ಬಹರೈನ್ಬಹರೈನ್‌ನಲ್ಲಿ ಡಿ.19ರಂದು ಉಡುಪಿ ಪ್ರಜ್ಞಾನಂ ತಂಡದಿಂದ 'ಹೆಜ್ಜಗೊಲಿದ ಬೆಳಕು'...

ಬಹರೈನ್‌ನಲ್ಲಿ ಡಿ.19ರಂದು ಉಡುಪಿ ಪ್ರಜ್ಞಾನಂ ತಂಡದಿಂದ ‘ಹೆಜ್ಜಗೊಲಿದ ಬೆಳಕು’ ನಾಟಕ ಪ್ರದರ್ಶನ

ಬಹರೈನ್: ಬಹರೈನ್‌ನ ಕನ್ನಡ ಸಂಘದ ಆಶ್ರಯದಲ್ಲಿ ಉಡುಪಿ ಪ್ರಜ್ಞಾನಂ ಟ್ರಸ್ಟ್ (ರಿ)ನಿರ್ಮಿಸಿದ ವಿಶಿಷ್ಟ ಏಕವ್ಯಕ್ತಿ ನಾಟಕ “ಹೆಜ್ಜೆ ಗೊಲಿದ ಬೆಳಕು” ಬಹರೈನ್‌ನ ಮನಾಮಾದ ಕನ್ನಡ ಭವನದಲ್ಲಿ ಡಿಸೆಂಬರ್ 19ರ ಶುಕ್ರವಾರದಂದು ಅದ್ದೂರಿಯಾಗಿ ಪ್ರದರ್ಶನಗೊಳ್ಳಲಿದೆ.

ನೃತ್ಯ ವಿದುಷಿ ಸಂಸ್ಕೃತಿ ಅಭಿನಯದ ಈ ನಾಟಕ ಅಮೋಘ ನೃತ್ಯ ಮತ್ತು ಅಭಿನಯ, ಮಾತುಗಾರಿಕೆ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದು, ರಂಗಕರ್ಮಿ ಗಣೇಶ್ ರಾವ್ ಎಲ್ಲೂರು ಈ ನಾಟಕ ನಿರ್ದೇಶನ ನೀಡಿದ್ದಾರೆ. ಬೆಳಕು ವಿನ್ಯಾಸ ಶಂಕರ್ ಕೆ ಶಿವಮೊಗ್ಗ ಮಾಡಿದ್ದು, ಸಂಗೀತ ನಿರ್ವಹಣೆ ಸಂಹಿತಾ ಜಿಪಿ ಮಾಡಲಿದ್ದಾರೆ. ಖ್ಯಾತ ಸಾಹಿತಿ ಸುಧಾ ಆಡುಕಳ ನಾಟಕ ರಚನೆ ಮಾಡಿದ್ದಾರೆ.

ಬಹರೈನ್‌ ಕನ್ನಡ ಸಂಘ ಮತ್ತು ಬಹರೈನ್‌ನಲ್ಲಿ ಉದ್ಯೋಗಿಗಳಾಗಿದ್ದು ಪ್ರಜ್ಞಾನಂ ಟ್ರಸ್ಟ್ ಬಂಧುಗಳಾಗಿರುವ ಸುರೇಶ್ ಸಿದ್ದಕೆರೆ, ಶ್ರೀನಾಥ ಚೆಕ್ಕೆ, ಕವಿತಾ ಸುರೇಶ, ರಾಮ ಪ್ರಸಾದ್ ಅಮ್ಮೆನಡ್ಕ ಈ ನಾಟಕ ಪ್ರದರ್ಶನ ಪ್ರಾಯೋಜಿಸಿದ್ದಾರೆ ಎಂದು ಉಡುಪಿ ಪ್ರಜ್ಞಾನಂ ಟ್ರಸ್ಟ್ ಅಧ್ಯಕ್ಷ ಜಿ ಪಿ ಪ್ರಭಾಕರ್ ತುಮರಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Hot this week

400 ಭಾರತೀಯರನ್ನು ತಾಯ್ನಾಡಿಗೆ ಕಳುಹಿಸಿದ ಬಹರೈನ್ ಕನ್ನಡ ಸಂಘ!

ಬಹರೈನ್: ತಾಯ್ನಾಡಿಗೆ ಮರಳಲು ಬಯಸಿದ ಸುಮಾರು 400 ಭಾರತೀಯರಿಗೆ ಕನ್ನಡ ಸಂಘ...

ಗಲ್ಫ್ ಸಂಘರ್ಷದ ನಡುವೆಯೂ ಪ್ರಯಾಣಿಕರಿಗೆ ‘ಓಯಸಿಸ್’ ಆಗಿರುವ ಒಮಾನ್!

ಮಸ್ಕತ್: ಇರಾನ್–ಅಮೇರಿಕ ಸಂಘರ್ಷದ ಪರಿಣಾಮವಾಗಿ ಮಧ್ಯಪ್ರಾಚ್ಯದ ವಾಯುಪ್ರದೇಶದಲ್ಲಿ ಅನಿಶ್ಚಿತತೆ ಉಂಟಾದ ಹಿನ್ನೆಲೆಯಲ್ಲಿ...

ಜರ್ಮನಿ; ರೈನ್ ಮೈನ್ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಲೋಕನಾಥ ರಾವ್ ಚೌಹಾಣ್ ಆಯ್ಕೆ

ಜರ್ಮನಿ: ರೈನ್ ಮೈನ್ ಕನ್ನಡ ಸಂಘದ ವಾರ್ಷಿಕ ಸಭೆಯು ಇತ್ತೀಚೆಗೆ ಜರ್ಮನಿಯ...

ಕೊಲ್ಲಿ ಯುದ್ಧ; ಗಲ್ಫ್ ರಾಷ್ಟ್ರಗಳಲ್ಲಿ ಅಗತ್ಯವಸ್ತುಗಳ ಮೇಲೆ ಬೀರುತ್ತಿದೆ ಪರಿಣಾಮ!

ಸೌದಿ ಅರೇಬಿಯಾ: ಅಮೇರಿಕ-ಇಸ್ರೇಲ್ ಹಾಗೂ ಇರಾನ್ ಮಧ್ಯೆ ನಡುಯುತ್ತಿರುವ ಸಂಘರ್ಷವು ಮುಂದುವರಿಯುತ್ತಿರುವುದರಿಂದ...

Related Articles

Popular Categories