ಯುಎಸ್‌ಎನಾವಿಕ ವಿಶ್ವ ಕನ್ನಡ ಸಮಾವೇಶಕ್ಕೆ ಮೆರಗು ತಂದ ಅಟ್ಲಾಂಟ...

ನಾವಿಕ ವಿಶ್ವ ಕನ್ನಡ ಸಮಾವೇಶಕ್ಕೆ ಮೆರಗು ತಂದ ಅಟ್ಲಾಂಟ ಕನ್ನಡಿಗರು; ಕನ್ನಡಿಗರ ಮೆಚ್ಚುಗೆಗೆ ಪಾತ್ರವಾದ ‘ಶಂಭೋ, ಶಿವ ಶಂಭೋ’ ನಾಟಕ ಪ್ರದರ್ಶನ

ಕೆ.ಆರ್.ಶ್ರೀನಾಥ್, ಅಟ್ಲಾಂಟ

ಅಮೆರಿಕದ ಫ್ಲೋರಿಡಾ ರಾಜ್ಯದ ಟ್ಯಾಂಪಾ ನಗರದಲ್ಲಿ ನಡೆಯುತ್ತಿರುವ ‘8ನೇ ನಾವಿಕ ವಿಶ್ವ ಕನ್ನಡ ಸಮಾವೇಶ 2025’ರಲ್ಲಿ ಅಟ್ಲಾಂಟದ ನೃಪತುಂಗ ಕನ್ನಡ ಕೂಟದ ಸದಸ್ಯರು ಶನಿವಾರದಂದು “ಶಂಭೋ, ಶಿವ ಶಂಭೋ” ನಾಟಕ ಪ್ರದರ್ಶನ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ಕಿಕ್ಕಿರಿದು ನೆರೆದಿದ್ದ ಸಭಾಂಗಣದಲ್ಲಿ ಅಟ್ಲಾಂಟ ಕನ್ನಡಿಗರ ಈ ಹಾಸ್ಯ ನಾಟಕವು ಬೃಹತ್ ಕರತಾಡನದೊಂದಿಗೆ ಸಭಿಕರಿಂದ ಬಹಳ ಮೆಚ್ಚುಗೆ ಪಡೆಯಿತು.

ಕಾರ್ಲೊ ಗೋಲ್ಡೊನಿಯವರ ಇಟಾಲಿಯನ್ ನಾಟಕ “ದಿ ಸರ್ವೆಂಟ್ ಆಫ್ ಟು ಮಾಸ್ಟರ್ಸ್” ಮೂಲವನ್ನು ಆಧರಿಸಿದ ಈ ನಾಟಕವನ್ನು ಖ್ಯಾತ ರಂಗಕರ್ಮಿ, ಚಲನಚಿತ್ರ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಬಿ.ಸುರೇಶ್ ಅವರು ನಿರ್ದೇಶಿಸಿದ್ದರು.

ಅಟ್ಲಾಂಟ ಕನ್ನಡಿಗರ ಪ್ರೀತಿ, ಸ್ನೇಹದ ಒತ್ತಾಸೆಗೆ ಮಣಿದು ಕೆಲವು ದಿನ ಇಲ್ಲಿಯೇ ಉಳಿದು ಈ ನಾಟಕವನ್ನು ಬಿ. ಸುರೇಶ್ ಅವರು ನಿರ್ದೇಶಿಸಿದ್ದರು. ಒಂದು ದಿನ ಬಿಡುವು ಮಾಡಿಕೊಂಡು ಅಟ್ಲಾಂಟ ಕನ್ನಡಿಗರಿಗೆ ಚಲನಚಿತ್ರದ ಕಥಾ ರಚನೆಯಿಂದ ಇತರ ವಿವಿಧ ಆಯಾಮಗಳನ್ನು ಒಂದು ಶಿಬಿರದಲ್ಲಿ ವಿವರಿಸಿದರು.

ಕನ್ನಡ ಚಿತ್ರ ನಟ ಶ್ರೀನಾಥ್, ರಮೇಶ್ ಅರವಿಂದ್, ರಕ್ಷಿತ್ ಶೆಟ್ಟಿ, ರಮ್ಯಾ, ಸಿಹಿ ಕಹಿ ಚಂದ್ರು ಹಾಗೂ ಇನ್ನಿತರ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮುಂದಿನ ನಾವಿಕ-2027 ವಿಶ್ವ ಕನ್ನಡ ಸಮಾವೇಶವನ್ನು ಅಟ್ಲಾಂಟ ನಗರದಲ್ಲಿ 2027ರಲ್ಲಿ ವಿಜೃಂಭಣೆಯಿಂದ ಆಯೋಜಿಸಲು ತೀರ್ಮಾನಿಸಲಾಗಿದೆ. ನೃಪತುಂಗ ಕನ್ನಡ ಕೂಟವು ಈ ಸಮ್ಮೇಳನಕ್ಕೆ ಈಗಾಗಲೆ ಬೃಹತ್ ಸಭಾಂಗಣವನ್ನು ಬುಕ್ ಮಾಡಿ ತಯಾರಿ ನಡೆಸಿದೆ.

Hot this week

ಜರ್ಮನಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಜಾನಪದ ವೈಭವ; ಸಂಸ್ಕೃತಿಯ ಗತ ವೈಭವ ಸೃಷ್ಟಿ

ಜರ್ಮನಿ: ರೈನ್ ಮೈನ್ ಕನ್ನಡ ಸಂಘದಿಂದ ಇದೇ ಮೊದಲ ಬಾರಿಗೆ ಶನಿವಾರ...

ಕನ್ನಡ ಸಂಘ ಬಹರೈನ್‌ನಿಂದ ಆರೋಗ್ಯ ದಿನ; ಉಚಿತ ವೈದ್ಯಕೀಯ ಶಿಬಿರ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಅಲ್ ಹಿಲಾಲ್ ಹೆಲ್ತ್ ಕೇರ್...

ಕರ್ನಾಟಕ ಸಂಘ ಖತರ್‌ಗೆ ನೂತನ ಆಡಳಿತ ಸಮಿತಿ ಆಯ್ಕೆ; 2026–2028 ಅವಧಿಗೆ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವಿರೋಧ ಆಯ್ಕೆ

ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ...

ಖತರ್‌ ಕರ್ನಾಟಕ ಸಂಘದಿಂದ ‘ತಾಯಂದಿರ ದಿನ 2026’ ಆಚರಣೆ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)...

ಮೇ 15ರಂದು ಬಹರೈನ್ ಕನ್ನಡ ಸಂಘದ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ

ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ಅಲ್ ಹಿಲಾಲ್ ಹೆಲ್ತ್ ಕೇರ್ ಗ್ರೂಪ್...

Related Articles

Popular Categories