ಬಹರೈನ್ಬಹರೈನ್ ಕನ್ನಡ ಸಂಘದ ಸಕ್ರಿಯ ಸದಸ್ಯ ಯಕ್ಷಿತ್ ಶೆಟ್ಟಿಗೆ...

ಬಹರೈನ್ ಕನ್ನಡ ಸಂಘದ ಸಕ್ರಿಯ ಸದಸ್ಯ ಯಕ್ಷಿತ್ ಶೆಟ್ಟಿಗೆ ಬೀಳ್ಕೊಡುಗೆ-ಸನ್ಮಾನ ಸಮಾರಂಭ

ಬಹರೈನ್‌: ಕನ್ನಡ ಸಂಘ ಬಹರೈನ್ ವತಿಯಿಂದ ಸಂಘದ ಸಕ್ರಿಯ ಸದಸ್ಯರಾದ ಯಕ್ಷಿತ್ ಶೆಟ್ಟಿ ಅವರ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭವನ್ನು ಬುಧವಾರದಂದು ಕನ್ನಡ ಭವನದ ಡಾ.ರೊನಾಲ್ಡ್ ಕೊಲಾಸೋ ಲೌಂಜ್ ನಲ್ಲಿ ಆಯೋಜಿಸಲಾಯಿತು.

ಕನ್ನಡ ಸಂಘ ಬಹರೈನ್‌ನ ಸಾಂಸ್ಕೃತಿಕ, ಸಾಮಾಜಿಕ ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ಯಕ್ಷಿತ್ ಶೆಟ್ಟಿ ಅವರು ನೀಡಿದ ಅಮೂಲ್ಯ ಸೇವೆ, ಸಮರ್ಪಣೆ ಹಾಗೂ ಸಕ್ರಿಯ ಭಾಗವಹಿಸುವಿಕೆಯನ್ನು ಗುರುತಿಸಿ ಈ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಕನ್ನಡ ಸಂಘ ಬಹರೈನ್ ಅಧ್ಯಕ್ಷ ಅಜಿತ್ ಬಂಗೇರ ಹಾಗೂ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ಯಕ್ಷಿತ್ ಶೆಟ್ಟಿ ಅವರಿಗೆ ಹಾರ, ಶಾಲು, ಸ್ಮರಣಿಕೆಯಿಂದ ಕೃತಜ್ಞತೆಯ ಸಂಕೇತವಾಗಿ ಗೌರವ ಸಲ್ಲಿಸಿದರು.

ಸಮಾರಂಭದಲ್ಲಿ ಮಾತನಾಡಿದ ಅಧ್ಯಕ್ಷ ಅಜಿತ್ ಬಂಗೇರ, ಪದಾಧಿಕಾರಿಗಳು ಮತ್ತು ಸದಸ್ಯರು, ಸಂಘದ ಅಭಿವೃದ್ಧಿಗೆ ಅವರ ಕೊಡುಗೆಯನ್ನು ಸ್ಮರಿಸಿ, ಅವರ ಸೇವಾಭಾವನೆ ಹಾಗೂ ಬದ್ಧತೆಯನ್ನು ಶ್ಲಾಘಿಸಿದರು. ಹಾಜರಿದ್ದ ಸದಸ್ಯರು ಯಕ್ಷಿತ್ ಶೆಟ್ಟಿ ಅವರ ಮುಂದಿನ ವೃತ್ತಿಜೀವನ ಮತ್ತು ವೈಯಕ್ತಿಕ ಜೀವನಕ್ಕೆ ಹಾರ್ದಿಕ ಶುಭಾಶಯಗಳನ್ನು ಕೋರಿದರು.

ವರದಿ: ಕಮಲಾಕ್ಷ ಅಮೀನ್

Hot this week

400 ಭಾರತೀಯರನ್ನು ತಾಯ್ನಾಡಿಗೆ ಕಳುಹಿಸಿದ ಬಹರೈನ್ ಕನ್ನಡ ಸಂಘ!

ಬಹರೈನ್: ತಾಯ್ನಾಡಿಗೆ ಮರಳಲು ಬಯಸಿದ ಸುಮಾರು 400 ಭಾರತೀಯರಿಗೆ ಕನ್ನಡ ಸಂಘ...

ಗಲ್ಫ್ ಸಂಘರ್ಷದ ನಡುವೆಯೂ ಪ್ರಯಾಣಿಕರಿಗೆ ‘ಓಯಸಿಸ್’ ಆಗಿರುವ ಒಮಾನ್!

ಮಸ್ಕತ್: ಇರಾನ್–ಅಮೇರಿಕ ಸಂಘರ್ಷದ ಪರಿಣಾಮವಾಗಿ ಮಧ್ಯಪ್ರಾಚ್ಯದ ವಾಯುಪ್ರದೇಶದಲ್ಲಿ ಅನಿಶ್ಚಿತತೆ ಉಂಟಾದ ಹಿನ್ನೆಲೆಯಲ್ಲಿ...

ಜರ್ಮನಿ; ರೈನ್ ಮೈನ್ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಲೋಕನಾಥ ರಾವ್ ಚೌಹಾಣ್ ಆಯ್ಕೆ

ಜರ್ಮನಿ: ರೈನ್ ಮೈನ್ ಕನ್ನಡ ಸಂಘದ ವಾರ್ಷಿಕ ಸಭೆಯು ಇತ್ತೀಚೆಗೆ ಜರ್ಮನಿಯ...

ಕೊಲ್ಲಿ ಯುದ್ಧ; ಗಲ್ಫ್ ರಾಷ್ಟ್ರಗಳಲ್ಲಿ ಅಗತ್ಯವಸ್ತುಗಳ ಮೇಲೆ ಬೀರುತ್ತಿದೆ ಪರಿಣಾಮ!

ಸೌದಿ ಅರೇಬಿಯಾ: ಅಮೇರಿಕ-ಇಸ್ರೇಲ್ ಹಾಗೂ ಇರಾನ್ ಮಧ್ಯೆ ನಡುಯುತ್ತಿರುವ ಸಂಘರ್ಷವು ಮುಂದುವರಿಯುತ್ತಿರುವುದರಿಂದ...

Related Articles

Popular Categories