ಕುವೈತ್ಕುವೈತ್ ಅಗ್ನಿ ದುರಂತ | ಮೃತ ಬಿನೋಯ್ ಕುಟುಂಬಕ್ಕೆ...

ಕುವೈತ್ ಅಗ್ನಿ ದುರಂತ | ಮೃತ ಬಿನೋಯ್ ಕುಟುಂಬಕ್ಕೆ ವಸತಿ ಯೋಜನೆಯಡಿ ಮನೆ ವಿತರಣೆ: ಕೇರಳ ಸರಕಾರ ಭರವಸೆ

ತ್ರಿಶೂರ್ (ಕೇರಳ): ಇತ್ತೀಚೆಗೆ ಕುವೈತ್ ನಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟಿರುವ ಬಿನೋಯ್ ಥಾಮಸ್ ಕುಟುಂಬದ ಸದಸ್ಯರಿಗೆ ಲೈಫ್ ಮಿಷನ್ ವಸತಿ ಯೋಜನೆಯಡಿ ಮನೆ ವಿತರಿಸುವುದಾಗಿ ರವಿವಾರ ಕೇರಳ ಸರಕಾರ ಭರವಸೆ ನೀಡಿದೆ.

ತನ್ನ ಕುಟುಂಬದ ಸದಸ್ಯರಿಗೆ ಉತ್ತಮ ಮನೆ ನಿರ್ಮಿಸುವ ಹಾಗೂ ಅವರ ಜೀವನ ಮಟ್ಟವನ್ನು ಸುಧಾರಿಸುವ ಕನಸಿನೊಂದಿಗೆ ಅಗ್ನಿ ದುರಂತ ಸಂಭವಿಸಿದ ಕೇವಲ ಒಂದು ದಿನದ ಹಿಂದೆಯಷ್ಟೆ ಚವಕ್ಕಡ್ ನಿವಾಸಿಯಾದ ಬಿನೋಯ್ ಥಾಮಸ್ ಕುವೈತ್ ಗೆ ತೆರಳಿದ್ದರು ಎಂದು ಹೇಳಲಾಗಿದೆ.

ಸದ್ಯ ಮೂರು ಸೆಂಟ್ ಅಳತೆಯ ಜಾಗದಲ್ಲಿ ಥಾಮಸ್ ಕುಟುಂಬವು ತಾತ್ಕಾಲಿಕ ಗುಡಿಸಿಲಿನಲ್ಲಿ ವಾಸಿಸುತ್ತಿದೆ.

ಕೇರಳ ಕಂದಾಯ ಸಚಿವ ಕೆ.ರಾಜನ್ ಹಾಗೂ ಸಾಮಾಜಿಕ ನ್ಯಾಯ ಸಚಿವೆ ಆರ್.ಬಿಂದು ಇಬ್ಬರೂ ರವಿವಾರ ಥಾಮಸ್ ಕುಟುಂಬದ ಸದಸ್ಯರನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಿದರು.

ಜೂನ್ 12ರಂದು ಕುವೈತ್ ನ ಅಲ್ ಮಂಗಾಫ್ ನಗರದಲ್ಲಿನ ಕಟ್ಟಡವೊಂದರಲ್ಲಿ ನಡೆದ ಅಗ್ನಿ ದುರಂತದಲ್ಲಿ 49 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪೈಕಿ 45 ಮಂದಿ ಭಾರತೀಯರು ಎಂದು ಅವರು ಹೇಳಿದ್ದಾರೆ.

Hot this week

ಕನ್ನಡಿಗರ ಕೂಟ ದುಬೈ ವತಿಯಿಂದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್‌ಗೆ ಸನ್ಮಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ತಂಡವು ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ...

ಫ್ಲೋರಿಡಾ ತುಳು ಕೂಟದ 2ನೇ ವಾರ್ಷಿಕ ಪೊಟ್ಲಕ್ ಪಿಕ್ನಿಕ್ ಸಂಭ್ರಮ

ಅಮೇರಿಕದ ಫ್ಲೋರಿಡಾ ತುಳು ಕೂಟವು ಇತ್ತೀಚೆಗೆ ಕ್ಯಾಸೆಲ್‌ಬೆರ್ರಿ ಒರ್ಲಾಂಡೊದಲ್ಲಿ ತನ್ನ ಎರಡನೇ...

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ರಕ್ತದಾನದಿಂದ ಮಾನವೀಯತೆಯ ಸಂದೇಶ ಸಾರಿದ ಕರ್ನಾಟಕ ಸಂಘ ಶಾರ್ಜಾ

ದುಬೈ: ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ಕರ್ನಾಟಕ ಸಂಘ ಶಾರ್ಜಾ ಮತ್ತು...

ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್‌ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಸಲಾಲ(ಒಮಾನ್): ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್ ನಲ್ಲಿ ಬ್ಯಾರೀಸ್ ಕಮ್ಯುನಿಟಿ...

Related Articles

Popular Categories