ಯುಎಇನವೆಂಬರ್ 8ರಂದು ನಡೆಯುವ 'ಕನ್ನಡ ಕೂಟ ದುಬೈ'ಯ 'ಕನ್ನಡ...

ನವೆಂಬರ್ 8ರಂದು ನಡೆಯುವ ‘ಕನ್ನಡ ಕೂಟ ದುಬೈ’ಯ ‘ಕನ್ನಡ ರಾಜ್ಯೋತ್ಸವ’ಕ್ಕೆ U. T. ಖಾದರ್​ಗೆ ಆಮಂತ್ರಣ; ನಟ ಶಿವರಾಜ್ ಕುಮಾರ್​ಗೆ ಪ್ರತಿಷ್ಠಿತ ‘ಅಂತಾರಾಷ್ಟ್ರೀಯ ಕನ್ನಡ ರತ್ನ’ ಪ್ರಶಸ್ತಿ

ದುಬೈ: ನವೆಂಬರ್ 8ರಂದು ದುಬೈನಲ್ಲಿ ನಡೆಯುವ ‘ಕನ್ನಡ ಕೂಟ ದುಬೈ’ನ ”ಕನ್ನಡ ರಾಜ್ಯೋತ್ಸವ” ಕಾರ್ಯಕ್ರಮಕ್ಕೆ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ U.T. ಖಾದರ್‌ ಅವರನ್ನು ಅತಿಥಿಯಾಗಿ ಆಹ್ವಾನಿಸಲಾಯಿತು.

‘ಕನ್ನಡ ಕೂಟ ದುಬೈ’ಯ ಆಹ್ವಾನದ ಆಮಂತ್ರಣವನ್ನು ಮನಃಪೂರ್ವಕವಾಗಿ ಸ್ವೀಕರಿಸಿ, ಕಾರ್ಯಕ್ರಮದಲ್ಲಿ ತಮ್ಮ ಉಪಸ್ಥಿತಿಯನ್ನು ಖಾದರ್‌ ಅವರು ದೃಢಪಡಿಸಿದರು.

ಈ ಸಂದರ್ಭದಲ್ಲಿ ಸಂಘದ ವಿವರ, ಉದ್ದೇಶಗಳು, ಸಾಂಸ್ಥಿಕ ಸಾಧನೆಗಳು ಮತ್ತು ಹಿಂದಿನ ಕಾರ್ಯಕ್ರಮದ ವಿವರಗಳನ್ನು ಒಳಗೊಂಡ “ಪರಿಚಯ ಪುಸ್ತಕ”ವನ್ನು ಅವರಿಗೆ ನೀಡಲಾಯಿತು.

ಈ ವೇಳೆ ಕನ್ನಡಿಗರ ಕೂಟ ದುಬೈ ಅಧ್ಯಕ್ಷ ಅರುಣ್ ಕುಮಾರ್ ಎಂ.ಕೆ., ಪೋಷಕ, ಸಲಹಾ ಸಮಿತಿಯ ಸದಸ್ಯರಾದ ಮಂಜುನಾಥ್ ರಾಜನ್ ಮತ್ತಿತರರು ಹಾಜರಿದ್ದರು.

ನವೆಂಬರ್ 8ರಂದು ದುಬೈಯ ಅತೀ ದೊಡ್ಡ ವೇದಿಕೆಯಲ್ಲಿ ನಡೆಯಲಿರುವ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಕನ್ನಡದ ಖ್ಯಾತ ನಟ ಶಿವರಾಜ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಈ ವೇಳೆ ಅವರಿಗೆ ಪ್ರತಿಷ್ಠಿತ ‘ಅಂತಾರಾಷ್ಟ್ರೀಯ ಕನ್ನಡ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅರುಣ್ ಕುಮಾರ್ ಎಂ.ಕೆ. ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಜಾನಪದ ಉತ್ಸವದಲ್ಲಿ ಕಾರ್ಯಕ್ರಮದ ಫ್ಲೈಯರ್ ಬಿಡುಗಡೆ
‘ಕನ್ನಡ ರಾಜ್ಯೋತ್ಸವ’ ಕಾರ್ಯಕ್ರಮದ ಫ್ಲೈಯರ್ (Flyer) ನ್ನು ಕರ್ನಾಟಕ ಜಾನಪದ ಪರಿಷತ್ UAE ಘಟಕ ರವಿವಾರ ದುಬೈಯಲ್ಲಿ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಜಾನಪದ ಉತ್ಸವ – 2025 ‘ರ ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಡುಗಡೆಗೊಳಿಸಲಾಯಿತು.

Hot this week

DKSC ಕುವೈತ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾಗಿ ಅನ್ವರ್ ಸಾಹೇಬ್ ಕುಂಜಾಲ್ ಆಯ್ಕೆ

ಕುವೈತ್: ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (DKSC), ಇದರ ಕುವೈತ್ ರಾಷ್ಟ್ರೀಯ...

ಕರ್ನಾಟಕ ಸಂಘ ಖತರ್‌ನಿಂದ ರಮಝಾನ್‌ ಸೇವಾ ಕಾರ್ಯ: ಇಫ್ತಾರ್ ಆಹಾರ ಕಿಟ್‌ಗಳ ವಿತರಣೆ

ಕರ್ನಾಟಕ ಸಂಘ ಖತರ್‌ (KSQ), ರಮಝಾನ್‌ ಮಾಸದ ಪವಿತ್ರ ಚಟುವಟಿಕೆಗಳ ಭಾಗವಾಗಿ...

ಅಟ್ಲಾಂಟ ಒಕ್ಕಲಿಗರ ಕೂಟದಿಂದ ಪ್ರಥಮ ಸಮಾವೇಶ

ಕೆ. ಆರ್. ಶ್ರೀನಾಥ್, ಅಟ್ಲಾಂಟ ಅಟ್ಲಾಂಟ: ಫೆಬ್ರವರಿ 22ರ ರವಿವಾರದಂದು ಅಟ್ಲಾಂಟದಲ್ಲಿ ನೆಲಸಿರುವ...

AIM India Forum Delegation Meets Indian Ambassador to UAE

Abu Dhabi: A delegation from AIM India Forum met...

Konkani movie ‘My Dear Father’ thrills audience in Kuwait with double premiere shows

Kuwait: The Konkani film My Dear Father was screened...

Related Articles

Popular Categories