ಯುಎಇನ.8ರಂದು ದುಬೈಯಲ್ಲಿ 'ಕನ್ನಡಿಗರ ಕೂಟ-ಗಲ್ಫ್ ಕನ್ನಡ ಮೂವೀಸ್'ನಿಂದ 'ಕರ್ನಾಟಕ...

ನ.8ರಂದು ದುಬೈಯಲ್ಲಿ ‘ಕನ್ನಡಿಗರ ಕೂಟ-ಗಲ್ಫ್ ಕನ್ನಡ ಮೂವೀಸ್’ನಿಂದ ‘ಕರ್ನಾಟಕ ರಾಜ್ಯೋತ್ಸವ’; ಡಾ.ಆರತಿ ಕೃಷ್ಣ ಸ್ವಾಗತಕ್ಕೆ ಸಿದ್ಧತೆ: ಡಾ.ರೊನಾಲ್ಡ್ ಕೊಲಾಸೊ, ಶಿವರಾಜ್ ಕುಮಾರ್, ರಮ್ಯಾಗೆ ಪ್ರಶಸ್ತಿ

ದುಬೈ: ಕನ್ನಡಿಗರ ಕನ್ನಡ ಕೂಟ ದುಬೈ ಯುಎಇ ಮತ್ತು ಗಲ್ಫ್ ಕನ್ನಡ ಮೂವೀಸ್ ಜಂಟಿಯಾಗಿ ಆಯೋಜಿಸಿರುವ “ಕರ್ನಾಟಕ ರಾಜ್ಯೋತ್ಸವ -2025” ಕಾರ್ಯಕ್ರಮವು ನವೆಂಬರ್ 8ರಂದು ಸಂಜೆ 4.30ರಿಂದ ದುಬೈಯ ಕಿಸೀಸ್ ನ ಜೆಮ್ಸ್ ಕೇಂಬ್ರಿಜ್ ಅಂತಾರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ.

ಈ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ, ವಿಧಾನ ಪರಿಷತ್ ನೂತನ ಸದಸ್ಯೆಯಾಗಿ ಆಯ್ಕೆಗೊಂಡಿರುವ ಡಾ.ಆರತಿ ಕೃಷ್ಣ ಅವರು ಭಾಗವಹಿಸಲಿದ್ದು, ಇದು ಅವರ ಯುಎಇಯ ಮೊದಲ ಭೇಟಿಯಾಗಿದೆ. ಜೊತೆಗೆ ಡಾ.ಆರತಿ ಕೃಷ್ಣ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ವೇದಿಕೆ ಕೂಡ ಕಲ್ಪಿಸಲಾಗಿದೆ.

ಸಂಜೆ 4.30ರಿಂದ ರಾತ್ರಿಯ ವರೆಗೆ ಜರುಗುವ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು Zee ಕನ್ನಡ ಕಾಮಿಡಿ ಕಿಲಾಡಿಗಳು ತಂಡದವರಿಂದ ಹಾಸ್ಯ ಮನೋರಂಜನೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳು ನಡೆಯಲಿವೆ.

ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಲಿರುವ ಕನ್ನಡಚಿತ್ರರಂಗದ ಖ್ಯಾತ ನಟ ಡಾ.ಶಿವರಾಜ್ ಕುಮಾರ್ ಅವರಿಗೆ “ಅಂತಾರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿ-2025”, ಖ್ಯಾತ ಚಲನಚಿತ್ರ ನಟಿ ರಮ್ಯಾ ಅವರಿಗೆ “ಕನ್ನಡದ ಕಣ್ಮಣಿ ಪ್ರಶಸ್ತಿ -2025” ಹಾಗು ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊರವರಿಗೆ “ಅಂತಾರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ -2025″ನ್ನು ನೀಡಿ ಗೌರವಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

Hot this week

ಅಬುಧಾಬಿಗೆ ಸಚಿವ ಡಾ.ಜೈಶಂಕರ್ ಭೇಟಿ; ಕನ್ನಡಿಗರ ಕೂಟ ದುಬೈ-ಅಬುಧಾಬಿ ಕರ್ನಾಟಕ ಸಂಘ ಪ್ರತಿನಿಧಿತ್ವ

ಅಬುಧಾಬಿ: ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು...

ದುಬೈ; ‘ಬ್ಯಾರೀಸ್ ಪ್ರೀಮಿಯರ್ ಲೀಗ್-2026’ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕ್ರೌನ್ ಹೊನ್ನಾವರ; ನಫೀಸ್ ಗ್ರೂಪ್ ರನ್ನರ್ ಅಪ್

ದುಬೈ: ಶಾರ್ಜಾದ ಬಿಜೋಯ್ಸ್ ಕ್ರಿಕೆಟ್ ಕ್ರೀಡಾಗಂಣದಲ್ಲಿ ರವಿವಾರ ನಡೆದ 'ಬ್ಯಾರೀಸ್ ಪ್ರೀಮಿಯರ್...

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಆಯ್ಕೆ

ದುಬೈ: ಕರ್ನಾಟಕ ಸಂಘ ಶಾರ್ಜಾ ಇದರ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ...

ರಮಝಾನ್-ಈದುಲ್ ಫಿತ್ರ್ ಅಂಗವಾಗಿ ಕನ್ನಡ ಸಂಘ ಬಹರೈನ್ ವತಿಯಿಂದ ಆಹಾರ ವಸ್ತುಗಳ ಕಿಟ್ ವಿತರಣೆ

ಬಹರೈನ್: ಪವಿತ್ರ ರಮಝಾನ್ ಮತ್ತು ಈದುಲ್ ಫಿತ್ರ್ ಹಬ್ಬದ ಅಂಗವಾಗಿ ಪ್ರಸ್ತುತ...

Related Articles

Popular Categories