ಬಹರೈನ್ಬಹರೈನ್ ಕನ್ನಡ ಸಂಘದಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಬಹರೈನ್ ಕನ್ನಡ ಸಂಘದಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಬಹರೈನ್: ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15ರಂದು ಬೆಳಗ್ಗೆ 8:30ಕ್ಕೆ ಮನಾಮದ ಕನ್ನಡ ಭವನ ಸಮುಚ್ಛಯದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮವು ಸಂಘದ ಅಧ್ಯಕ್ಷ ಅಜಿತ್ ಬಂಗೇರ ಅವರು ಧ್ವಜಾರೋಹಣ ಮಾಡುವುದರ ಮೂಲಕ ಆರಂಭಗೊಂಡಿತು. ನಂತರ ಉಪಾಧ್ಯಕ್ಷರು ನಿತಿನ್ ಶೆಟ್ಟಿ ಅವರು ಬಹರೈನ್ ರಾಷ್ಟ್ರಧ್ವಜರೋಹಣಗೈದರು. ನೆರೆದಿದ್ದ ನೂರಾರು ಸದಸ್ಯರು ಧ್ವಜಕ್ಕೆ ವಂದನೆ ಸಲ್ಲಿಸಿ, ರಾಷ್ಟ್ರಗೀತೆಯನ್ನು ಹಾಡಿದರು.
ಸಮಾರಂಭದ ಅತಿಥಿಗಳಾಗಿ ಜಯಶಂಕರ್, ಮೊಹಮ್ಮದ್ ಮನ್ಸೂರ್, ಸಿಎ ಅಜಯ್, ನಿಕಟಪೂರ್ವ ಅಧ್ಯಕ್ಷ ಅಮರನಾಥ ರೈ ಹಾಗೂ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದು, ಸ್ವಾತಂತ್ರ್ಯ ದಿನದ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಅಧ್ಯಕ್ಷ ಅಜಿತ್ ಬಂಗೇರ ಅವರು ಸ್ವಾತಂತ್ರ್ಯ ದಿನದ ಸಂದೇಶ ನೀಡಿದರು.

ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ಭಾಗವಾಗಿ ಕನ್ನಡ ಭವನ ಸಭಾಂಗಣದಲ್ಲಿ ವಿಶೇಷ ಛದ್ಮವೇಷ ಸ್ಪರ್ಧೆ ಮತ್ತು ಸಂಘದ ಸದಸ್ಯರ ಪರಿವಾರದಿಂದ ಮನರಂಜನಾತ್ಮಕ ನೃತ್ಯ ಪ್ರದರ್ಶನ ನಡೆಯಿತು.

ಛದ್ಮವೇಷ ಸ್ಪರ್ಧೆಯ ಫಲಿತಾಂಶ
ವರ್ಗ A (1–4 ವಯಸ್ಸು)
ಪ್ರಥಮ: ಜೈಶ್ನಿ ಜಯರಾಜ್
ದ್ವಿತೀಯ: ಸಾಯಂಶ್ ರೂಪೇಶ್
ತೃತೀಯ: ಮೇಗನ್ ಮ್ಯಾಥ್ಯೂ

ವರ್ಗ B (4–8 ವಯಸ್ಸು)
ಪ್ರಥಮ: ರಿದ್ಧಿ ನಿತೇಶ್ ಶೆಟ್ಟಿ
ದ್ವಿತೀಯ: ಶೌರ್ಯ ಪ್ರವೀಣ್ ಶೆಟ್ಟಿ
ತೃತೀಯ: ಆಯಾನ್ ಸತೀಶ್ ಶೆಟ್ಟಿ

ವರ್ಗ C (8–15 ವಯಸ್ಸು)
ಪ್ರಥಮ: ಪ್ರಕೃತಿ ಗೋಪಾಲ್ ಶೆಟ್ಟಿ
ದ್ವಿತೀಯ: ಶ್ರೇಯಾ ಹರೀಶ್ ಗೌಡ
ತೃತೀಯ: ಕ್ಷಿತಿ ಸುನಿಲ್

ಸೌರವ್ ರಾಕೇಶ್ ಹಾಗೂ ಫೆಲ್ಸಿ ಫಿಲೊಮೇನಾ ಫರ್ನಾಂಡಿಸ್ ತೀರ್ಪುಗಾರರಾಗಿ ಸಹಕರಿಸಿದರು. ಈ ವೇಳೆ ಸ್ಪರ್ಧಾ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಂತ್ಯದಲ್ಲಿ ರುಚಿಕರ ಉಪಹಾರ ಮತ್ತು ಸಿಹಿತಿಂಡಿಗಳನ್ನು ಎಲ್ಲರಿಗೂ ನೀಡಲಾಯಿತು. ಕಾರ್ಯಕ್ರಮವನ್ನು ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಹರಿಣಿ ಶೆಟ್ಟಿ, ಸಾಂಸ್ಕೃತಿಕ ಜೊತೆ ಕಾರ್ಯದರ್ಶಿ ಹರೀಶ್ ಗೌಡ ಮತ್ತು ಪ್ರಭಾರ ಕಾರ್ಯದರ್ಶಿ ಹರಿನಾಥ್ ಸುವರ್ಣ ಅವರ ಸಮನ್ವಯದಲ್ಲಿ ಯಶಸ್ವಿಯಾಗಿ ನೆರವೇರಿಸಲಾಯಿತು.

Hot this week

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

ಬಹರೈನ್‌; ‘ಕೆಸಿಎಫ್’ನಿಂದ ಈದ್ ಮಿಲಾದ್ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ

ಮನಾಮ: ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್) ಬಹರೈನ್‌ ವತಿಯಿಂದ ಪ್ರವಾದಿ ಮುಹಮ್ಮದ್‌ರವರ...

ಅಮೇರಿಕ; ಭಕ್ತಿ, ಬಸವತತ್ವ, ನಾಟಕ-ನೃತ್ಯ ವೈಭವದಿಂದ ಕಂಗೊಳಿಸಿದ VSNA ಮಹಾಸಮ್ಮೇಳನದ ಎರಡನೇ ದಿನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಸ್ಯಾನ್‌ಫೋರ್ಡ್ (ಉತ್ತರ ಕೆರೊಲಿನಾ: 48ನೇ ವೀರಶೈವ ಸೊಸೈಟಿ...

ಕನ್ನಡ ಸಂಘ ಬಹರೈನ್‌ನ ‘ಯಕ್ಷ ವೈಭವ 2026’ ಮುಹೂರ್ತ ಪೂಜೆ ಸಂಪನ್ನ

ಬಹರೈನ್‌: ಕನ್ನಡ ಸಂಘ ಬಹರೈನ್ ಅರ್ಪಿಸುವ ‘ಯಕ್ಷ ವೈಭವ 2026’ ರ...

ಅಮೇರಿಕ; ಉತ್ತರ ಕೆರೊಲಿನಾದಲ್ಲಿ 48ನೇ ವಿಎಸ್‌ಎನ್‌ಎ ಮಹಾಸಮ್ಮೇಳನಕ್ಕೆ ಅದ್ದೂರಿ ಚಾಲನೆ

-ಬೆಂಕಿ ಬಸಣ್ಣ, ಉತ್ತರ ಕೆರೊಲಿನಾ ಉತ್ತರ ಅಮೇರಿಕದ ವೀರಶೈವ-ಲಿಂಗಾಯತ ಸಮುದಾಯದ ಅತ್ಯಂತ ಹಿರಿಯ...

Related Articles

Popular Categories