ಬಹರೈನ್ಬಹರೈನ್‌ನಲ್ಲಿ ಡಿ.19ರಂದು ಉಡುಪಿ ಪ್ರಜ್ಞಾನಂ ತಂಡದಿಂದ 'ಹೆಜ್ಜಗೊಲಿದ ಬೆಳಕು'...

ಬಹರೈನ್‌ನಲ್ಲಿ ಡಿ.19ರಂದು ಉಡುಪಿ ಪ್ರಜ್ಞಾನಂ ತಂಡದಿಂದ ‘ಹೆಜ್ಜಗೊಲಿದ ಬೆಳಕು’ ನಾಟಕ ಪ್ರದರ್ಶನ

ಬಹರೈನ್: ಬಹರೈನ್‌ನ ಕನ್ನಡ ಸಂಘದ ಆಶ್ರಯದಲ್ಲಿ ಉಡುಪಿ ಪ್ರಜ್ಞಾನಂ ಟ್ರಸ್ಟ್ (ರಿ)ನಿರ್ಮಿಸಿದ ವಿಶಿಷ್ಟ ಏಕವ್ಯಕ್ತಿ ನಾಟಕ “ಹೆಜ್ಜೆ ಗೊಲಿದ ಬೆಳಕು” ಬಹರೈನ್‌ನ ಮನಾಮಾದ ಕನ್ನಡ ಭವನದಲ್ಲಿ ಡಿಸೆಂಬರ್ 19ರ ಶುಕ್ರವಾರದಂದು ಅದ್ದೂರಿಯಾಗಿ ಪ್ರದರ್ಶನಗೊಳ್ಳಲಿದೆ.

ನೃತ್ಯ ವಿದುಷಿ ಸಂಸ್ಕೃತಿ ಅಭಿನಯದ ಈ ನಾಟಕ ಅಮೋಘ ನೃತ್ಯ ಮತ್ತು ಅಭಿನಯ, ಮಾತುಗಾರಿಕೆ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದು, ರಂಗಕರ್ಮಿ ಗಣೇಶ್ ರಾವ್ ಎಲ್ಲೂರು ಈ ನಾಟಕ ನಿರ್ದೇಶನ ನೀಡಿದ್ದಾರೆ. ಬೆಳಕು ವಿನ್ಯಾಸ ಶಂಕರ್ ಕೆ ಶಿವಮೊಗ್ಗ ಮಾಡಿದ್ದು, ಸಂಗೀತ ನಿರ್ವಹಣೆ ಸಂಹಿತಾ ಜಿಪಿ ಮಾಡಲಿದ್ದಾರೆ. ಖ್ಯಾತ ಸಾಹಿತಿ ಸುಧಾ ಆಡುಕಳ ನಾಟಕ ರಚನೆ ಮಾಡಿದ್ದಾರೆ.

ಬಹರೈನ್‌ ಕನ್ನಡ ಸಂಘ ಮತ್ತು ಬಹರೈನ್‌ನಲ್ಲಿ ಉದ್ಯೋಗಿಗಳಾಗಿದ್ದು ಪ್ರಜ್ಞಾನಂ ಟ್ರಸ್ಟ್ ಬಂಧುಗಳಾಗಿರುವ ಸುರೇಶ್ ಸಿದ್ದಕೆರೆ, ಶ್ರೀನಾಥ ಚೆಕ್ಕೆ, ಕವಿತಾ ಸುರೇಶ, ರಾಮ ಪ್ರಸಾದ್ ಅಮ್ಮೆನಡ್ಕ ಈ ನಾಟಕ ಪ್ರದರ್ಶನ ಪ್ರಾಯೋಜಿಸಿದ್ದಾರೆ ಎಂದು ಉಡುಪಿ ಪ್ರಜ್ಞಾನಂ ಟ್ರಸ್ಟ್ ಅಧ್ಯಕ್ಷ ಜಿ ಪಿ ಪ್ರಭಾಕರ್ ತುಮರಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Hot this week

Yakshagana staged in English for the first time in Europe, show held in Belgium

Brussels: Yakshagana, the traditional theatre form from coastal Karnataka,...

ದಮ್ಮಾಮ್‌ನಲ್ಲಿ ‘ಅಖ್ವಾ’ದಿಂದ ಅದ್ಧೂರಿ ‘ಫ್ಯಾಮಿಲಿ ಮುಲಾಖಾತ್’; ಸಂಭ್ರಮಿಸಿದ ಮಕ್ಕಳು, ಹಿರಿಯರು

ದಮ್ಮಾಮ್ (ಸೌದಿ ಅರೇಬಿಯಾ): ಇಲ್ಲಿನ ಮುಳೂರು ಜಮಾತ್‌ನ ಅನಿವಾಸಿ ಕನ್ನಡಿಗರ ಒಕ್ಕೂಟವಾದ...

ಅಮೇರಿಕ; ‘ಆಟಾ’ ವತಿಯಿಂದ ‘ಬಿಸು ಪರ್ಬ 2026’ ಆಚರಣೆ: ತುಳು ಲಿಪಿ ತರಗತಿಗೆ ಚಾಲನೆ

ಉತ್ತರ ಅಮೇರಿಕ: ಅಖಿಲ ಅಮೆರಿಕಾ ತುಳು ಅಸೋಸಿಯೇಷನ್ (ಆಟಾ) ವತಿಯಿಂದ ಏಪ್ರಿಲ್...

ಅಟ್ಲಾಂಟ ಕನ್ನಡಿಗರಿಂದ ಯುಗಾದಿ-ಹೊಸ ತೊಡಕು ಆಚರಣೆ

ಅಟ್ಲಾಂಟ ಕನ್ನಡಿಗರು ಯುಗಾದಿಯನ್ನು ಏಪ್ರಿಲ್ 11 ಹಾಗೂ ಹೊಸತೊಡಕು ಹಬ್ಬವನ್ನು ಏಪ್ರಿಲ್...

ಖತರ್‌ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ಸ್ವೀಕಾರ

ದೋಹಾ(ಖತರ್):ಕರ್ನಾಟಕ ಸಂಘ ಖತರ್‌ನ 2026–2028 ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸುಬ್ರಹ್ಮಣ್ಯ ಹೆಬ್ಬಾಗಿಲು...

Related Articles

Popular Categories