ಯುಎಇದುಬೈ; ಅಕ್ಟೋಬರ್ 25ರಂದು '4ನೇ ದುಬೈ ಗಡಿನಾಡ ಉತ್ಸವ':...

ದುಬೈ; ಅಕ್ಟೋಬರ್ 25ರಂದು ‘4ನೇ ದುಬೈ ಗಡಿನಾಡ ಉತ್ಸವ’: ಲೋಗೋ ಬಿಡುಗಡೆ

ದುಬೈ: ಅಕ್ಟೋಬರ್ 25ರಂದು ದುಬೈನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯುಎಇ ಘಟಕದ ವತಿಯಿಂದ ನಡೆಯುವ 4ನೇ “ದುಬೈ ಗಡಿನಾಡ ಉತ್ಸವ”ದ ಲೋಗೋ ವನ್ನು ಅಬೂಹೈಲ್ ಸ್ಪೋರ್ಟ್ಸ್ ಬೈನಲ್ಲಿ ನಡೆದ ಸಮಾರಂಭದಲ್ಲಿ ದುಬೈನ ಹಿರಿಯ ಉದ್ಯಮಿ, ಸಮಾಜ ಸೇವಕ ಜೇಮ್ಸ್ ಮೆಂಡೋನ್ಸ ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ದುಬೈ ಗಡಿನಾಡ ಉತ್ಸವ ಕಾರ್ಯಕ್ರಮವನ್ನು ನೋಡುತ್ತಾ ಬಂದಿದ್ದೆನೆ. ನಾಲ್ಕನೇ ವರ್ಷದ ಕಾರ್ಯಕ್ರಮದ ಕ್ಷಣಗಣನೆಯಲ್ಲಿ ನೀವೆಲ್ಲ ಇದ್ದಿರಿ. ಒಂದು ಒಳ್ಳೆಯ ಕಾರ್ಯಕ್ರಮವಾಗಿ ಮೂಡಿಬರಲಿ ಎಂದು ಶುಭ ಹಾರೈಸಿದರು.

ಅಕಾಡೆಮಿಯ ದುಬೈ ಘಟಕದ ಅಧ್ಯಕ್ಷ ಅಮರ ದೀಪ ಕಲ್ಲೂರಾಯ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಶಿವಶಂಕರ ನಕ್ರಾಜೆ, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್ ಸುಬ್ಬಯಕಟ್ಟೆ, ದುಬೈ ಗಡಿನಾಡ ಉತ್ಸವದ ಸಂಚಾಲಕ ಝಡ್ ಎ ಕಯ್ಯಾರ್, ಅಕಾಡೆಮಿ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಬಾಜೂರಿ, ಕೋಶಾಧಿಕಾರಿ ಅಶ್ರಫ್ ಪಿ ಪಿ, ಪಧಾಧಿಕಾರಿಗಳಾದ ಅಲಿ ಸಾಗ್, ಸುಗಂಧ ರಾಜ್ ಬೇಕಲ್, ಮಂಜುನಾಥ ಕಾಸರಗೋಡು, ಮನ್ಸೂರ್ ಪೆರ್ಲ, ವಿಜಯಕುಮಾರ ಶೆಟ್ಟಿ ಗಾಣದ ಮೂಲೆ, ಅನೀಶ್ ಅಡಪ್ಪ ಮಡಂದೂರು, ಶಾಕೀರ್ ಬಾಯಾರ್ ಮುಂತಾದವರು ಉಪಸ್ಥಿತರಿದ್ದರು.

Hot this week

ದುಬೈ; ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನಲ್ಲಿ ಓಣಂ ಹಬ್ಬ ಆಚರಣೆ

ದುಬೈ : ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಫಾರ್ಚೂನ್ ಗ್ರೂಪ್...

ಕನ್ನಡಿಗರ ಕೂಟ ದುಬೈ ವತಿಯಿಂದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್‌ಗೆ ಸನ್ಮಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ತಂಡವು ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ...

ಫ್ಲೋರಿಡಾ ತುಳು ಕೂಟದ 2ನೇ ವಾರ್ಷಿಕ ಪೊಟ್ಲಕ್ ಪಿಕ್ನಿಕ್ ಸಂಭ್ರಮ

ಅಮೇರಿಕದ ಫ್ಲೋರಿಡಾ ತುಳು ಕೂಟವು ಇತ್ತೀಚೆಗೆ ಕ್ಯಾಸೆಲ್‌ಬೆರ್ರಿ ಒರ್ಲಾಂಡೊದಲ್ಲಿ ತನ್ನ ಎರಡನೇ...

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

Related Articles

Popular Categories