Lead Newsಇಂದು (ಜ.17) ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟದಿಂದ 'ಹೊಸಬೆಳಕು'...

ಇಂದು (ಜ.17) ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟದಿಂದ ‘ಹೊಸಬೆಳಕು’ ಕಾರ್ಯಕ್ರಮ; ಮೋಡಿ ಮಾಡಲಿದ್ದಾರೆ ರಾಜೇಶ್ ಕೃಷ್ಣನ್

ಅಮೇರಿಕ: ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟವು ಸಂಕ್ರಾಂತಿ ಹಿನ್ನೆಲೆಯಲ್ಲಿ ಇಂದು(ಜನವರಿ 17) ಟ್ಯಾಂಪಾ ನಗರದ ಇಂಡಿಯನ್ ಕಲ್ಚರಲ್ ಸೆಂಟರ್ ನಲ್ಲಿ ‘ಹೊಸಬೆಳಕು’ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದೆ.

ಮಧ್ಯಾಹ್ನ 12 ಗಂಟೆಯಿಂದ ಆರಂಭವಾಗಲಿರುವ ಕಾರ್ಯಕ್ರಮವು ರಾತ್ರಿ 11ರ ವರಗೆ ನಡೆಯಲಿದೆ. ಪ್ರಸಿದ್ಧ ಗಾಯಕ ಮೆಲೋಡಿ ಕಿಂಗ್ ರಾಜೇಶ್ ಕೃಷ್ಣನ್ ಅವರಿಂದ ರಾತ್ರಿ 7.30ರಿಂದ 11ರ ವರಗೆ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಯುನಿವರ್ಸಿಟಿ ಆಫ್ ಸೌತ್ ಫ್ಲೋರಿಡಾ(USF)ದ ಪ್ರಾಧ್ಯಾಪಕ ಡಾ.ಗಿಲ್ ಬೆನ್-ಹೆರೂಟ್, ಲೂಯಿಸ್ ವಿಯೇರಾ (ಟ್ಯಾಂಪಾ ಸಿಟಿ ಕೌನ್ಸಿಲ್) ಅವರು ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12ಗಂಟೆಗೆ ಮುಖ್ಯ ಅರ್ಚಕರಾದ ಗುರುದತ್ ಅವರಿಂದ ವೇದಘೋಷ ನೆರವೇರಲಿದೆ. ಅನಂತರ ಕರ್ನಾಟಕ ಶೈಲಿ ಬಾಳೆ ಎಲೆ ಊಟ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 2ಗಂಟೆಯಿಂದ ಸಂಜೆ 6ರ ವರಗೆ ಸ್ಥಳೀಯ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮ, ಬಳಿಕ ಸಂಕ್ರಾಂತಿ ವಿಶೇಷ – ಲಘು ಭೋಜನ ಅನಂತರ ರಾಜೇಶ್ ಕೃಷ್ಣನ್ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟದ ಅಧ್ಯಕ್ಷ ಹರ್ಷಿತ್ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಯಕ್ಷಗಾನ ಕಲಾವಿದ ವಾಸು ಬಾಯರುಗೆ ‘ವಿಶೇಷ ಯಕ್ಷ ಶ್ರೀ ರಕ್ಷಾ ಗೌರವ ಪ್ರಶಸ್ತಿ’

ದುಬೈ : ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ (YAKU)ಯು ತವರೂರು ತಿರುಗಾಟದಲ್ಲಿ...

ಕನ್ನಡ ಸಂಘ ಬಹರೈನ್ ವತಿಯಿಂದ ಯಶಸ್ವಿಯಾಗಿ ಮೂಡಿಬಂದ ‘KSB ಐಕ್ಯತಾ ಪಾದಯಾತ್ರೆ ಹಾಗೂ ನಿಷ್ಠಾ ಪ್ರತಿಜ್ಞೆ ಸಹಿ’ ಕಾರ್ಯಕ್ರಮ

ಮನಾಮ(ಬಹರೈನ್): ಕನ್ನಡ ಸಂಘ ಬಹರೈನ್ ವತಿಯಿಂದ ವಾಟರ್ ಗಾರ್ಡನ್, ಗುಫೂಲ್ ನಲ್ಲಿ...

ಖತರ್‌ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷೆ ಅನುಷ್ಠಾನಕ್ಕೆ ಭಾರತೀಯ ರಾಯಭಾರ ಕಚೇರಿಯ ಸಂಪೂರ್ಣ ಆಡಳಿತಾತ್ಮಕ ಬೆಂಬಲ: ಹರೀಶ್ ಪಾಂಡೆ

ದೋಹಾ: ಖತರ್‌ನಲ್ಲಿರುವ ಕನ್ನಡ ಮಾತನಾಡುವ ಅನಿವಾಸಿ ಭಾರತೀಯರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ...

ದುಬೈ; ನವೆಂಬರ್ 1ರಂದು 71ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾದ ಕರ್ನಾಟಕ ಸಂಘ ದುಬೈ

ದುಬೈ: ಯುಎಇಯಲ್ಲಿರುವ ಕನ್ನಡಿಗರ ಅತಿದೊಡ್ಡ ಮತ್ತು ಅತ್ಯಂತ ಹಳೆಯ ಸಂಘಟನೆಯಾದ ಕರ್ನಾಟಕ...

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

Related Articles

Popular Categories