ಕುವೈತ್ಕುವೈತ್ ಅಗ್ನಿ ದುರಂತ | ಮೃತ ಬಿನೋಯ್ ಕುಟುಂಬಕ್ಕೆ...

ಕುವೈತ್ ಅಗ್ನಿ ದುರಂತ | ಮೃತ ಬಿನೋಯ್ ಕುಟುಂಬಕ್ಕೆ ವಸತಿ ಯೋಜನೆಯಡಿ ಮನೆ ವಿತರಣೆ: ಕೇರಳ ಸರಕಾರ ಭರವಸೆ

ತ್ರಿಶೂರ್ (ಕೇರಳ): ಇತ್ತೀಚೆಗೆ ಕುವೈತ್ ನಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟಿರುವ ಬಿನೋಯ್ ಥಾಮಸ್ ಕುಟುಂಬದ ಸದಸ್ಯರಿಗೆ ಲೈಫ್ ಮಿಷನ್ ವಸತಿ ಯೋಜನೆಯಡಿ ಮನೆ ವಿತರಿಸುವುದಾಗಿ ರವಿವಾರ ಕೇರಳ ಸರಕಾರ ಭರವಸೆ ನೀಡಿದೆ.

ತನ್ನ ಕುಟುಂಬದ ಸದಸ್ಯರಿಗೆ ಉತ್ತಮ ಮನೆ ನಿರ್ಮಿಸುವ ಹಾಗೂ ಅವರ ಜೀವನ ಮಟ್ಟವನ್ನು ಸುಧಾರಿಸುವ ಕನಸಿನೊಂದಿಗೆ ಅಗ್ನಿ ದುರಂತ ಸಂಭವಿಸಿದ ಕೇವಲ ಒಂದು ದಿನದ ಹಿಂದೆಯಷ್ಟೆ ಚವಕ್ಕಡ್ ನಿವಾಸಿಯಾದ ಬಿನೋಯ್ ಥಾಮಸ್ ಕುವೈತ್ ಗೆ ತೆರಳಿದ್ದರು ಎಂದು ಹೇಳಲಾಗಿದೆ.

ಸದ್ಯ ಮೂರು ಸೆಂಟ್ ಅಳತೆಯ ಜಾಗದಲ್ಲಿ ಥಾಮಸ್ ಕುಟುಂಬವು ತಾತ್ಕಾಲಿಕ ಗುಡಿಸಿಲಿನಲ್ಲಿ ವಾಸಿಸುತ್ತಿದೆ.

ಕೇರಳ ಕಂದಾಯ ಸಚಿವ ಕೆ.ರಾಜನ್ ಹಾಗೂ ಸಾಮಾಜಿಕ ನ್ಯಾಯ ಸಚಿವೆ ಆರ್.ಬಿಂದು ಇಬ್ಬರೂ ರವಿವಾರ ಥಾಮಸ್ ಕುಟುಂಬದ ಸದಸ್ಯರನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಿದರು.

ಜೂನ್ 12ರಂದು ಕುವೈತ್ ನ ಅಲ್ ಮಂಗಾಫ್ ನಗರದಲ್ಲಿನ ಕಟ್ಟಡವೊಂದರಲ್ಲಿ ನಡೆದ ಅಗ್ನಿ ದುರಂತದಲ್ಲಿ 49 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪೈಕಿ 45 ಮಂದಿ ಭಾರತೀಯರು ಎಂದು ಅವರು ಹೇಳಿದ್ದಾರೆ.

Hot this week

ದುಬೈಯಲ್ಲಿ ಸಂಕಷ್ಟಕ್ಕೀಡಾಗಿರುವ ಪ್ರವಾಸಿ ಕನ್ನಡಿಗರಿಗೆ ಧೈರ್ಯ ತುಂಬಿದ ಎಂ.ಎ.ಗಫೂರ್

ದುಬೈ: ಅಮೇರಿಕ-ಇಸ್ರೇಲ್ ಹಾಗು ಇರಾನ್ ಮಧ್ಯೆಗಿನ ಸಂಘರ್ಷದಿಂದ ದುಬೈಯಲ್ಲಿ ಸಂಕಷ್ಟಕ್ಕೀಡಾಗಿರುವ ಕನ್ನಡಿಗ...

DKSC ಕುವೈತ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾಗಿ ಅನ್ವರ್ ಸಾಹೇಬ್ ಕುಂಜಾಲ್ ಆಯ್ಕೆ

ಕುವೈತ್: ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (DKSC), ಇದರ ಕುವೈತ್ ರಾಷ್ಟ್ರೀಯ...

ಕರ್ನಾಟಕ ಸಂಘ ಖತರ್‌ನಿಂದ ರಮಝಾನ್‌ ಸೇವಾ ಕಾರ್ಯ: ಇಫ್ತಾರ್ ಆಹಾರ ಕಿಟ್‌ಗಳ ವಿತರಣೆ

ಕರ್ನಾಟಕ ಸಂಘ ಖತರ್‌ (KSQ), ರಮಝಾನ್‌ ಮಾಸದ ಪವಿತ್ರ ಚಟುವಟಿಕೆಗಳ ಭಾಗವಾಗಿ...

ಅಟ್ಲಾಂಟ ಒಕ್ಕಲಿಗರ ಕೂಟದಿಂದ ಪ್ರಥಮ ಸಮಾವೇಶ

ಕೆ. ಆರ್. ಶ್ರೀನಾಥ್, ಅಟ್ಲಾಂಟ ಅಟ್ಲಾಂಟ: ಫೆಬ್ರವರಿ 22ರ ರವಿವಾರದಂದು ಅಟ್ಲಾಂಟದಲ್ಲಿ ನೆಲಸಿರುವ...

Related Articles

Popular Categories