ಯುಎಇದುಬೈ: ಎಸ್‌.ಕೆ.ಎಸ್.ಎಸ್.ಎಫ್ ವಿಖಾಯ ವತಿಯಿಂದ ಅ.12ರಂದು ಬೃಹತ್ ರಕ್ತದಾನ...

ದುಬೈ: ಎಸ್‌.ಕೆ.ಎಸ್.ಎಸ್.ಎಫ್ ವಿಖಾಯ ವತಿಯಿಂದ ಅ.12ರಂದು ಬೃಹತ್ ರಕ್ತದಾನ ಶಿಬಿರ

ದುಬೈ: ಸಾಮಾಜಿಕ ಧಾರ್ಮಿಕ ರಂಗದಲ್ಲಿ ಪ್ರಚಲಿತದಲ್ಲಿರುವ ಎಸ್‌.ಕೆ.ಎಸ್.ಎಸ್.ಎಫ್ ವಿಖಾಯ ಯುಎಇ ಸಮಿತಿ ವತಿಯಿಂದ ಪ್ರತಿ ವರ್ಷ ನಡೆಸಿಕೊಂಡು ಬರುತ್ತಿರುವ ಬೃಹತ್ ರಕ್ತದಾನ ಶಿಬಿರವು ಅ.12 ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 2.30 ರವರೆಗೆ ಒದ್ ಮೆಹ್ತಾ ಹತ್ತಿರವಿರುವ ರಕ್ತದಾನ ಕೇಂದ್ರದಲ್ಲಿ ನಡೆಯಲಿದೆ.

ಪ್ರಸಕ್ತ ಕಾರ್ಯಕ್ರಮದ ಕುರಿತು ವಿಖಾಯ ಚೆಯರ್‌ಮ್ಯಾನ್ ಅನ್ವರ್ ಮಾಣಿಲ ಹಾಗು ಕನ್ವೀನಿಯರ್ ನಿಝಾಮ್ ತೋಡಾರ್ ಪತ್ರಿಕಾ ಪ್ರಕಟಣೆ ನೀಡಿದ್ದು, ವಿಖಾಯ ಸಮಿತಿಯು ಸಾಮಾಜಿಕವಾಗಿ ಅನಿವಾಸಿಗಳೆಡೆಯಲ್ಲಿ ಹೆಚ್ಚು ಪ್ರಚಲಿತದಲ್ಲಿರುವ ಸಂಘಟನೆಯಾಗಿದ್ದು, ಪ್ರತಿ ವರ್ಷ ವಿಖಾಯ ದಿನದ ಪ್ರಯುಕ್ತ ಅಕ್ಟೊಬರ್ ತಿಂಗಳಿನಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸುತ್ತಾ ಬಂದಿದ್ದು ಸುಮಾರು 150ಕ್ಕಿಂತಲೂ ಹೆಚ್ಚು ಯುನಿಟ್ ರಕ್ತವನ್ನು ಸಂಗ್ರಹಿಸುತ್ತಾ ಬಂದಿದೆ.

ಅದರಂತೆ ಸಮಸ್ತ ನೂರನೇ ವರ್ಷಾಚರಣೆ ಹಾಗು ಮರ್ಹೂಂ ಅಬ್ದುಲ್ ರಹ್ಮಾನ್ ಸ್ಮರಣಾರ್ಥ ಅ.12ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2.30ರವರೆಗೆ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಅನಿವಾಸಿ ಸ್ನೇಹಿತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನಿಗಳಾಗಬೇಕೆಂದು ವಿನಂತಿಸಿದರು.

Hot this week

ಅಬುಧಾಬಿಗೆ ಸಚಿವ ಡಾ.ಜೈಶಂಕರ್ ಭೇಟಿ; ಕನ್ನಡಿಗರ ಕೂಟ ದುಬೈ-ಅಬುಧಾಬಿ ಕರ್ನಾಟಕ ಸಂಘ ಪ್ರತಿನಿಧಿತ್ವ

ಅಬುಧಾಬಿ: ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು...

ದುಬೈ; ‘ಬ್ಯಾರೀಸ್ ಪ್ರೀಮಿಯರ್ ಲೀಗ್-2026’ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕ್ರೌನ್ ಹೊನ್ನಾವರ; ನಫೀಸ್ ಗ್ರೂಪ್ ರನ್ನರ್ ಅಪ್

ದುಬೈ: ಶಾರ್ಜಾದ ಬಿಜೋಯ್ಸ್ ಕ್ರಿಕೆಟ್ ಕ್ರೀಡಾಗಂಣದಲ್ಲಿ ರವಿವಾರ ನಡೆದ 'ಬ್ಯಾರೀಸ್ ಪ್ರೀಮಿಯರ್...

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಆಯ್ಕೆ

ದುಬೈ: ಕರ್ನಾಟಕ ಸಂಘ ಶಾರ್ಜಾ ಇದರ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ...

ರಮಝಾನ್-ಈದುಲ್ ಫಿತ್ರ್ ಅಂಗವಾಗಿ ಕನ್ನಡ ಸಂಘ ಬಹರೈನ್ ವತಿಯಿಂದ ಆಹಾರ ವಸ್ತುಗಳ ಕಿಟ್ ವಿತರಣೆ

ಬಹರೈನ್: ಪವಿತ್ರ ರಮಝಾನ್ ಮತ್ತು ಈದುಲ್ ಫಿತ್ರ್ ಹಬ್ಬದ ಅಂಗವಾಗಿ ಪ್ರಸ್ತುತ...

Related Articles

Popular Categories