ಯುಎಇಫೆಬ್ರವರಿ 1ರಂದು ಶಾರ್ಜಾದಲ್ಲಿ 'ಮಾರ್ಗದೀಪ ಪ್ರೀಮಿಯರ್ ಲೀಗ್-4' ಕ್ರಿಕೆಟ್...

ಫೆಬ್ರವರಿ 1ರಂದು ಶಾರ್ಜಾದಲ್ಲಿ ‘ಮಾರ್ಗದೀಪ ಪ್ರೀಮಿಯರ್ ಲೀಗ್-4’ ಕ್ರಿಕೆಟ್ ಟೂರ್ನಮೆಂಟ್; ಜರ್ಸಿ ಬಿಡುಗಡೆ

ದುಬೈ: ಮಾರ್ಗದೀಪ ಸಾಂಸ್ಕೃತಿಕ ಸಮಿತಿಯ ವತಿಯಿಂದ ದಿವಂಗತ ವಸಂತ್ ಬೇಕಲ್ ಸ್ಮರಣಾರ್ಥ ನಡೆಯುವ ಮಾರ್ಗದೀಪ ಪ್ರೀಮಿಯರ್ ಲೀಗ್-4 (MPL-Season-4) ಕ್ರಿಕೆಟ್ ಟೂರ್ನಮೆಂಟ್ ನ ಜರ್ಸಿ ಬಿಡುಗಡೆ ಇತ್ತೀಚೆಗೆ ನಡೆಯಿತು.

ದುಬೈನ ಎಂ.ಎಂ.ಸಿ.ಟಿ.ಗ್ರೌಂಡ್ ನಲ್ಲಿ ನಡೆದ ಜರ್ಸಿ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉದ್ಯಮಿ ರೋಷನ್ ಕಂಪ, ರಾಮಕ್ಷತ್ರಿಯ ಸಂಘ ಯುಎಇ ಅಧ್ಯಕ್ಷರಾದ ಈಶ್ವರ್ ಬಲ್ಕಿ, ರಕ್ಷಿತ್ ಪುತ್ತೂರು, ರೇಷ್ಮಾ ಹಾಗೂ ವೇದ, ಸಂತೋಷ್ ಶೆಟ್ಟಿ ಪೊಳಲಿ ಬಿಡುಗಡೆಗೊಳಿಸಿದರು.

ಮಹೇಶ್ ಚಂದ್ರಗಿರಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸುಗಂಧರಾಜ ಬೇಕಲ್ ಸ್ವಾಗತಿಸಿದರು. ಸ್ಪೋರ್ಟ್ಸ್ ಕಾರ್ಯದರ್ಶಿ ಸುಬ್ರಹ್ಮಣ್ಯ ಕುದುರೆಕೋಡು ಕಾರ್ಯಕ್ರಮದ ಜವಾಬ್ದಾರಿಯನ್ನು ವಹಿಸಿದರು. ಫೆಬ್ರವರಿ 1ರಂದು ಶಾರ್ಜಾದ ಬತಾಯ ಮೈದಾನದಲ್ಲಿ ಪಂದ್ಯಾಟ ನಡೆಯಲಿದೆ.

ಬಿಡುಗಡೆ ಕಾರ್ಯಕ್ರಮವನ್ನು ಹರಿಕೋಟೆ ನಿರೂಪಿಸಿದರು. ಮಾರ್ಗದೀಪ ಸಾಂಸ್ಕೃತಿಕ ಸಮಿತಿಯ ಉಪಾಧ್ಯಕ್ಷರಾದ ಪ್ರವೀಣ್ ಉಪ್ಪೂರು, ಕಾರ್ಯದರ್ಶಿ ಸುನೀಲ್ ರಾವ್, ರಾಜೇಶ್ ರಾವ್, ಅಜೀತ್ ಕೊರಕಾಡ್ ಹಾಗೂ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Hot this week

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಸಂದ ಗೌರವ, ಅಮೇರಿಕದ ತುಳುವರಲ್ಲಿ ಸಂಭ್ರಮ!

ಅಮೇರಿಕ: ತುಳುನಾಡಿನ ಜನರ ಬಹುದಶಕಗಳ ಕನಸು ನನಸಾಗಿದೆ. ಸೆಪ್ಟೆಂಬರ್ 18, 2026ರಂದು...

ನ್ಯೂಯಾರ್ಕ್‌ನ ಆಲ್ಬನಿಯ ಸುಪ್ರಿಯಾ ಶೆಟ್ಟಿಗೆ ‘ಮಿಸ್ಸೆಸ್ ಅಕ್ಕ- 2026’ ಕಿರೀಟ

ಫಿಲಡೆಲ್ಫಿಯಾ: ಫಿಲಡೆಲ್ಫಿಯಾದಲ್ಲಿ ನಡೆದ ಅಕ್ಕ (AKKA) ರಜತ ಮಹೋತ್ಸವ ವಿಶ್ವ ಕನ್ನಡ...

ದುಬೈಯಲ್ಲಿ ಪದ್ಮಶಾಲಿ ಸಮುದಾಯದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ; ಭಕ್ತಿ,ಸಂಸ್ಕೃತಿ ಹಾಗೂ ಸಮುದಾಯದ ಒಗ್ಗಟ್ಟಿಗೆ ಸಾಕ್ಷಿಯಾದ ಕಾರ್ಯಕ್ರಮ

ದುಬೈ, : ದುಬೈ ಪದ್ಮಶಾಲಿ ಸಮುದಾಯದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಭಕ್ತಿ,...

ಬೆಂಗಳೂರು; ಕನ್ನಡಿಗರ ಕೂಟ, ದುಬೈಯಿಂದ ಪದ್ಮಶ್ರೀ ಭೀಮವ್ವ ದೊಡ್ಡಬಾಳಪ್ಪರಿಗೆ ಪ್ರತಿಷ್ಠಿತ ‘ಹುಟ್ಟೂರ ಸನ್ಮಾನ‌’ ಪ್ರದಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ವತಿಯಿಂದ ಬೆಂಗಳೂರಿನಲ್ಲಿ ನಡೆದ “ಹುಟ್ಟುೂರ ಸನ್ಮಾನ”...

ದುಬೈ; ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನಲ್ಲಿ ಓಣಂ ಹಬ್ಬ ಆಚರಣೆ

ದುಬೈ : ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಫಾರ್ಚೂನ್ ಗ್ರೂಪ್...

Related Articles

Popular Categories