ಯುಎಇಯುಎಇಯಾದ್ಯಂತ ಗುಡುಗು, ಮಿಂಚು ಸಹಿತ ಭಾರೀ ಮಳೆ-ಗಾಳಿ; ರಾಸ್...

ಯುಎಇಯಾದ್ಯಂತ ಗುಡುಗು, ಮಿಂಚು ಸಹಿತ ಭಾರೀ ಮಳೆ-ಗಾಳಿ; ರಾಸ್ ಅಲ್ ಖೈಮಾದಲ್ಲಿ ಕೇರಳ ಮೂಲದ ಯುವಕ ಮೃತ್ಯು

ದುಬೈ: ಗುರುವಾರ ಮುಂಜಾನೆಯಿಂದ ಯುಎಇಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ-ಗಾಳಿಗೆ ಭಾರತೀಯ ಮೂಲದ ಯುವಕನೋರ್ವ ಮೃತಪಟ್ಟ ಘಟನೆ ರಾಸ್ ಅಲ್ ಖೈಮಾದಲ್ಲಿ ವರದಿಯಾಗಿದೆ.

ದುಬೈ, ಅಬುಧಾಬಿ, ಶಾರ್ಜಾ, ಅಜ್ಮಾನ್, ರಾಸ್ ಅಲ್ ಖೈಮಾ ಸೇರಿದಂತೆ ಹಲವೆಡೆ ಗುರುವಾರ ಮುಂಜಾನೆಯಿಂದ ಭಾರಿ ಮಳೆ, ಗಾಳಿ ಬೀಸುತ್ತಿದ್ದು, ರಾತ್ರಿ ಗುಡುಗು, ಮಿಂಚು ಸಹಿತ ಮಳೆ ಆರ್ಭಟ ಜೋರಾಗಿತ್ತು. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿತ್ತು.

ರಾಸ್ ಅಲ್ ಖೈಮಾದಲ್ಲಿ ಸುರಿದ ಭಾರಿ ಮಳೆ-ಗಾಳಿಗೆ ಅಲ್ಲಿನ ಜನರು ತತ್ತರಿಸಿ ಹೋಗಿದ್ದು, ಭಾರತೀಯ ಮೂಲದ ಯುವಕನೋರ್ವ ಸಾವನ್ನಪ್ಪಿದ್ದಾನೆ. ಮೃತ ಯುವಕನನ್ನು ಮಲಪ್ಪುರಂ ಜಿಲ್ಲೆಯ ಕೊಡಿಂಜಿ ನಿವಾಸಿ ಸಲ್ಮಾನ್ ಫಾರಿಸ್ (27) ಎಂದು ಗುರುತಿಸಲಾಗಿದೆ.

ರಾಸ್ ಅಲ್ ಖೈಮಾದ ಇಸ್ತಾಂಬುಲ್ ಶವರ್ಮಾ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸಲ್ಮಾನ್, ಬಿರುಗಾಳಿಯಲ್ಲಿ ಕಟ್ಟಡದಿಂದ ಬಿದ್ದು ಬಂದ ಕಲ್ಲು ದೇಹಕ್ಕೆ ತಗುಲಿದ ಪರಿಣಾಮ ದುರ್ಘಟನೆಯಲ್ಲಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಅವರು ಮಲಪ್ಪುರಂ ನನ್ನಂಪುರ ತಾಲೂಕಿನ ತಲಕ್ಕೊಟ್ಟ ತೊಡಿಕ ನಿವಾಸಿಗಳಾದ ಸುಲೈಮಾನ್–ಅಸ್ಮಾಬಿ ದಂಪತಿಯ ಪುತ್ರರಾಗಿದ್ದಾನೆ.

ಮೃತ ಯುವಕ ಇತ್ತೀಚೆಗಷ್ಟೇ ವಿವಾಹವಾಗಿದ್ದು, ಕೆಲ ತಿಂಗಳ ಹಿಂದೆಯಷ್ಟೇ ಯುಎಇಗೆ ಮರಳಿದ್ದನು. ಅಪಘಾತ ಸಂಭವಿಸಿದ ವೇಳೆ ಅವನು ಶಾವರ್ಮಾವನ್ನು ವಿತರಿಸಲು ಹೊರಟಿದ್ದ ಎನ್ನಲಾಗಿದೆ.

ಯುಎಇಯಾದ್ಯಂತ ಮಿಂಚು ಸಹಿತ ಜಿಟಿಪಿಟಿ ಮಳೆ ಮುಂದುವರಿದ್ದಿದ್ದು, ಶುಕ್ರವಾರ ಕೂಡ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಉದ್ಯಾನವನಗಳು ಮತ್ತು ಕಡಲತೀರಗಳನ್ನು ಪ್ರವೇಶಿಸದಂತೆ ಎಚ್ಚರಿಕೆ ಕೂಡ ನೀಡಲಾಗಿದೆ. ಈ ನಡುವೆ, ಪೊಲೀಸ್ ಪಡೆ, ಆಂಬ್ಯುಲೆನ್ಸ್ ಹಾಗೂ ಸಿವಿಲ್ ಡಿಫೆನ್ಸ್ ವಿಭಾಗಗಳು ಸಂಪೂರ್ಣ ಸನ್ನದ್ಧತೆಯಿಂದ ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲ್ಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Hot this week

Yakshagana staged in English for the first time in Europe, show held in Belgium

Brussels: Yakshagana, the traditional theatre form from coastal Karnataka,...

ದಮ್ಮಾಮ್‌ನಲ್ಲಿ ‘ಅಖ್ವಾ’ದಿಂದ ಅದ್ಧೂರಿ ‘ಫ್ಯಾಮಿಲಿ ಮುಲಾಖಾತ್’; ಸಂಭ್ರಮಿಸಿದ ಮಕ್ಕಳು, ಹಿರಿಯರು

ದಮ್ಮಾಮ್ (ಸೌದಿ ಅರೇಬಿಯಾ): ಇಲ್ಲಿನ ಮುಳೂರು ಜಮಾತ್‌ನ ಅನಿವಾಸಿ ಕನ್ನಡಿಗರ ಒಕ್ಕೂಟವಾದ...

ಅಮೇರಿಕ; ‘ಆಟಾ’ ವತಿಯಿಂದ ‘ಬಿಸು ಪರ್ಬ 2026’ ಆಚರಣೆ: ತುಳು ಲಿಪಿ ತರಗತಿಗೆ ಚಾಲನೆ

ಉತ್ತರ ಅಮೇರಿಕ: ಅಖಿಲ ಅಮೆರಿಕಾ ತುಳು ಅಸೋಸಿಯೇಷನ್ (ಆಟಾ) ವತಿಯಿಂದ ಏಪ್ರಿಲ್...

ಅಟ್ಲಾಂಟ ಕನ್ನಡಿಗರಿಂದ ಯುಗಾದಿ-ಹೊಸ ತೊಡಕು ಆಚರಣೆ

ಅಟ್ಲಾಂಟ ಕನ್ನಡಿಗರು ಯುಗಾದಿಯನ್ನು ಏಪ್ರಿಲ್ 11 ಹಾಗೂ ಹೊಸತೊಡಕು ಹಬ್ಬವನ್ನು ಏಪ್ರಿಲ್...

ಖತರ್‌ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ಸ್ವೀಕಾರ

ದೋಹಾ(ಖತರ್):ಕರ್ನಾಟಕ ಸಂಘ ಖತರ್‌ನ 2026–2028 ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸುಬ್ರಹ್ಮಣ್ಯ ಹೆಬ್ಬಾಗಿಲು...

Related Articles

Popular Categories