ಯುಎಇಯುಎಇಯ ಖ್ಯಾತ ಸಾಹಿತಿ, ರಂಗಕರ್ಮಿ ಪ್ರಕಾಶ್ ರಾವ್ ಪಯ್ಯಾರ್​ಗೆ...

ಯುಎಇಯ ಖ್ಯಾತ ಸಾಹಿತಿ, ರಂಗಕರ್ಮಿ ಪ್ರಕಾಶ್ ರಾವ್ ಪಯ್ಯಾರ್​ಗೆ ದುಬೈಯಲ್ಲಿ ಶ್ರದ್ಧಾಂಜಲಿ ಸಭೆ

ದುಬೈ: ಯುಎಇಯ ಕನ್ನಡ ಸಾಹಿತ್ಯ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಅಸಾಮಾನ್ಯ ಸೇವೆ ಸಲ್ಲಿಸಿದ ಖ್ಯಾತ ಬರಹಗಾರ ಹಾಗೂ ರಂಗ ನಿರ್ದೇಶಕ ಪ್ರಕಾಶ್ ರಾವ್ ಪಯ್ಯಾರ್ ಇತ್ತೀಚೆಗೆ ನಿಧನರಾಗಿದ್ದು, ಅವರ ಸ್ಮರಣಾರ್ಥವಾಗಿ ಧ್ವನಿ ಪ್ರತಿಷ್ಠಾನವು ಶ್ರದ್ಧಾಂಜಲಿ ಸಭೆಯನ್ನು ಶುಕ್ರವಾರ ಸಂಜೆ ದುಬೈಯ ಅಬುಹೇಲ್‌ನಲ್ಲಿ ಆಯೋಜಿಸಿತ್ತು.

ಈ ಶ್ರದ್ಧಾಂಜಲಿ ಸಭೆಯಲ್ಲಿ ಪಯ್ಯಾರರ ಸಾಹಿತ್ಯ ಬಳಗದ ಮಿತ್ರರು, ರಂಗಭೂಮಿ ಕಲಾವಿದರು, ಧ್ವನಿ ಪ್ರತಿಷ್ಠಾನದ ಸದಸ್ಯರು, ಅಭಿಮಾನಿಗಳು ಹಾಗೂ ಆತ್ಮೀಯ ಮಿತ್ರವೃಂದದವರು ಭಾಗವಹಿಸಿದ್ದರು.

ಸಭೆಯ ಆರಂಭದಲ್ಲಿ ದೀಪ ಬೆಳಗುವ ಮೂಲಕ ಪಯ್ಯಾರರ ಆತ್ಮಕ್ಕೆ ಶಾಂತಿಗಾಗಿ ಪ್ರಾರ್ಥಿಸಲಾಯಿತು. ನಂತರ ಹಲವಾರು ಮಂದಿ ಅವರ ಸಾಹಿತ್ಯ ಸಾಧನೆ, ರಂಗ ನಿರ್ದೇಶನ ಕೌಶಲ್ಯ ಮತ್ತು ಕನ್ನಡ ಸಂಸ್ಕೃತಿಯ ಬೆಳವಣಿಗೆಗೆ ನೀಡಿದ ಅಮೂಲ್ಯ ಕೊಡುಗೆಗಳ ಕುರಿತು ತಮ್ಮ ಭಾವಪೂರ್ಣ ಸ್ಮರಣಗಳನ್ನು ಹಂಚಿಕೊಂಡರು.

ಪಯ್ಯಾರರ ನಿಧನವು ಯುಎಇಯ ಕನ್ನಡ ಸಾಹಿತ್ಯ ಮತ್ತು ನಾಟಕ ಲೋಕಕ್ಕೆ ಭಾರೀ ನಷ್ಟವೆಂದು, ಅವರ ಸ್ಮರಣೆ ಸದಾ ಪ್ರೇರಣೆಯಾಗಿ ಉಳಿಯಲಿದೆ ಎಂದು ಎಲ್ಲರೂ ಅಭಿಪ್ರಾಯಪಟ್ಟರು. ಧ್ವನಿ ಪ್ರತಿಷ್ಠಾನವು ಮುಂದಿನ ದಿನಗಳಲ್ಲಿ ಅವರ ಅಪೂರ್ಣವಾಗಿ ಉಳಿದ ಮಹತ್ತರದ ಕನಸಾದ ಧ್ವನಿ ಪ್ರತಿಷ್ಠಾನದ 40ರ ಸಂಭ್ರಮದ ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆಯನ್ನೂ ಪ್ರಕಟಿಸಿತು.

Hot this week

Kuwait: KCWA’s annual family picnic draws over 600 attendees at Mishref Garden

Kuwait: The Kuwait Canara Welfare Association (KCWA) organised its...

ಖತರ್‌ನಲ್ಲಿ ಕರಾವಳಿ ಕನ್ನಡಿಗನ ಸಾಧನೆ; ಅಂಡರ್ 19 ಕ್ರಿಕೆಟ್ ತಂಡಕ್ಕೆ ಮಂಗಳೂರು ಮೂಲದ ಎಸ್ಸಾಮ್ ಮನ್ಸೂರ್ ಆಯ್ಕೆ

ದೋಹಾ: ಕರ್ನಾಟಕದ ಮಂಗಳೂರು ಮೂಲದ ಯುವಕ ಎಸ್ಸಾಮ್ ಮನ್ಸೂರ್, ಖತರ್ ಅಂಡರ್...

ರೊನಾಲ್ಡ್ ಮಾರ್ಟಿಸ್​ಗೆ ಶಾರ್ಜಾ ಕರ್ನಾಟಕ ಸಂಘದಿಂದ ‘ಮಯೂರ-ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

ದುಬೈ: ದುಬೈನಲ್ಲಿ ಇರುವ ಕನ್ನಡ ಪರ ಸಂಘಟನೆಗಳಲ್ಲಿ ಅರ್ಥಪೂರ್ಣ ಕಾರ್ಯಕ್ರಮ ಮಾಡುವುದರಲ್ಲಿ...

ಖತರ್‌ನಲ್ಲಿ ಕರ್ನಾಟಕ ರಾಜ್ಯೋತ್ಸವ – ರಜತ ಸಂಭ್ರಮ ಸಮಾರೋಪ: ಗಲ್ಫ್ ನಾಡಿನಲ್ಲಿ ಗಂಧದ ನಾಡಿನ ವೈಭವ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ)ನ ಕರ್ನಾಟಕ ರಾಜ್ಯೋತ್ಸವ – ರಜತ...

ದುಬೈ: ಕನ್ನಡಿಗರ ಕೂಟದಿಂದ ʼಕನ್ನಡ ರಾಜ್ಯೋತ್ಸವ 2025ʼ ಭವ್ಯ ಸಂಭ್ರಮ

ದುಬೈ: ಕನ್ನಡಿಗರ ಕೂಟ – ದುಬೈ ಮತ್ತು ಗಲ್ಫ್ ಕನ್ನಡ ಮೂವೀಸ್...

Related Articles

Popular Categories