ಯುಎಸ್‌ಎಅಟ್ಲಾಂಟ ಕನ್ನಡಿಗರಿಂದ ಅದ್ದೂರಿಯ ಯುಗಾದಿ ಸಂಭ್ರಮಾಚರಣೆ; ಸಂಗೀತ ಪ್ರಿಯರನ್ನು...

ಅಟ್ಲಾಂಟ ಕನ್ನಡಿಗರಿಂದ ಅದ್ದೂರಿಯ ಯುಗಾದಿ ಸಂಭ್ರಮಾಚರಣೆ; ಸಂಗೀತ ಪ್ರಿಯರನ್ನು ತಲೆದೂಗುವಂತೆ ಮಾಡಿದ ರಾಜೇಶ್ ಕೃಷ್ಣನ್ ಹಾಡು

ಅಮೆರಿಕಾದ ಅಟ್ಲಾಂಟ ಕನ್ನಡಿಗರು ಮೇ 4ರಂದು ರವಿವಾರ ಅದ್ದೂರಿಯಾಗಿ ಯುಗಾದಿ ಹಾಗೂ ಕನ್ನಡ ಹೊಸ ವರ್ಷವನ್ನು ಸಂಭ್ರಮದಿಂದ ಆಚರಿಸಿಕೊಂಡರು.

ನೃಪತುಂಗ ಕನ್ನಡ ಕೂಟದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಅವರ ಸಂಗೀತ ಸಂಜೆ ಮುಖ್ಯ ಆಕರ್ಷಣೆಯಾಗಿತ್ತು.

ಕನ್ನಡ ಶಾಲೆಯ ಶಿಕ್ಷಕರು ಮತ್ತು ಮಕ್ಕಳು

ಕಾರ್ಯಕ್ರಮದ ಒಂದು ವಾರದ ಮುಂಚೆಯೇ ಟಿಕೆಟ್ “ಸೋಲ್ಡ್ ಔಟ್” ಆಗಿದ್ದು ಕನ್ನಡಿಗರು ತಮ್ಮ ನೆಚ್ಚಿನ ಗಾಯಕನ ಹಾಡುಗಳನ್ನು ಸಂತೋಷದಿಂದ ಆನಂದಿಸಿದರು. ರಾಜೇಶ್ ಕೃಷ್ಣನ್ ತಮ್ಮ ಸುಮಧುರ ಗಾಯನ, ನಗು, ಪ್ರೀತಿಯಿಂದ ಅಭಿಮಾನಿಗಳ ಹೃದಯ ಗೆದ್ದರು. ಅಷ್ಟೇ ಅಲ್ಲದೆ ಪ್ರೋತ್ಸಾಹ ನೀಡಲು ಅಟ್ಲಾಂಟದ ಸ್ಥಳೀಯ ಪ್ರತಿಭೆಗಳನ್ನು ಸಹ ತಮ್ಮ ಜೊತೆ ಹಾಡಿಸಿ ಕನ್ನಡಿಗರ ಮನ ಗೆದ್ದರು.

ಸ್ಥಳೀಯ ಗಾಯಕರೊಂದಿಗೆ ಮನರಂಜಿಸಿದ ರಾಜೇಶ್ ಕೃಷ್ಣನ್

ಸ್ಥಳೀಯ ಪ್ರತಿಭೆಗಳಿಂದ ನೃತ್ಯ, ಗಾಯನ, ನಾಟಕಗಳನ್ನು ಆಯೋಜಿಸಲಾಗಿತ್ತು. ಕನ್ನಡ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಸ್ಥಳೀಯ ಕನ್ನಡಿಗರು ಭಾಗವಹಿಸಿ ಸಂತೋಷಪಟ್ಟರು. ಕೆ.ಆರ್.ಶ್ರೀನಾಥ್ ಅವರು ಕಾರ್ಯಕ್ರಮದಲ್ಲಿ ಕನ್ನಡ ಪ್ರಶ್ನಾವಳಿ ಕಾರ್ಯಕ್ರಮ ನಡೆಸಿಕೊಟ್ಟರು. ಕನ್ನಡ ಕೂಟ ತಂಡದವರು ಶ್ರಮವಹಿಸಿ ಇಡೀ ದಿನದ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಿ ಭರ್ಜರಿ ಭೋಜನದ ವ್ಯವಸ್ಥೆಯನ್ನು ಸಹ ಮಾಡಿದ್ದರು.

ವರದಿ: ಕೆ.ಆರ್.ಶ್ರೀನಾಥ್, ಅಟ್ಲಾಂಟ

Hot this week

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

ಬಹರೈನ್‌; ‘ಕೆಸಿಎಫ್’ನಿಂದ ಈದ್ ಮಿಲಾದ್ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ

ಮನಾಮ: ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್) ಬಹರೈನ್‌ ವತಿಯಿಂದ ಪ್ರವಾದಿ ಮುಹಮ್ಮದ್‌ರವರ...

ಅಮೇರಿಕ; ಭಕ್ತಿ, ಬಸವತತ್ವ, ನಾಟಕ-ನೃತ್ಯ ವೈಭವದಿಂದ ಕಂಗೊಳಿಸಿದ VSNA ಮಹಾಸಮ್ಮೇಳನದ ಎರಡನೇ ದಿನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಸ್ಯಾನ್‌ಫೋರ್ಡ್ (ಉತ್ತರ ಕೆರೊಲಿನಾ: 48ನೇ ವೀರಶೈವ ಸೊಸೈಟಿ...

ಕನ್ನಡ ಸಂಘ ಬಹರೈನ್‌ನ ‘ಯಕ್ಷ ವೈಭವ 2026’ ಮುಹೂರ್ತ ಪೂಜೆ ಸಂಪನ್ನ

ಬಹರೈನ್‌: ಕನ್ನಡ ಸಂಘ ಬಹರೈನ್ ಅರ್ಪಿಸುವ ‘ಯಕ್ಷ ವೈಭವ 2026’ ರ...

ಅಮೇರಿಕ; ಉತ್ತರ ಕೆರೊಲಿನಾದಲ್ಲಿ 48ನೇ ವಿಎಸ್‌ಎನ್‌ಎ ಮಹಾಸಮ್ಮೇಳನಕ್ಕೆ ಅದ್ದೂರಿ ಚಾಲನೆ

-ಬೆಂಕಿ ಬಸಣ್ಣ, ಉತ್ತರ ಕೆರೊಲಿನಾ ಉತ್ತರ ಅಮೇರಿಕದ ವೀರಶೈವ-ಲಿಂಗಾಯತ ಸಮುದಾಯದ ಅತ್ಯಂತ ಹಿರಿಯ...

Related Articles

Popular Categories