ಯುಎಇದುಬೈನಲ್ಲಿ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರಿಂದ...

ದುಬೈನಲ್ಲಿ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರಿಂದ ಯಶಸ್ವಿಯಾಗಿ ನಡೆದ 13ನೇ ವರ್ಷದ ರಕ್ತದಾನ ಶಿಬಿರ

ದುಬೈ: ಯುಎಇಯಲ್ಲಿ ಹಾಗೂ ಕರಾವಳಿಯಲ್ಲಿ ಹೆಸರು ವಾಸಿಯಾಗಿರುವ ಹೋಟೆಲ್ ಉದ್ಯಮ ಸಂಸ್ಥೆ ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ನ ಆಡಳಿತ ನಿರ್ದೇಶಕರಾದ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರು ಕಳೆದ 13 ವರ್ಷದಿಂದ ತನ್ನ ತಂದೆ-ತಾಯಿಯ ಮದುವೆಯ ವಾರ್ಷಿಕ ದಿನದಂದು ದುಬೈನಲ್ಲಿ ನಡೆಸಿಕೊಂಡು ಬರುತ್ತಿರುವ ರಕ್ತದಾನ ಶಿಬಿರದ ಕಾರ್ಯಕ್ರಮವು ಮೇ 22ರಂದು ದುಬೈಯ ಫಾರ್ಚೂನ್ ಪ್ಲಾಝದಲ್ಲಿ ಯಶಸ್ವಿಯಾಗಿ ನಡೆಯಿತು.

ದುಬೈ ಹೆಲ್ತ್ ಅಥೋರಿಟಿಯ ಸಹಯೋಗದೊಂದಿಗೆ ನಡೆದ ರಕ್ತದಾನ ಶಿಬಿರವು ಬೆಳಗ್ಗೆ 9 ರಿಂದ ಮಧ್ಯಾಹ್ನ 2ರ ವರೆಗೆ ಯಶಸ್ವಿಯಾಗಿ ಜರುಗಿತು. ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ನ ಸಿಬ್ಬಂದಿ ವರ್ಗದವರು, ದುಬೈ ತುಳು-ಕನ್ನಡ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಪ್ರವೀಣ್ ಶೆಟ್ಟಿಯವರ ಸ್ನೇಹಿತರು, ಹಿತೈಷಿಗಳು ಶಿಬಿರದಲ್ಲಿ ರಕ್ತದಾನ ಮಾಡಿ ಶಿಬಿರವನ್ನು ಯಶಸ್ವಿಗೊಳಿಸಿದರು.

ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ, ನನ್ನ ಮಾತಪಿತರಾದ ಸರೋಜಿನಿ ಶೆಟ್ಟಿ ಮತ್ತು ನಾರಯಣ ಶೆಟ್ಟಿಯವರ ಮದುವೆಯ ವರ್ಷದ ಈ ಶುಭ ದಿನದಂದು ಕಳೆದ ಹದಿಮೂರು ವರ್ಷಗಳಿಂದ ಈ ಕಾರ್ಯಕ್ರಮವನ್ನು ದುಬೈನಲ್ಲಿ ಆಚರಿಸಿಕೊಂಡು ಬರುತ್ತಿದ್ದೇನೆ. ಈ ವರ್ಷ ನನಗೆ ವಿಶೇಷ ವರ್ಷ ನನ್ನ ಪೋಷಕರು ವೈವಾಹಿಕ ಜೀವನಕ್ಕೆ ಕಾಲಿಟ್ಟು 60ನೇ ವರ್ಷ ಆಚರಿಸುತ್ತಿದ್ದಾರೆ. ಇಂದು ನಾವು ದಾನ ಮಾಡಿದ ಪ್ರತಿ ಹನಿ ರಕ್ತವು ನಾಳೆಯ ಜೀವವನ್ನು ಉಳಿಸುವ ಶಕ್ತಿಯನ್ನು ಹೊಂದಿದೆ. ನನ್ನ ಈ ರಕ್ತದಾನ ಶಿಬಿರಕ್ಕೆ ಕೈ ಜೋಡಿಸಿ ನಿಂತ ನನ್ನ ಎಲ್ಲ ಸಿಬ್ಬಂದಿಗಳು, ತುಳು, ಕನ್ನಡ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ನನ್ನ ಸ್ನೇಹಿತರಿಗೆ ಹಾಗೂ ರಕ್ತದಾನ ಮಾಡಿದ ಎಲ್ಲ ರಕ್ತದಾನಿಗಳಿಗೆ ಧನ್ಯವಾದ ತಿಳಿಸಿದರು.

ದುಬೈ ಹೆಲ್ತ್ ಅಥೋರಿಟಿಯ ಸಿಬ್ಬಂದಿ ವರ್ಗದವರು ಮಾತನಾಡುತ್ತಾ, ಕಳೆದ ಕೆಲವು ವರ್ಷಗಳಿಂದ ಫಾರ್ಚೂನ್ ಗ್ರೂಪ್ ಸಂಸ್ಥೆಯ ಸದಸ್ಯರು ರಕ್ತದಾನ ಮಾಡುತ್ತಾ ಇದ್ದಾರೆ. ವರ್ಷದಿಂದ ವರ್ಷಕ್ಕೆ ದಾಖಲೆಯ ಸಂಖ್ಯೆಯಲ್ಲಿ ರಕ್ತದಾನ ಮಾಡುವ ದಾನಿಗಳಿಗೆ ಶುಭವನ್ನು ಹಾರೈಸಿ ಸಂಸ್ಥೆಯನ್ನು ಶ್ಲಾಘಿಸಿದರು.

ಯುಎಇಯ ತುಳು-ಕನ್ನಡ ಸಂಘ ಸಂಸ್ಥೆಗಳ ರಕ್ತದಾನ ಶಿಬಿರದ ಯಶಸ್ವಿ ಸಂಘಟಕ ಬಾಲಕೃಷ್ಣ ಸಾಲಿಯಾನ್ ಅವರ ನೇತೃತ್ವದಲ್ಲಿ ಶಿಬಿರವು ಯಶಸ್ವಿಯಾಗಿ ನಡೆಯಿತು.

ರಕ್ತದಾನ ಶಿಬಿರ ಕಾರ್ಯಕ್ರಮಕ್ಕೆ ಯುಎಇ ಬಂಟ್ಸ್ ನ ರಮಾನಂದ ಶೆಟ್ಟಿ, ವಾಸು ಶೆಟ್ಟಿ, ವಸಂತ ಶೆಟ್ಟಿ, ಕನ್ನಡಿಗರು ಕನ್ನಡ ಕೂಟ ದುಬೈಯ ಸಾದನ್ ದಾಸ್, ಕರ್ನಾಟಕ ಸಂಘ ದುಬೈಯ ಶಶಿಧರ್ ನಾಗರಾಜಪ್ಪ, ನಾಗರಾಜ ರಾವ್ ಉಡುಪಿ, ಪರ್ವ ಗ್ರೂಪ್ ನ ನೀಲೇಶ್ ಎಚ್.ಪಿ, ಯಕ್ಷಗಾನ ಅಭ್ಯಾಸ ಕೇಂದ್ರದ ಸಂದೀಪ್ ಶೆಟ್ಟಿ ಕೊಟ್ಟಿಂಜ, ಗಮ್ಮತ್ ಕಲಾವಿದೆರ್ ನ ರಾಜೇಶ್ ಕುತ್ತಾರ್, ಪತ್ರಕರ್ತರು-ಅಂಕಣಕಾರರಾದ ಇರ್ಷಾದ್ ಮೂಡಬಿದ್ರೆ, ವಿಜಯಕುಮಾರ್ ಶೆಟ್ಟಿ ಗಾಣದಮೂಲೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿ ಶಿಬಿರಕ್ಕೆ ಶುಭವನ್ನು ಹಾರೈಸಿದರು. ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕಿ ಪ್ರಾಚಿ ಶೆಟ್ಟಿ ಸ್ವಾಗತಿಸಿ, ಧನ್ಯವಾದವಿತ್ತರು.

ವಿಜಯಕುಮಾರ್ ಶೆಟ್ಟಿ ಗಾಣದಮೂಲೆ (ದುಬೈ)

Hot this week

ದುಬೈ; ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನಲ್ಲಿ ಓಣಂ ಹಬ್ಬ ಆಚರಣೆ

ದುಬೈ : ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಫಾರ್ಚೂನ್ ಗ್ರೂಪ್...

ಕನ್ನಡಿಗರ ಕೂಟ ದುಬೈ ವತಿಯಿಂದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್‌ಗೆ ಸನ್ಮಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ತಂಡವು ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ...

ಫ್ಲೋರಿಡಾ ತುಳು ಕೂಟದ 2ನೇ ವಾರ್ಷಿಕ ಪೊಟ್ಲಕ್ ಪಿಕ್ನಿಕ್ ಸಂಭ್ರಮ

ಅಮೇರಿಕದ ಫ್ಲೋರಿಡಾ ತುಳು ಕೂಟವು ಇತ್ತೀಚೆಗೆ ಕ್ಯಾಸೆಲ್‌ಬೆರ್ರಿ ಒರ್ಲಾಂಡೊದಲ್ಲಿ ತನ್ನ ಎರಡನೇ...

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

Related Articles

Popular Categories