Lead Newsಇಂದು (ಜ.17) ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟದಿಂದ 'ಹೊಸಬೆಳಕು'...

ಇಂದು (ಜ.17) ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟದಿಂದ ‘ಹೊಸಬೆಳಕು’ ಕಾರ್ಯಕ್ರಮ; ಮೋಡಿ ಮಾಡಲಿದ್ದಾರೆ ರಾಜೇಶ್ ಕೃಷ್ಣನ್

ಅಮೇರಿಕ: ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟವು ಸಂಕ್ರಾಂತಿ ಹಿನ್ನೆಲೆಯಲ್ಲಿ ಇಂದು(ಜನವರಿ 17) ಟ್ಯಾಂಪಾ ನಗರದ ಇಂಡಿಯನ್ ಕಲ್ಚರಲ್ ಸೆಂಟರ್ ನಲ್ಲಿ ‘ಹೊಸಬೆಳಕು’ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದೆ.

ಮಧ್ಯಾಹ್ನ 12 ಗಂಟೆಯಿಂದ ಆರಂಭವಾಗಲಿರುವ ಕಾರ್ಯಕ್ರಮವು ರಾತ್ರಿ 11ರ ವರಗೆ ನಡೆಯಲಿದೆ. ಪ್ರಸಿದ್ಧ ಗಾಯಕ ಮೆಲೋಡಿ ಕಿಂಗ್ ರಾಜೇಶ್ ಕೃಷ್ಣನ್ ಅವರಿಂದ ರಾತ್ರಿ 7.30ರಿಂದ 11ರ ವರಗೆ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಯುನಿವರ್ಸಿಟಿ ಆಫ್ ಸೌತ್ ಫ್ಲೋರಿಡಾ(USF)ದ ಪ್ರಾಧ್ಯಾಪಕ ಡಾ.ಗಿಲ್ ಬೆನ್-ಹೆರೂಟ್, ಲೂಯಿಸ್ ವಿಯೇರಾ (ಟ್ಯಾಂಪಾ ಸಿಟಿ ಕೌನ್ಸಿಲ್) ಅವರು ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12ಗಂಟೆಗೆ ಮುಖ್ಯ ಅರ್ಚಕರಾದ ಗುರುದತ್ ಅವರಿಂದ ವೇದಘೋಷ ನೆರವೇರಲಿದೆ. ಅನಂತರ ಕರ್ನಾಟಕ ಶೈಲಿ ಬಾಳೆ ಎಲೆ ಊಟ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 2ಗಂಟೆಯಿಂದ ಸಂಜೆ 6ರ ವರಗೆ ಸ್ಥಳೀಯ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮ, ಬಳಿಕ ಸಂಕ್ರಾಂತಿ ವಿಶೇಷ – ಲಘು ಭೋಜನ ಅನಂತರ ರಾಜೇಶ್ ಕೃಷ್ಣನ್ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟದ ಅಧ್ಯಕ್ಷ ಹರ್ಷಿತ್ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಬೆಂಗಳೂರು; ಕನ್ನಡಿಗರ ಕೂಟ, ದುಬೈಯಿಂದ ಪದ್ಮಶ್ರೀ ಭೀಮವ್ವ ದೊಡ್ಡಬಾಳಪ್ಪರಿಗೆ ಪ್ರತಿಷ್ಠಿತ ‘ಹುಟ್ಟೂರ ಸನ್ಮಾನ‌’ ಪ್ರದಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ವತಿಯಿಂದ ಬೆಂಗಳೂರಿನಲ್ಲಿ ನಡೆದ “ಹುಟ್ಟುೂರ ಸನ್ಮಾನ”...

ದುಬೈ; ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನಲ್ಲಿ ಓಣಂ ಹಬ್ಬ ಆಚರಣೆ

ದುಬೈ : ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಫಾರ್ಚೂನ್ ಗ್ರೂಪ್...

ಕನ್ನಡಿಗರ ಕೂಟ ದುಬೈ ವತಿಯಿಂದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್‌ಗೆ ಸನ್ಮಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ತಂಡವು ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ...

ಫ್ಲೋರಿಡಾ ತುಳು ಕೂಟದ 2ನೇ ವಾರ್ಷಿಕ ಪೊಟ್ಲಕ್ ಪಿಕ್ನಿಕ್ ಸಂಭ್ರಮ

ಅಮೇರಿಕದ ಫ್ಲೋರಿಡಾ ತುಳು ಕೂಟವು ಇತ್ತೀಚೆಗೆ ಕ್ಯಾಸೆಲ್‌ಬೆರ್ರಿ ಒರ್ಲಾಂಡೊದಲ್ಲಿ ತನ್ನ ಎರಡನೇ...

Related Articles

Popular Categories