ಕುವೈತ್ಕುವೈತ್ ಅಗ್ನಿ ದುರಂತ | ಕಲಬುರಗಿಯ ವಿಜಯಕುಮಾರ್ ಕುಟುಂಬಕ್ಕೆ...

ಕುವೈತ್ ಅಗ್ನಿ ದುರಂತ | ಕಲಬುರಗಿಯ ವಿಜಯಕುಮಾರ್ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಲು ಸಿಎಂ ಸೂಚನೆ

ಬೆಂಗಳೂರು: ‘ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾಗಿರುವ ಜಿಲ್ಲೆಯ ಆಳಂದ ತಾಲೂಕಿನ ಸರಸಂಬ ಗ್ರಾಮದ 40 ವರ್ಷದ ವಿಜಯ ಕುಮಾರ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿಲ್ಲಿ ಸೂಚನೆ ನೀಡಿದ್ದಾರೆ.

ಕುವೈತ್ ಅಗ್ನಿ ದುರಂತ ಮೃತಪಟ್ಟಿರುವ ಕೇರಳ ನಿವಾಸಿಗಳ ಕುಟಂಬಕ್ಕೆ ಅಲ್ಲಿನ ಸರಕಾರ  5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ. ಅದರಂತೆಯೇ ಕರ್ನಾಟಕ ಸರಕಾರವೂ ಆರ್ಥಿಕ ನೆರವು ಘೋಷಿಸಬೇಕೆಂದು ರಾಜ್ಯ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತ ವಿಜಯಕುಮಾರ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒದಗಿಸಲು ಸೂಚಿಸಿದ್ದಾರೆ ಎಂದು ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.

‘ಭಾರತೀಯರು ಕೆಲಸ ಆರಿಸಿ ಗಲ್ಸ್ ರಾಷ್ಟ್ರಗಳಿಗೆ ವಲಸೆ ಹೋಗುವುದು ಸಾಮಾನ್ಯ. ಜೂ.12ರಂದು ಕುವೈತ್ ಮಾಂಗಾಫ್‍ನಲ್ಲಿರುವ ವಸತಿ ಸಮುಚ್ಚಯವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ದುರಂತದಲ್ಲಿ 45 ಮಂದಿ ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದಾರೆ. ಇದೊಂದು ದುರಾದೃಷ್ಟಕರ ಸಂಗತಿಯಾಗಿದೆ’

ಡಾ.ಆರತಿ ಕೃಷ್ಣ ಉಪಾಧ್ಯಕ್ಷೆ ಅನಿವಾಸಿ ಭಾರತೀಯ ಸಮಿತಿ

Hot this week

ಕನ್ನಡಿಗರ ಕೂಟ ದುಬೈ ವತಿಯಿಂದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್‌ಗೆ ಸನ್ಮಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ತಂಡವು ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ...

ಫ್ಲೋರಿಡಾ ತುಳು ಕೂಟದ 2ನೇ ವಾರ್ಷಿಕ ಪೊಟ್ಲಕ್ ಪಿಕ್ನಿಕ್ ಸಂಭ್ರಮ

ಅಮೇರಿಕದ ಫ್ಲೋರಿಡಾ ತುಳು ಕೂಟವು ಇತ್ತೀಚೆಗೆ ಕ್ಯಾಸೆಲ್‌ಬೆರ್ರಿ ಒರ್ಲಾಂಡೊದಲ್ಲಿ ತನ್ನ ಎರಡನೇ...

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ರಕ್ತದಾನದಿಂದ ಮಾನವೀಯತೆಯ ಸಂದೇಶ ಸಾರಿದ ಕರ್ನಾಟಕ ಸಂಘ ಶಾರ್ಜಾ

ದುಬೈ: ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ಕರ್ನಾಟಕ ಸಂಘ ಶಾರ್ಜಾ ಮತ್ತು...

ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್‌ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಸಲಾಲ(ಒಮಾನ್): ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್ ನಲ್ಲಿ ಬ್ಯಾರೀಸ್ ಕಮ್ಯುನಿಟಿ...

Related Articles

Popular Categories