ಬಹರೈನ್ಬಹರೈನ್‌ನಲ್ಲಿ 10ನೇ ವಿಶ್ವ ದಾಖಲೆ ಬರೆಯಲು ಮುಂದಾಗಿರುವ ಉಡುಪಿ...

ಬಹರೈನ್‌ನಲ್ಲಿ 10ನೇ ವಿಶ್ವ ದಾಖಲೆ ಬರೆಯಲು ಮುಂದಾಗಿರುವ ಉಡುಪಿ ಪಿತ್ರೋಡಿಯ ಯೋಗಪಟು ತನುಶ್ರೀ!

ಅಕ್ಟೋಬರ್ 24ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಸಿದ್ಧಗೊಂಡ ಬಹರೈನ್ ಕನ್ನಡ ಭವನ ವೇದಿಕೆ

ಬಹರೈನ್: ಯೋಗದ 300 ಆಸನಗಳನ್ನು ತೋರಿಸುವ ಮೂಲಕ ‘ಗೋಲ್ಡನ್ ಬುಕ್ ಓಫ್ ವರ್ಲ್ಡ್ ರೆಕಾರ್ಡ್’ನಲ್ಲಿ ತನ್ನ ಹೆಸರನ್ನು ದಾಖಲಿಸಲು ಉಡುಪಿಯ ತನುಶ್ರೀ ಪಿತ್ರೋಡಿ ಬಹರೈನ್ ದ್ವೀಪ ರಾಷ್ಟ್ರಕ್ಕೆ ಆಗಮಿಸಲಿದ್ದಾರೆ. ಕನ್ನಡ ಸಂಘ ಬಹರೈನ್ ಹಾಗು ಬಹರೈನ್ ಯೋಗ ಕಮ್ಯೂನಿಟಿಯ ಸಹಯೋಗದಲ್ಲಿ ಈ ಕಾರ್ಯಕ್ರಮವು ಇದೇ ಅಕ್ಟೋಬರ್ ತಿಂಗಳ 24ನೇ ತಾರೀಖಿನ ಶುಕ್ರವಾರದಂದು ಬೆಳಗ್ಗೆ 10 ಗಂಟೆಗೆ ಕನ್ನಡ ಭವನದ ಸಭಾಂಗಣದ್ಲಲಿ ಜರುಗಲಿದೆ.

2 ಗಿನ್ನೆಸ್ ದಾಖಲೆ ಹಾಗು 7 ಗೋಲ್ಡನ್ ಬುಕ್ ಓಫ್ ವರ್ಲ್ಡ್ ದಾಖಲೆಯೂ ಸೇರಿದಂತೆ 9 ವಿಶ್ವ ದಾಖಲೆಗಳನ್ನು ತನ್ನ ಹೆಸರಿನಲ್ಲಿ ದಾಖಲಿಸಿರುವ ತನುಶ್ರೀ ಇದೀಗ 10ನೇ ದಾಖಲೆಯನ್ನು ಬಹರೈನ್ ನಲ್ಲಿ ದಾಖಲಿಸಲು ತುಗಳಲ್ಲಿ ನಿಂತಿದ್ದಾಳೆ.

ಕನ್ನಡ ಸಂಘದ ಅಧ್ಯಕ್ಷ ಅಜಿತ್ ಬಂಗೇರ ಅವರ ಅಧ್ಯಕ್ಷತೆಯಲ್ಲಿ ಜರುಗಲಿರುವ ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬಹರೈನ್ ಯೋಗ ಕಮ್ಯೂನಿಟಿಯ ಅಧ್ಯಕ್ಷ ಫಾತಿಮಾ ಅಲ್ ಮನ್ಸೂರಿ ಪಾಲ್ಗೊಳ್ಳುತ್ತಿದ್ದು, ಯುನೀಕೋ ಸಮೂಹ ಸಂಸ್ಥೆಗಳ ಮುಖ್ಯಸ್ಥ ಜಯಶಂಕರ್ ವಿಶ್ವನಾಥನ್, ಇಂಡಿಯನ್ ಕ್ಲಬ್ಬಿನ ಅಧ್ಯಕ್ಷ ಜೋಸೆಫ್ ಜೋಯ್, ಬಹರೈನ್ ಕೇರಳೀಯ ಸಮಾಜಂ ನ ಅಧ್ಯಕ್ಷ ಪಿ.ವಿ.ರಾಧಾಕೃಷ್ಣ ಪಿಳ್ಳೈ, ಇಂಡಿಯನ್ ಸ್ಕೂಲ್ ಬಹರೈನ್ ನ ಚೇರ್ಮ್ಯಾನ್ ಬಿನು ಮಣ್ಣಿಲ್ ವರ್ಗೀಸ್ ಅವರು ಭಾಗವಹಿಸಲಿದ್ದಾರೆ.

ವಿಶ್ವ ದಾಖಲೆಗಾಗಿ ನಡೆಯಲಿರುವ ಈ ಕಾರ್ಯಕ್ರಮದ ತೀರ್ಪುಗಾರರಾಗಿ ಗೋಲ್ಡನ್ ಬುಕ್ ಒಫ್ ವರ್ಲ್ಡ್ ರೆಕಾರ್ಡ್ ನ ಏಷ್ಯಾದ ಮುಖ್ಯಸ್ಥ ಡಾಕ್ಟರ್ ಮನೀಶ್ ವೈಶ್ನೋಯಿ ಕಾರ್ಯನಿರ್ವಹಿಸಲಿದ್ದಾರೆ. ಈ ಕಾರ್ಯಕ್ರಮವನ್ನು ವೀಕ್ಷಿಸಲು ಬಹರೈನ್’ನ ಎಲ್ಲಾ ಕನ್ನಡಿಗರಿಗೂ ಮುಕ್ತ ಅವಕಾಶ ಕಲ್ಪಿಸಲಾಗಿದೆ.

ಈ ಅಭೂತಪೂರ್ವ ಕಾರ್ಯಕ್ರಮದಲ್ಲಿ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಂದು ಅಧ್ಯಕ್ಷರಾದ ಅಜಿತ್ ಬಂಗೇರ ಮನವಿ ಮಾಡಿದ್ದಾರೆ. ಈ ಕಾರ್ಯಕ್ರಮದ ಬಗೆಗಿನ ಹೆಚ್ಚಿನ ವಿವರಗಳಿಗೆ ಸಂಘದ ಅಧ್ಯಕ್ಷರನ್ನು ದೂರವಾಣಿ ಸಂಖ್ಯೆ 00973-36721660 ಮೂಲಕ ಸಂಪರ್ಕಿಸಬಹುದು.

ವರದಿ-ಕಮಲಾಕ್ಷ ಅಮೀನ್

Hot this week

Kuwait: KCWA’s annual family picnic draws over 600 attendees at Mishref Garden

Kuwait: The Kuwait Canara Welfare Association (KCWA) organised its...

ಖತರ್‌ನಲ್ಲಿ ಕರಾವಳಿ ಕನ್ನಡಿಗನ ಸಾಧನೆ; ಅಂಡರ್ 19 ಕ್ರಿಕೆಟ್ ತಂಡಕ್ಕೆ ಮಂಗಳೂರು ಮೂಲದ ಎಸ್ಸಾಮ್ ಮನ್ಸೂರ್ ಆಯ್ಕೆ

ದೋಹಾ: ಕರ್ನಾಟಕದ ಮಂಗಳೂರು ಮೂಲದ ಯುವಕ ಎಸ್ಸಾಮ್ ಮನ್ಸೂರ್, ಖತರ್ ಅಂಡರ್...

ರೊನಾಲ್ಡ್ ಮಾರ್ಟಿಸ್​ಗೆ ಶಾರ್ಜಾ ಕರ್ನಾಟಕ ಸಂಘದಿಂದ ‘ಮಯೂರ-ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

ದುಬೈ: ದುಬೈನಲ್ಲಿ ಇರುವ ಕನ್ನಡ ಪರ ಸಂಘಟನೆಗಳಲ್ಲಿ ಅರ್ಥಪೂರ್ಣ ಕಾರ್ಯಕ್ರಮ ಮಾಡುವುದರಲ್ಲಿ...

ಖತರ್‌ನಲ್ಲಿ ಕರ್ನಾಟಕ ರಾಜ್ಯೋತ್ಸವ – ರಜತ ಸಂಭ್ರಮ ಸಮಾರೋಪ: ಗಲ್ಫ್ ನಾಡಿನಲ್ಲಿ ಗಂಧದ ನಾಡಿನ ವೈಭವ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ)ನ ಕರ್ನಾಟಕ ರಾಜ್ಯೋತ್ಸವ – ರಜತ...

ದುಬೈ: ಕನ್ನಡಿಗರ ಕೂಟದಿಂದ ʼಕನ್ನಡ ರಾಜ್ಯೋತ್ಸವ 2025ʼ ಭವ್ಯ ಸಂಭ್ರಮ

ದುಬೈ: ಕನ್ನಡಿಗರ ಕೂಟ – ದುಬೈ ಮತ್ತು ಗಲ್ಫ್ ಕನ್ನಡ ಮೂವೀಸ್...

Related Articles

Popular Categories