ಸೌದಿ ಅರೇಬಿಯಾ'ಹಜ್ಜ್' ನಿರ್ವಹಿಸಲು ಭಾರತದಿಂದ ಬಂದ ಹಜ್ಜಾಜಿಗಳಿಗೆ ಭವ್ಯ ಸ್ವಾಗತ...

‘ಹಜ್ಜ್’ ನಿರ್ವಹಿಸಲು ಭಾರತದಿಂದ ಬಂದ ಹಜ್ಜಾಜಿಗಳಿಗೆ ಭವ್ಯ ಸ್ವಾಗತ ಕೋರಿದ KCF HVC ತಂಡ

ಮದೀನಾ: ಪವಿತ್ರ ಹಜ್ಜ್ ಕಾರ್ಯ ನಿರ್ವಹಿಸಲು ಭಾರತದಿಂದ ಬಂದ ಹಜ್ಜಾಜಿಗಳ ಮೊದಲ ಎರಡು ವಿಮಾನವು ಮದೀನಾ ಮುನವ್ವರದ ಪ್ರಿನ್ಸ್ ಮೊಹಮ್ಮದ್ ಬಿನ್ ಅಬ್ದುಲ್ ಅಝೀಝ್ ಇಂಟರ್ ನ್ಯಾಷನಲ್ ಏರ್ಪೋರ್ಟ್ ತಲುಪಿದೆ.

ಇಂದು ಭಾರತದ ಹೈದರಾಬಾದ್ ಹಾಗೂ ಲಕ್ನೋ ದಿಂದ 578 ಹಾಜಿಗಳು ಆಗಮಿಸಿದ್ದು, ಕರ್ನಾಟಕ ಕಲ್ಚರಲ್ ಫೌಂಡೇಶನ್ ನ ಹಜ್ಜ್ ವಾಲೇಂಟಿಯರ್ ಕೋರ್ ನ ಸದಸ್ಯರು ಹಜ್ಜಾಜಿಗಳನ್ನು ಆತ್ಮೀಯತೆಯಿಂದ ಬರಮಾಡಿಕೊಂಡರು.

ಇಂಡಿಯನ್ ಅಂಬಾಸಿಡರ್ ಡಾ.ಸುಹೇಲ್ ಅಜಾಝ್ ಖಾನ್, ಇಂಡಿಯನ್ ಕೌನ್ಸಿಲ್ ಜನರಲ್(ಜಿದ್ದಾ) ಫಹದ್ ಅಹ್ಮದ್ ಖಾನ್ ಸೇರಿದಂತೆ ಇಂಡಿಯನ್ ಎಂಬಸಿಯ ವಿವಿಧ ಅಧಿಕಾರಿಗಳು ಹಜ್ಜಾಜಿಗಳನ್ನು ಸ್ವಾಗತಿಸಿದರು.

ಕೆಸಿಎಫ್ ಹೆಚ್.ವಿ.ಸಿ ಸದಸ್ಯರು ಹಜ್ಜಾಜಿಗಳನ್ನು ಮದೀನಾ ವಿಮಾನ ನಿಲ್ದಾಣ ಹಾಗೂ ಅವರು ತಂಗುವ ಹೋಟೆಲ್ ಗೆ ತೆರಳಿ ಸಹಕರಿಸಿದರು. ಹಾಜಿಗಳಿಗೆ ಹೆಚ್.ವಿ.ಸಿ ವೆಲ್ಕಂ ಕಿಟ್, ಖರ್ಜೂರ ನೀಡಿ ಸತ್ಕರಿಸಿದರು. ಈ ವೇಳೆ ಮದೀನಾ ಮುನವ್ವರದ ಸಾಂಪ್ರದಾಯಿಕ ಶೈಲಿಯಲ್ಲಿ ಝಂಝಂ ವಿತರಿಸಲಾಯಿತು ಹಾಗೂ ಹಜ್ಜಾಜಿಗಳ ಮೇಲೆ ಹೂವಿನ ಎಸಲುಗಳನ್ನು ಸುರಿಸುವ ಮೂಲಕ ಭವ್ಯವಾಗಿ ಸ್ವಾಗತಿಸಲಾಯಿತು.

ಅಶಕ್ತ ಹಜ್ಜಾಜಿಗಳನ್ನು ವೀಲ್ ಚೇರ್ ಮೂಲಕ ಕೆ.ಸಿಎ.ಫ್ ಹೆಚ್.ವಿ.ಸಿ ಕಾರ್ಯಕರ್ತರು ಹೋಟೆಲ್ ತಲುಪಿಸಿದರು. ಇಂದು ರಾತ್ರಿ 7.30 ವೇಳೆಗೆ ಮುಂಬೈಯಿಂದ 442 ಹಾಜಿಗಳು ಆಗಮಿಸಲಿದ್ದಾರೆ. ರಾಜ್ಯದ 956 ಹಜ್ಜಾಜಿಗಳು ನಾಳೆ ಪವಿತ್ರ ನಗರವಾದ ಮದೀನಾ ಮುನವ್ವರ ತಲುಪಲಿದ್ದು, 378 ಹಾಜಿಗಳು ನಾಳೆ ಬೆಳಗ್ಗಿನ ವೇಳೆ, 289 ಹಾಜಿಗಳು ಮಧ್ಯಾಹ್ನ ವೇಳೆ, ಹಾಗೂ ಸಂಜೆ 289ಹಾಜಿಗಳು ಮದೀನಾ ಮುನವ್ವರ ತಲುಪಲಿದ್ದು, ಕರ್ನಾಟಕ ಕಲ್ಚರಲ್ ಫೌಂಡೇಶನ್ ಹಜ್ಜ್ ವಾಲೆಂಟಿಯರ್ ಕೋರ್ ಸದಸ್ಯರು ಮಕ್ಕತುಲ್ ಮುಕರ್ರಮ ಹಾಗೂ ಮದೀನಾ ಮುನವ್ವರದಲ್ಲಿ ಹಜ್ಜಾಜಿಗಳಿಗೆ ಸಹಕರಿಸಲು ಸನ್ನಧ್ಧರಾಗಿದ್ದಾರೆ.
ವರದಿ : ಹಕೀಂ ಬೋಳಾರ್

Hot this week

ಯಕ್ಷಗಾನ ಕಲಾವಿದ ವಾಸು ಬಾಯರುಗೆ ‘ವಿಶೇಷ ಯಕ್ಷ ಶ್ರೀ ರಕ್ಷಾ ಗೌರವ ಪ್ರಶಸ್ತಿ’

ದುಬೈ : ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ (YAKU)ಯು ತವರೂರು ತಿರುಗಾಟದಲ್ಲಿ...

ಕನ್ನಡ ಸಂಘ ಬಹರೈನ್ ವತಿಯಿಂದ ಯಶಸ್ವಿಯಾಗಿ ಮೂಡಿಬಂದ ‘KSB ಐಕ್ಯತಾ ಪಾದಯಾತ್ರೆ ಹಾಗೂ ನಿಷ್ಠಾ ಪ್ರತಿಜ್ಞೆ ಸಹಿ’ ಕಾರ್ಯಕ್ರಮ

ಮನಾಮ(ಬಹರೈನ್): ಕನ್ನಡ ಸಂಘ ಬಹರೈನ್ ವತಿಯಿಂದ ವಾಟರ್ ಗಾರ್ಡನ್, ಗುಫೂಲ್ ನಲ್ಲಿ...

ಖತರ್‌ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷೆ ಅನುಷ್ಠಾನಕ್ಕೆ ಭಾರತೀಯ ರಾಯಭಾರ ಕಚೇರಿಯ ಸಂಪೂರ್ಣ ಆಡಳಿತಾತ್ಮಕ ಬೆಂಬಲ: ಹರೀಶ್ ಪಾಂಡೆ

ದೋಹಾ: ಖತರ್‌ನಲ್ಲಿರುವ ಕನ್ನಡ ಮಾತನಾಡುವ ಅನಿವಾಸಿ ಭಾರತೀಯರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ...

ದುಬೈ; ನವೆಂಬರ್ 1ರಂದು 71ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾದ ಕರ್ನಾಟಕ ಸಂಘ ದುಬೈ

ದುಬೈ: ಯುಎಇಯಲ್ಲಿರುವ ಕನ್ನಡಿಗರ ಅತಿದೊಡ್ಡ ಮತ್ತು ಅತ್ಯಂತ ಹಳೆಯ ಸಂಘಟನೆಯಾದ ಕರ್ನಾಟಕ...

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

Related Articles

Popular Categories