ಯುಎಇದುಬೈ: 'ಬ್ಯಾರೀಸ್ ಕಲ್ಚರಲ್ ಫೋರಮ್'ನಿಂದ ಮಾರ್ಚ್ 8ರಂದು 'BCF...

ದುಬೈ: ‘ಬ್ಯಾರೀಸ್ ಕಲ್ಚರಲ್ ಫೋರಮ್’ನಿಂದ ಮಾರ್ಚ್ 8ರಂದು ‘BCF ಇಫ್ತಾರ್ ಮೀಟ್-2025’

ದುಬೈ: ಕಳೆದ ಸುಮಾರು 25 ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಗಣನೀಯ ಸೇವೆಯನ್ನು ಮಾಡುತ್ತಿರುವ ಅನಿವಾಸಿ ಕನ್ನಡಿಗರಲ್ಲಿ ಅತ್ಯಂತ ಜನಪ್ರಿಯ ಸಮಾಜ ಸೇವಾ ಸಂಸ್ಥೆ ‘ಬ್ಯಾರೀಸ್ ಕಲ್ಚರಲ್ ಫೋರಮ್’ (ಬಿಸಿಎಫ್) ವತಿಯಿಂದ ಪ್ರತೀ ವರ್ಷ ನಡೆಯುವಂತೆ ಈ ವರ್ಷವೂ ‘BCF ಇಫ್ತಾರ್ ಮೀಟ್-2025’ ಇಫ್ತಾರ್ ಕೂಟವು ಮುಂದಿನ ತಿಂಗಳ ಮಾರ್ಚ್ 8ರ ಶನಿವಾರ ( 08 / 03 / 2025 ) ದುಬೈ ದೇರಾದ ಅಬು ಹೈಲ್ ನ ಅಲ್ ಜಾಹಿಯ ಬಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ ಎಂದು ಬ್ಯಾರೀಸ್ ಕಲ್ಚರಲ್ ಫೋರಮ್ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

UAEಯ ಎಲ್ಲ ಕಡೆಯಿಂದ, ಇತರ ಕೊಲ್ಲಿ ನಾಡುಗಳಿಂದ ಮತ್ತು ಕರ್ನಾಟಕದಿಂದ ನೂರಾರು ಸಂಖ್ಯೆಯಲ್ಲಿ ಕನ್ನಡಿಗರು, ಕನ್ನಡೇತರರು ತಮ್ಮ ಕುಟುಂಬ ಮತ್ತು ಸ್ನೇಹಿತರೊಂದಿಗೆ ಈ ಇಫ್ತಾರ್ ಕೂಟದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ದೊಡ್ಡ ಸಂಖ್ಯೆಯಲ್ಲಿ ವಿಶೇಷ ಆಹ್ವಾನಿತರು, ಉಲೇಮಾ ಸದಾತುಗಳು, ಧಾರ್ಮಿಕ, ರಾಜಕೀಯ ಮತ್ತು ಸಾಮಾಜಿಕ ನೇತಾರರು, ಉದ್ಯಮಿಗಳು ಮತ್ತು ಹಲವಾರು ಕನ್ನಡ ಪರ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಕ್ಕಳಿಗೆ ಇಸ್ಲಾಮಿಕ್ ರಸ ಪ್ರಶ್ನೆಗಳು, ಕುರಾನ್ ಪಾರಾಯಣ ಮೊದಲಾದ ಸ್ಪರ್ಧೆಗಳೊಂದಿಗೆ ಪ್ರಖ್ಯಾತ ಧಾರ್ಮಿಕ ನಾಯಕರುಗಳ ಧಾರ್ಮಿಕ-ನೈತಿಕ ಪ್ರಭಾಷಣ ನಡೆಯಲಿದೆ. ಅಂದು ವಿಶೇಷ ವಾಗಿ BCFನ ಇನ್ನೊಂದು ವಿಶೇಷ ಸೇವಾ ಕಾರ್ಯವಾದ BCF ಸ್ಕಾಲರ್ ಶಿಪ್ ಬಗ್ಗೆ ಪ್ರಸ್ತಾವನೆ ನೀಡಲಾಗುವುದು. ಸಾಮುದಾಯಿಕ ರಂಗದಲ್ಲಿ ವಿಶೇಷ ಸೇವೆ ಗೈದ ವ್ಯಕ್ತಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಗುವುದು.

BCF ಅಧ್ಯಕ್ಷರಾದ ಡಾ.ಬಿ.ಕೆ.ಯೂಸುಫ್ ಮತ್ತು ಇತರ ನಾಯಕರ ಮುಂದಾಳುತನದಲ್ಲಿ ನಡೆಯುವ ಈ ಇಫ್ತಾರ್ ಕಾರ್ಯಕ್ರಮದಲ್ಲಿ UAE ಯಲ್ಲಿರುವ ಎಲ್ಲ ಕನ್ನಡಿಗರು ತಮ್ಮ ಕುಟುಂಬ ಸ್ನೇಹಿತರ ಸಮೇತ ಭಾಗವಹಿಸಬೇಕಾಗಿ BCF Ifthar Committee Chairman ಅಬ್ದುಲ್ ಲತೀಫ್ ಮುಲ್ಕಿ, Vice Chairman ಅಫೀಕ್ ಹುಸೈನ್ ಮತ್ತು ಅವರ ಸಹವರ್ತಿಗಳು ಬಿಸಿಎಫ್ ಪರವಾಗಿ ಆಹ್ವಾನಿಸಿದ್ದಾರೆ.

Hot this week

ಬಹರೈನ್; ಆಗಸ್ಟ್ 21ರಂದು ‘ಕೆಸಿಎಫ್’ನಿಂದ ಗ್ರ್ಯಾಂಡ್ ಮೀಲಾದ್ ಕಾನ್ಫರೆನ್ಸ್

ಮನಾಮ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ...

ಭಾರತೀಯ ರಾಯಭಾರ ಕಚೇರಿಯ ಡಾ.ಈಶ್ ಸಿಂಘಾಲ್​​ಗೆ ಭಾವಪೂರ್ಣ ಬೀಳ್ಕೊಡುಗೆ; ಕರ್ನಾಟಕ ಸಂಘ ಖತರ್‌ನಿಂದ ಅಭಿನಂದನೆ

ದೋಹಾ(ಖತರ್): ಖತರ್‌ನಲ್ಲಿ ತಮ್ಮ ಸೇವಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಭಾರತೀಯ ರಾಯಭಾರ ಕಚೇರಿಯ...

ವಂದೇ ಮಾತರಂ ಮತ್ತು ಜನಗಣಮನ ಗೀತೆಯೊಂದಿಗೆ ಅಮೇರಿಕದಲ್ಲಿ ಗೃಹಪ್ರವೇಶ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ 1875ರಲ್ಲಿ ಭಾರತದಲ್ಲಿ ಮೊಳಗಿದ ‘ವಂದೇ ಮಾತರಂ’ 150...

ದುಬೈ; ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಸಾಮಾಜಿಕ ಸಮ್ಮಿಲನ ಕಾರ್ಯಕ್ರಮ

ದುಬೈ: ಪರಿಸರ ಸಂರಕ್ಷಣೆ, ಸಾಮಾಜಿಕ ಜಾಗೃತಿ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಬದ್ಧವಾಗಿರುವ...

ನ್ಯೂಯಾರ್ಕ್; ಆಲ್ಬನಿಯಲ್ಲಿ ಸಂಭ್ರಮದ ಕನ್ನಡ ಕಲಿ ಪದವಿ ಪ್ರದಾನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಆಲ್ಬನಿ(ನ್ಯೂಯಾರ್ಕ್): ಅಮೇರಿಕದಲ್ಲಿ ಹುಟ್ಟಿ ಬೆಳೆಯುತ್ತಿರುವ ಮಕ್ಕಳಿಗೆ ಕನ್ನಡ...

Related Articles

Popular Categories