ಸೌದಿ ಅರೇಬಿಯಾಜಿದ್ದಾ ವಿಮಾನ ನಿಲ್ದಾಣದಲ್ಲಿ ಮಂಗಳೂರಿಗೆ ಹೊರಟಿದ್ದ ವ್ಯಕ್ತಿ ಹೃದಯಾಘಾತದಿಂದ...

ಜಿದ್ದಾ ವಿಮಾನ ನಿಲ್ದಾಣದಲ್ಲಿ ಮಂಗಳೂರಿಗೆ ಹೊರಟಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

ಸೌದಿ: ಗುರುವಾರ ರಾತ್ರಿ ಜಿದ್ದಾದಿಂದ ಮಂಗಳೂರಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಪ್ರಯಾಣಿಸಬೇಕಿದ್ದ ಬೆಳ್ತಂಗಡಿಯ ಹಿದಾಯತ್ ಎಂಬವರು ಜಿದ್ದಾ ವಿಮಾನ ನಿಲ್ದಾಣದಲ್ಲಿಯೇ ಹೃದಯಾಘಾತದಿಂದ ಮೃತರಾಗಿರುವ ಘಟನೆ ವರದಿಯಾಗಿದೆ.

ನಿನ್ನೆ ರಾತ್ರಿ 8:10ರ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಬೇಕಿದ್ದ ಬೆಳ್ತಂಗಡಿ ಸಂಜಯನಗರ ನಿವಾಸಿ ಹಿದಾಯತ್ ಗೆ, ಜಿದ್ದಾ ಏರ್ ಪೋರ್ಟ್ ತಲುಪುತ್ತಿದ್ದಂತೆ ಎದೆ ನೋವು ಕಾಣಿಸಿಕೊಂಡಿತು. ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೃತರು ತಂದೆ-ತಾಯಿ, ಪತ್ನಿ ಹಾಗೂ ಒಂದು ಗಂಡು, ಮೂರು ಹೆಣ್ಣು ಮಕ್ಕಳು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Hot this week

ಬಹರೈನ್ ಕನ್ನಡ ಸಂಘದಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಬಹರೈನ್: ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15ರಂದು ಬೆಳಗ್ಗೆ 8:30ಕ್ಕೆ...

ಬಹರೈನ್ ರೇಡಿಯೋ ಆರ್ ಜೆ ಕಮಲಾಕ್ಷ ಅಮೀನ್​ಗೆ ‘ಗೋಲ್ಡನ್ ಐಕಾನಿಕ್ ಅವಾರ್ಡ್’ ಗೌರವ ಪ್ರಶಸ್ತಿ

ಮಂಗಳೂರು: ಬಹರೈನ್ ನ ಕಸ್ತೂರಿ ಕನ್ನಡ ಎಫ್ಎಂ ರೇಡಿಯೋ ಆರ್ ಜೆ...

ಮಸ್ಕತ್‌ನಲ್ಲಿ ‘ಕನ್ನಡ ಭವನ’ ನಿರ್ಮಾಣಕ್ಕೆ ಕರ್ನಾಟಕ ಸರಕಾರದಿಂದ ಆರ್ಥಿಕ ನೆರವು ಬೇಕು: ‘ಮಸ್ಕತ್ ಕನ್ನಡ ಸಂಘ’ದ ಅಧ್ಯಕ್ಷ ಮಂಜುನಾಥ್ ಸಂಗಟಿ

ವಿಶೇಷ ಸಂದರ್ಶನ; ಎಂ.ಇಕ್ಬಾಲ್ ಉಚ್ಚಿಲ, ದುಬೈ ನಿಸರ್ಗ ನಿರ್ಮಿತ ರಮ್ಯ ಮನೋಹರ ತಾಣವಾಗಿರುವ...

Related Articles

Popular Categories