ಒಮಾನ್ಮೂರು ತಿಂಗಳಿಂದ ಮಸ್ಕತ್ –ಮಂಗಳೂರು ನೇರ ವಿಮಾನ ಸೇವೆ...

ಮೂರು ತಿಂಗಳಿಂದ ಮಸ್ಕತ್ –ಮಂಗಳೂರು ನೇರ ವಿಮಾನ ಸೇವೆ ಸ್ಥಗಿತ; ಸಂಕಷ್ಟದಲ್ಲಿ ಪ್ರಯಾಣಿಕರು! ಪುನರಾರಂಭಿಸುವಂತೆ ಒತ್ತಾಯಿಸಿ ಅನಿವಾಸಿ ಕನ್ನಡಿಗರಿಂದ ಸಂಸದರಿಗೆ ಮನವಿ

ಮಸ್ಕತ್: ಮಂಗಳೂರು–ಮಸ್ಕತ್ ನೇರ ವಿಮಾನಯಾನ ಸೇವೆಯನ್ನು ಕಳೆದ ಮೂರು ತಿಂಗಳಿಂದ ವಿಮಾನಯಾನ ಸಂಸ್ಥೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದರಿಂದ ಅನಿವಾಸಿ ಭಾರತೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಈ ವಿಮಾನಯಾನ ಸೇವೆಯನ್ನು ಪುನರಾರಂಭಿಸುವಂತೆ ಅನಿವಾಸಿ ಭಾರತೀಯರು ಒತ್ತಾಯಿಸಿದ್ದು, ಸಂಸದರಿಗೆ ಮನವಿ ಸಲ್ಲಿಸಿದ್ದಾರೆ.

ಈ ಮಾರ್ಗದಲ್ಲಿ ಮೊದಲು ವಾರಕ್ಕೆ ನಾಲ್ಕು ವಿಮಾನಗಳು ನಿಯಮಿತವಾಗಿ ಸಂಚಾರ ನಡೆಸುತ್ತಿದ್ದವು. ದಶಕಗಳಿಂದ ನಿರಂತರವಾಗಿ ನಡೆದಿದ್ದ ಈ ಸೇವೆ ಅಚಾನಕ್ ಸ್ಥಗಿತಗೊಂಡಿದ್ದು, ಮಸ್ಕತ್‌ನಲ್ಲಿ ನೆಲೆಸಿರುವ ಕರಾವಳಿ ಪ್ರದೇಶದ ಅನಿವಾಸಿ ಭಾರತೀಯ ಪ್ರಯಾಣಿಕರಿಗೆ ಸಂಕಷ್ಟ ಉಂಟುಮಾಡಿದೆ.

ಗಲ್ಫ್‌ನ ಬಹುತೇಕ ರಾಷ್ಟ್ರಗಳಿಗೆ ನೇರ ವಿಮಾನ ಸೇವೆ ಮುಂದುವರಿದಿರುವ ಸಂದರ್ಭದಲ್ಲಿ, ಇತ್ತೀಚೆಗೆ ಕುವೈತ್ ದೇಶಕ್ಕೂ ನೇರ ವಿಮಾನ ಸೇವೆ ಆರಂಭಗೊಂಡಿದೆ. ಆದರೆ ಮಸ್ಕತ್‌ನಿಂದ ಮಂಗಳೂರಿಗೆ ಪ್ರಯಾಣಿಸುವವರು ಈಗ ದೆಹಲಿ, ಮುಂಬೈ ಅಥವಾ ಕೇರಳದ ಕನ್ನೂರು ಮೂಲಕ ಪ್ರಯಾಣಿಸಬೇಕಾದ ಪರಿಸ್ಥಿತಿ ಎದುರಾಗಿದೆ. ದಿನವಿಡೀ ಪ್ರಯಾಣದ ಬಳಿಕ ಮಾತ್ರ ಮಂಗಳೂರು ತಲುಪಬೇಕಾಗಿರುವುದರಿಂದ ಅನೇಕರು ಸಂಕಷ್ಟ ಎದುರಿಸುವಂತಾಗಿದೆ.

ವಾರಕ್ಕೆ ನಾಲ್ಕು ವಿಮಾನಗಳ ಬದಲು ಕನಿಷ್ಠ ಎರಡು ವಿಮಾನ ಸೇವೆ ಮರುಪ್ರಾರಂಭಿಸಬೇಕೆಂಬುದು ಓಮಾನ್‌ನಲ್ಲಿ ನೆಲೆಸಿರುವ ಕುಮುಟ, ಕುಂದಾಪುರ, ಉಡುಪಿ, ಚಿಕ್ಕಮಗಳೂರು, ಮಂಗಳೂರು ಹಾಗೂ ಕಾಸರಗೋಡು ಪ್ರದೇಶದ ಅನಿವಾಸಿಗಳ ಒತ್ತಾಯವಾಗಿದೆ. ಈ ಕುರಿತು ತಕ್ಷಣದ ಸ್ಪಂದಿಸುವಂತೆ ಅವರು ಮನವಿ ಮಾಡಿದ್ದಾರೆ.

ಸಂಸದರಿಗೆ ಮನವಿ ಪತ್ರ ಸಲ್ಲಿಕೆ
ಮಸ್ಕತ್ ಮತ್ತು ಕರಾವಳಿ ಪ್ರದೇಶದ ಅನಿವಾಸಿ ಭಾರತೀಯರು (NRI) ಈ ನೇರ ವಿಮಾನ ಸೇವೆಯನ್ನು ಮರುಪ್ರಾರಂಭಿಸಲು ಕಾಸರಗೋಡು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಹಾಗೂ ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮನವಿ ಸಲ್ಲಿಸಿದ್ದಾರೆ.

ಈ ಕುರಿತು ಓಮಾನ್‌ನ ಹಿರಿಯ ಸಮುದಾಯ ನಾಯಕ ಮಲ್ಲಾರ್ ಶಶಿಧರ ಶೆಟ್ಟಿಯವರು ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ವಿಷಯ ತಿಳಿಸಿ, ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೂ ತಂದಿದ್ದಾರೆ.

ಓಮಾನ್‌ನ ಸಮುದಾಯ ಸಂಘಟನೆಗಳಿಂದ ಮನವಿ
ಶಶಿಧರ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಓಮಾನ್‌ನಲ್ಲಿರುವ ಕರಾವಳಿ ಕರ್ನಾಟಕದ ಹಲವು ಸಮುದಾಯ ಸಂಘಟನೆಗಳು ಮತ್ತು ಸಾಂಸ್ಕೃತಿಕ ವೇದಿಕೆಗಳು ಈ ವಿಷಯವನ್ನು ಸಂಸದರು ಮತ್ತು ಶಾಸಕರ ಗಮನಕ್ಕೆ ತಂದಿದ್ದು, ಕೂಡಲೇ ಸ್ಪಂದಿಸುವಂತೆ ಮನವಿ ಮಾಡಿದೆ.

ಗಡಿನಾಡ ಸಾಹಿತ್ಯ ಅಕಾಡೆಮಿ– ಓಮಾನ್, ಕೆಎಂಸಿಸಿ ಮಂಜೇಶ್ವರ ಮಂಡಲ ಅಧ್ಯಕ್ಷ ಅಬುಬಕರ್ ರಾಯಲ್ ಬೂಲ್ಲಾರ್, ಕರ್ನಾಟಕ ಜಾನಪದ ಪರಿಷತ್ತು – ಓಮಾನ್ ಘಟಕ ಅಧ್ಯಕ್ಷ ಶಿವಾನಂದ ಕೋಟ್ಯಾನ್, ಮೂಗವೀರ ಮಸ್ಕತ್ ಅಧ್ಯಕ್ಷ ಪದ್ಮಕರ ಮೆಂಡನ್, ಮಸ್ಕತ್ ಹಿರಿಯರಾದ ಯುವರಾಜ್ ಮಸ್ಕತ್, ವಿಠಲ ಪೂಜಾರಿ ಮತ್ತು ಮಸ್ಕತ್ ನ ಹಿರಿಯ ಕ್ರಿಕೆಟ್ ಆಟಗಾರ ಸತೀಶ್ ಬಾರ್ಕೂರು ಸಹಿತ ಉಡುಪಿ ಸಮಾಜಿಕ ಮುಂದಾಳು ಉದಯ ಕುಮಾರ್ ಶೆಟ್ಟಿ ಮತ್ತು ಕಲಾವಿದ ರಾಜಾ ಕಟಪಾಡಿ ಮುಂತಾದವರು ಮನವಿಯನ್ನು ಸಲ್ಲಿಸಿದ್ದಾರೆ. ಸರ್ಕಾರ ಮತ್ತು ವಿಮಾನಯಾನ ಇಲಾಖೆಯು ಈ ಬಗ್ಗೆ ತಕ್ಷಣ ಸ್ಪಂದಿಸಿ, ಮಸ್ಕತ್–ಮಂಗಳೂರು ನೇರ ವಿಮಾನ ಸೇವೆ ಪುನರಾರಂಭಿಸುವಂತೆ ಅವರು ಒತ್ತಾಯಿಸಿದ್ದಾರೆ.

Hot this week

Kuwait: KCWA’s annual family picnic draws over 600 attendees at Mishref Garden

Kuwait: The Kuwait Canara Welfare Association (KCWA) organised its...

ಖತರ್‌ನಲ್ಲಿ ಕರಾವಳಿ ಕನ್ನಡಿಗನ ಸಾಧನೆ; ಅಂಡರ್ 19 ಕ್ರಿಕೆಟ್ ತಂಡಕ್ಕೆ ಮಂಗಳೂರು ಮೂಲದ ಎಸ್ಸಾಮ್ ಮನ್ಸೂರ್ ಆಯ್ಕೆ

ದೋಹಾ: ಕರ್ನಾಟಕದ ಮಂಗಳೂರು ಮೂಲದ ಯುವಕ ಎಸ್ಸಾಮ್ ಮನ್ಸೂರ್, ಖತರ್ ಅಂಡರ್...

ರೊನಾಲ್ಡ್ ಮಾರ್ಟಿಸ್​ಗೆ ಶಾರ್ಜಾ ಕರ್ನಾಟಕ ಸಂಘದಿಂದ ‘ಮಯೂರ-ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

ದುಬೈ: ದುಬೈನಲ್ಲಿ ಇರುವ ಕನ್ನಡ ಪರ ಸಂಘಟನೆಗಳಲ್ಲಿ ಅರ್ಥಪೂರ್ಣ ಕಾರ್ಯಕ್ರಮ ಮಾಡುವುದರಲ್ಲಿ...

ಖತರ್‌ನಲ್ಲಿ ಕರ್ನಾಟಕ ರಾಜ್ಯೋತ್ಸವ – ರಜತ ಸಂಭ್ರಮ ಸಮಾರೋಪ: ಗಲ್ಫ್ ನಾಡಿನಲ್ಲಿ ಗಂಧದ ನಾಡಿನ ವೈಭವ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ)ನ ಕರ್ನಾಟಕ ರಾಜ್ಯೋತ್ಸವ – ರಜತ...

ದುಬೈ: ಕನ್ನಡಿಗರ ಕೂಟದಿಂದ ʼಕನ್ನಡ ರಾಜ್ಯೋತ್ಸವ 2025ʼ ಭವ್ಯ ಸಂಭ್ರಮ

ದುಬೈ: ಕನ್ನಡಿಗರ ಕೂಟ – ದುಬೈ ಮತ್ತು ಗಲ್ಫ್ ಕನ್ನಡ ಮೂವೀಸ್...

Related Articles

Popular Categories