ್ಟ ಮೂಲದ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಮೃತರನ್ನು ಮ್ಯಾಥ್ಯೂ ಮುಝಕ್ಕಲ್‌, ಅವರ ಪತ್ನಿ ಲಿನಿ ಅಬ್ರಹಾಂ ಮತ್ತು ಮಕ್ಕಳಾದ ಐಸಾಕ್‌ ಮತ್ತು ಎರಿನ್‌ ಎಂದು ಗುರುತಿಸಾಗಿದೆ.

ರಜೆಯನ್ನು ತಮ್ಮ ಊರಾದ ನೆಡುಂಬಸ್ಸೆರಿಯಲ್ಲಿ ಕಳೆದು ಗುರುವಾರ ರಾತ್ರಿಯಷ್ಟೇ ಕುಟುಂಬ ಕುವೈತ್‌ಗೆ ಮರಳಿತ್ತು. ಮ್ಯಾಥ್ಯೂ ಕುವೈತ್‌ನಲ್ಲಿ 15 ವರ್ಷಗಳಿಂದ ಉದ್ಯೋಗದಲ್ಲಿದ್ದರು. ಪತ್ನಿ ನರ್ಸ್‌ ಆಗಿದ್ದರು, ಮಕ್ಕಳೂ ಕುವೈತ್‌ನ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಕೊಠಡಿಯಲ್ಲಿದ್ದ ಎಸಿಯಲ್ಲಿ ಉಂಟಾದ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

Hot this week

ಕನ್ನಡಿಗರ ಕೂಟ ದುಬೈ ವತಿಯಿಂದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್‌ಗೆ ಸನ್ಮಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ತಂಡವು ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ...

ಫ್ಲೋರಿಡಾ ತುಳು ಕೂಟದ 2ನೇ ವಾರ್ಷಿಕ ಪೊಟ್ಲಕ್ ಪಿಕ್ನಿಕ್ ಸಂಭ್ರಮ

ಅಮೇರಿಕದ ಫ್ಲೋರಿಡಾ ತುಳು ಕೂಟವು ಇತ್ತೀಚೆಗೆ ಕ್ಯಾಸೆಲ್‌ಬೆರ್ರಿ ಒರ್ಲಾಂಡೊದಲ್ಲಿ ತನ್ನ ಎರಡನೇ...

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ರಕ್ತದಾನದಿಂದ ಮಾನವೀಯತೆಯ ಸಂದೇಶ ಸಾರಿದ ಕರ್ನಾಟಕ ಸಂಘ ಶಾರ್ಜಾ

ದುಬೈ: ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ಕರ್ನಾಟಕ ಸಂಘ ಶಾರ್ಜಾ ಮತ್ತು...

ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್‌ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಸಲಾಲ(ಒಮಾನ್): ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್ ನಲ್ಲಿ ಬ್ಯಾರೀಸ್ ಕಮ್ಯುನಿಟಿ...

Related Articles

Popular Categories