ಕುವೈತ್ಕುವೈತ್ ಅಗ್ನಿ ದುರಂತ | ಮೃತ ಬಿನೋಯ್ ಕುಟುಂಬಕ್ಕೆ...

ಕುವೈತ್ ಅಗ್ನಿ ದುರಂತ | ಮೃತ ಬಿನೋಯ್ ಕುಟುಂಬಕ್ಕೆ ವಸತಿ ಯೋಜನೆಯಡಿ ಮನೆ ವಿತರಣೆ: ಕೇರಳ ಸರಕಾರ ಭರವಸೆ

ತ್ರಿಶೂರ್ (ಕೇರಳ): ಇತ್ತೀಚೆಗೆ ಕುವೈತ್ ನಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟಿರುವ ಬಿನೋಯ್ ಥಾಮಸ್ ಕುಟುಂಬದ ಸದಸ್ಯರಿಗೆ ಲೈಫ್ ಮಿಷನ್ ವಸತಿ ಯೋಜನೆಯಡಿ ಮನೆ ವಿತರಿಸುವುದಾಗಿ ರವಿವಾರ ಕೇರಳ ಸರಕಾರ ಭರವಸೆ ನೀಡಿದೆ.

ತನ್ನ ಕುಟುಂಬದ ಸದಸ್ಯರಿಗೆ ಉತ್ತಮ ಮನೆ ನಿರ್ಮಿಸುವ ಹಾಗೂ ಅವರ ಜೀವನ ಮಟ್ಟವನ್ನು ಸುಧಾರಿಸುವ ಕನಸಿನೊಂದಿಗೆ ಅಗ್ನಿ ದುರಂತ ಸಂಭವಿಸಿದ ಕೇವಲ ಒಂದು ದಿನದ ಹಿಂದೆಯಷ್ಟೆ ಚವಕ್ಕಡ್ ನಿವಾಸಿಯಾದ ಬಿನೋಯ್ ಥಾಮಸ್ ಕುವೈತ್ ಗೆ ತೆರಳಿದ್ದರು ಎಂದು ಹೇಳಲಾಗಿದೆ.

ಸದ್ಯ ಮೂರು ಸೆಂಟ್ ಅಳತೆಯ ಜಾಗದಲ್ಲಿ ಥಾಮಸ್ ಕುಟುಂಬವು ತಾತ್ಕಾಲಿಕ ಗುಡಿಸಿಲಿನಲ್ಲಿ ವಾಸಿಸುತ್ತಿದೆ.

ಕೇರಳ ಕಂದಾಯ ಸಚಿವ ಕೆ.ರಾಜನ್ ಹಾಗೂ ಸಾಮಾಜಿಕ ನ್ಯಾಯ ಸಚಿವೆ ಆರ್.ಬಿಂದು ಇಬ್ಬರೂ ರವಿವಾರ ಥಾಮಸ್ ಕುಟುಂಬದ ಸದಸ್ಯರನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಿದರು.

ಜೂನ್ 12ರಂದು ಕುವೈತ್ ನ ಅಲ್ ಮಂಗಾಫ್ ನಗರದಲ್ಲಿನ ಕಟ್ಟಡವೊಂದರಲ್ಲಿ ನಡೆದ ಅಗ್ನಿ ದುರಂತದಲ್ಲಿ 49 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪೈಕಿ 45 ಮಂದಿ ಭಾರತೀಯರು ಎಂದು ಅವರು ಹೇಳಿದ್ದಾರೆ.

Hot this week

ಶಾಲೆಯ ಕ್ರೀಡಾಂಗಣದಿಂದ ಮುಖ್ಯಮಂತ್ರಿ ಕಚೇರಿವರೆಗೆ; ತಮ್ಮ ವಿದ್ಯಾರ್ಥಿ ಡಿ.ಕೆ. ಶಿವಕುಮಾರ್ ಕುರಿತು ನಿವೃತ್ತ ಶಿಕ್ಷಕ ಪಾಂಡು ಅವರ ನೆನಪುಗಳು

ಲೇಖನ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಇತಿಹಾಸವು ಮಹಾನ್ ನಾಯಕರನ್ನು ನೆನಪಿಸಿಕೊಳ್ಳುತ್ತದೆ. ಆದರೆ ಪ್ರತಿಯೊಬ್ಬ...

ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ವಾರ್ಷಿಕ ಮಹಾಸಭೆ

ದುಬೈ: ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ಇದರ 28ನೇ ವಾರ್ಷಿಕ ಮಹಾಸಭೆ...

ದುಬೈಯಲ್ಲಿ ಕನ್ನಡ ಭಾಷೆಯನ್ನು ಎತ್ತಿ ಹಿಡಿದ ಕ್ರಿಯಾತ್ಮಕ ಕಲಾ ನಿರ್ದೇಶಕ ಬಿ.ಕೆ.ಗಣೇಶ್ ರೈ

ಜಗತ್ತಿನ ನಾನಾ ಮೂಲೆಗಳಲ್ಲಿ ನೆಲೆಸಿರುವ ಕನ್ನಡಿಗರು ಕನ್ನಡ ನಾಡು-ನುಡಿ, ಸಂಸ್ಕೃತಿ, ಪರಂಪರೆಗಾಗಿ...

ಜರ್ಮನಿ; ನಾಟ್ಯಫೆಸ್ಟ್ 2026: ಸಂಸ್ಕೃತಿ ಮತ್ತು ಸೃಜನಾತ್ಮಕತೆಯ ರಂಜಕ ವೇದಿಕೆ

ಫ್ರಾಂಕ್‌ಫರ್ಟ್‌ (ಜರ್ಮನಿ): ಇತ್ತೀಚೆಗೆ ಮ್ಯೂನಿಕ್‌ನ ಐನ್‌ಸ್ಟೈನ್ ಕಲ್ಚರ್ ವೇದಿಕೆ ನಾಟ್ಯಫೆಸ್ಟ್ 2026...

ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ದೋಹಾ(ಖತರ್‌): ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ...

Related Articles

Popular Categories