ಯುಎಸ್‌ಎನಾವಿಕ ವಿಶ್ವ ಕನ್ನಡ ಸಮಾವೇಶಕ್ಕೆ ಮೆರಗು ತಂದ ಅಟ್ಲಾಂಟ...

ನಾವಿಕ ವಿಶ್ವ ಕನ್ನಡ ಸಮಾವೇಶಕ್ಕೆ ಮೆರಗು ತಂದ ಅಟ್ಲಾಂಟ ಕನ್ನಡಿಗರು; ಕನ್ನಡಿಗರ ಮೆಚ್ಚುಗೆಗೆ ಪಾತ್ರವಾದ ‘ಶಂಭೋ, ಶಿವ ಶಂಭೋ’ ನಾಟಕ ಪ್ರದರ್ಶನ

ಕೆ.ಆರ್.ಶ್ರೀನಾಥ್, ಅಟ್ಲಾಂಟ

ಅಮೆರಿಕದ ಫ್ಲೋರಿಡಾ ರಾಜ್ಯದ ಟ್ಯಾಂಪಾ ನಗರದಲ್ಲಿ ನಡೆಯುತ್ತಿರುವ ‘8ನೇ ನಾವಿಕ ವಿಶ್ವ ಕನ್ನಡ ಸಮಾವೇಶ 2025’ರಲ್ಲಿ ಅಟ್ಲಾಂಟದ ನೃಪತುಂಗ ಕನ್ನಡ ಕೂಟದ ಸದಸ್ಯರು ಶನಿವಾರದಂದು “ಶಂಭೋ, ಶಿವ ಶಂಭೋ” ನಾಟಕ ಪ್ರದರ್ಶನ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ಕಿಕ್ಕಿರಿದು ನೆರೆದಿದ್ದ ಸಭಾಂಗಣದಲ್ಲಿ ಅಟ್ಲಾಂಟ ಕನ್ನಡಿಗರ ಈ ಹಾಸ್ಯ ನಾಟಕವು ಬೃಹತ್ ಕರತಾಡನದೊಂದಿಗೆ ಸಭಿಕರಿಂದ ಬಹಳ ಮೆಚ್ಚುಗೆ ಪಡೆಯಿತು.

ಕಾರ್ಲೊ ಗೋಲ್ಡೊನಿಯವರ ಇಟಾಲಿಯನ್ ನಾಟಕ “ದಿ ಸರ್ವೆಂಟ್ ಆಫ್ ಟು ಮಾಸ್ಟರ್ಸ್” ಮೂಲವನ್ನು ಆಧರಿಸಿದ ಈ ನಾಟಕವನ್ನು ಖ್ಯಾತ ರಂಗಕರ್ಮಿ, ಚಲನಚಿತ್ರ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಬಿ.ಸುರೇಶ್ ಅವರು ನಿರ್ದೇಶಿಸಿದ್ದರು.

ಅಟ್ಲಾಂಟ ಕನ್ನಡಿಗರ ಪ್ರೀತಿ, ಸ್ನೇಹದ ಒತ್ತಾಸೆಗೆ ಮಣಿದು ಕೆಲವು ದಿನ ಇಲ್ಲಿಯೇ ಉಳಿದು ಈ ನಾಟಕವನ್ನು ಬಿ. ಸುರೇಶ್ ಅವರು ನಿರ್ದೇಶಿಸಿದ್ದರು. ಒಂದು ದಿನ ಬಿಡುವು ಮಾಡಿಕೊಂಡು ಅಟ್ಲಾಂಟ ಕನ್ನಡಿಗರಿಗೆ ಚಲನಚಿತ್ರದ ಕಥಾ ರಚನೆಯಿಂದ ಇತರ ವಿವಿಧ ಆಯಾಮಗಳನ್ನು ಒಂದು ಶಿಬಿರದಲ್ಲಿ ವಿವರಿಸಿದರು.

ಕನ್ನಡ ಚಿತ್ರ ನಟ ಶ್ರೀನಾಥ್, ರಮೇಶ್ ಅರವಿಂದ್, ರಕ್ಷಿತ್ ಶೆಟ್ಟಿ, ರಮ್ಯಾ, ಸಿಹಿ ಕಹಿ ಚಂದ್ರು ಹಾಗೂ ಇನ್ನಿತರ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮುಂದಿನ ನಾವಿಕ-2027 ವಿಶ್ವ ಕನ್ನಡ ಸಮಾವೇಶವನ್ನು ಅಟ್ಲಾಂಟ ನಗರದಲ್ಲಿ 2027ರಲ್ಲಿ ವಿಜೃಂಭಣೆಯಿಂದ ಆಯೋಜಿಸಲು ತೀರ್ಮಾನಿಸಲಾಗಿದೆ. ನೃಪತುಂಗ ಕನ್ನಡ ಕೂಟವು ಈ ಸಮ್ಮೇಳನಕ್ಕೆ ಈಗಾಗಲೆ ಬೃಹತ್ ಸಭಾಂಗಣವನ್ನು ಬುಕ್ ಮಾಡಿ ತಯಾರಿ ನಡೆಸಿದೆ.

Hot this week

ಅಬುಧಾಬಿಗೆ ಸಚಿವ ಡಾ.ಜೈಶಂಕರ್ ಭೇಟಿ; ಕನ್ನಡಿಗರ ಕೂಟ ದುಬೈ-ಅಬುಧಾಬಿ ಕರ್ನಾಟಕ ಸಂಘ ಪ್ರತಿನಿಧಿತ್ವ

ಅಬುಧಾಬಿ: ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು...

ದುಬೈ; ‘ಬ್ಯಾರೀಸ್ ಪ್ರೀಮಿಯರ್ ಲೀಗ್-2026’ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕ್ರೌನ್ ಹೊನ್ನಾವರ; ನಫೀಸ್ ಗ್ರೂಪ್ ರನ್ನರ್ ಅಪ್

ದುಬೈ: ಶಾರ್ಜಾದ ಬಿಜೋಯ್ಸ್ ಕ್ರಿಕೆಟ್ ಕ್ರೀಡಾಗಂಣದಲ್ಲಿ ರವಿವಾರ ನಡೆದ 'ಬ್ಯಾರೀಸ್ ಪ್ರೀಮಿಯರ್...

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಆಯ್ಕೆ

ದುಬೈ: ಕರ್ನಾಟಕ ಸಂಘ ಶಾರ್ಜಾ ಇದರ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ...

ರಮಝಾನ್-ಈದುಲ್ ಫಿತ್ರ್ ಅಂಗವಾಗಿ ಕನ್ನಡ ಸಂಘ ಬಹರೈನ್ ವತಿಯಿಂದ ಆಹಾರ ವಸ್ತುಗಳ ಕಿಟ್ ವಿತರಣೆ

ಬಹರೈನ್: ಪವಿತ್ರ ರಮಝಾನ್ ಮತ್ತು ಈದುಲ್ ಫಿತ್ರ್ ಹಬ್ಬದ ಅಂಗವಾಗಿ ಪ್ರಸ್ತುತ...

Related Articles

Popular Categories