ಯುಎಇದುಬೈ; 'ಮಾರ್ಗದೀಪ ಪ್ರೀಮಿಯರ್ ಲೀಗ್' ಕ್ರಿಕೆಟ್ ಪಂದ್ಯಾಟ: 'ಬೇಕಲ್...

ದುಬೈ; ‘ಮಾರ್ಗದೀಪ ಪ್ರೀಮಿಯರ್ ಲೀಗ್’ ಕ್ರಿಕೆಟ್ ಪಂದ್ಯಾಟ: ‘ಬೇಕಲ್ ಫೋರ್ಟ್ ರೈಡರ್ಸ್’ಗೆ ಚಾಂಪಿಯನ್ಸ್ ಪಟ್ಟ; ‘ಕೋಟೆ ಹೀರೋಸ್’ ರನ್ನರ್ ಅಪ್

ದುಬೈ: ಮಾರ್ಗ ದೀಪ ಸಾಂಸ್ಕೃತಿಕ ಸಮಿತಿಯ ವತಿಯಿಂದ ದಿವಂಗತ ವಸಂತ ಬೇಕಲ್ ಅವರ ಸವಿನೆನಪಿಕಾಗಿ ‘ಮಾರ್ಗದೀಪ ಪ್ರೀಮಿಯರ್ ಲೀಗ್’ ಕ್ರಿಕೆಟ್ ಪಂದ್ಯಾಟ ಇತ್ತೀಚೆಗೆ ಶಾರ್ಜಾದ NASS ಕ್ರಿಕೆಟ್ ಸ್ಟೇಡಿಯಂನಲ್ಲಿ ಅದ್ಧೂರಿಯಿಂದ ಜರುಗಿತು.

ಪಂದ್ಯಾಟದಲ್ಲಿ ಮಂಜುನಾಥ ಕಾಸರಗೋಡು ಹಾಗೂ ದಾಮೋದರ ರಾವ್ ಅವರ ಮಾಲಕತ್ವದ ‘ಗಡಿನಾಡು ಸ್ಟ್ರೈಕರ್’, ರಘುನಾಥ್ ಎಂ ಹಾಗೂ ಬಿಪಿನ್ ಚಂದ್ರ ನಾಯಕ್ ಮಾಲಕತ್ವದ ‘ಬೇಕಲ್ ಫೋರ್ಟ್ ರೈಡರ್ಸ್’, ಶ್ರೀಪತಿ ಕೆ ಹಾಗೂ ಕಮಲಾಕ್ಷ ಕೆ ಮಾಲಕತ್ವದ ‘ಕ್ಷತ್ರಿಯ ಲೆಜೆಂಡ್ಸ್’ ಹಾಗೂ ನರೇಶ್ ಸಿ ಹೆಚ್ ಹಾಗೂ ಧನಂಜಯ ಸಿ ಹೆಚ್ ಮಾಲಕತ್ವದ ‘ಕೋಟೆ ಹೀರೋಸ್’ ನಾಲ್ಕು ತಂಡಗಳು ಭಾಗವಹಿಸಿದ್ದವು. ಪಂದ್ಯಾಟದ ಮುಖ್ಯ ಸಂಘಟಕರರಾಗಿ ಸುಧೀರ್ ಎಸ್ ಹಾಗೂ ಸುಬ್ರಹ್ಮಣ್ಯ ಬಿ.ಕೆ.ಯವರು ಕಾರ್ಯ ನಿರ್ವಹಿಸಿದರು.

ಸಂಘದ ಅಧ್ಯಕ್ಷರಾದ ಮಹೇಶ್ ಚಂದ್ರಗಿರಿ, ಕಾರ್ಯದರ್ಶಿ ಸುನಿಲ್ ರಾವ್ ಹೇರೂರು, ಉಪಾಧ್ಯಕ್ಷರಾದ ಪ್ರವೀಣ್ ಉಪ್ಪೂರು,ಕೋಶಾಧಿಕಾರಿಯಾದ ರಾಜೇಶ್ ರಾವ್, ಜೊತೆ ಕಾರ್ಯದರ್ಶಿ ಬಿಪಿನ್ ಚಂದ್ರ ನಾಯಕ್ ಹಾಗೂ ಕ್ರೀಡಾ ಕಾಯದರ್ಶಿ ಸುಬ್ರಹ್ಮಣ್ಯ ಬಿ. ಕೆ.ರವರು ಉಪಸ್ಥಿತರಿದ್ದರು.

ಪಂದ್ಯಾಟದ ಚಾಂಪಿಯನ್ಸ್ ತಂಡವಾಗಿ ‘ಬೇಕಲ್ ಫೋರ್ಟ್ ರೈಡರ್ಸ್’ ಹಾಗೂ ರನ್ನರ್ಸ್ ಅಪ್ ಆಗಿ ‘ಕೋಟೆ ಹೀರೋಸ್’ ತಂಡ ಹೊರಹೊಮ್ಮಿತು. ಸುಗಂಧರಾಜ ಬೇಕಲ್ ರವರು ಸ್ವಾಗತಿಸಿದರು. ಅಜಿತ್ ಕೊರಕೋಡು ಹಾಗೂ ಸತೀಶ್ ಹಂಗಳೂರು ಮುಖ್ಯ ಸಲಹೆಗಾರರಾಗಿದ್ಹರು. ಹರಿಪ್ರಸಾದ್ ಕೋಟೆ ಕಾರ್ಯಕ್ರಮ ನಿರೂಪಿಸಿದರು.

Hot this week

ಜರ್ಮನಿ: ರೈನ್ ಮೈನ್ ಕನ್ನಡ ಸಂಘದಿಂದ ಸಂಭ್ರಮದ ಕನ್ನಡ ಕಲಿ ದಿನಾಚರಣೆ; ಗಮನ ಸೆಳೆದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ

ಜರ್ಮನಿ: ದಶಕದ ಸಂಭ್ರಮದಲ್ಲಿರುವ ಫ್ರಾಂಕ್ಫರ್ಟ್ ನ ರೈನ್ ಮೈನ್ ಕನ್ನಡ ಸಂಘ...

ದೋಹಾದಲ್ಲಿ ಕರ್ನಾಟಕ ಸಂಘ ಖತರ್‌ನಿಂದ ಕಾರ್ಮಿಕ ದಿನ 2026 ಆಚರಣೆ

ದೋಹಾ(ಖತರ್): ಕರ್ನಾಟಕ ಸಂಘ ಖತರ್ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)...

Yakshagana staged in English for the first time in Europe, show held in Belgium

Brussels: Yakshagana, the traditional theatre form from coastal Karnataka,...

ದಮ್ಮಾಮ್‌ನಲ್ಲಿ ‘ಅಖ್ವಾ’ದಿಂದ ಅದ್ಧೂರಿ ‘ಫ್ಯಾಮಿಲಿ ಮುಲಾಖಾತ್’; ಸಂಭ್ರಮಿಸಿದ ಮಕ್ಕಳು, ಹಿರಿಯರು

ದಮ್ಮಾಮ್ (ಸೌದಿ ಅರೇಬಿಯಾ): ಇಲ್ಲಿನ ಮುಳೂರು ಜಮಾತ್‌ನ ಅನಿವಾಸಿ ಕನ್ನಡಿಗರ ಒಕ್ಕೂಟವಾದ...

ಅಮೇರಿಕ; ‘ಆಟಾ’ ವತಿಯಿಂದ ‘ಬಿಸು ಪರ್ಬ 2026’ ಆಚರಣೆ: ತುಳು ಲಿಪಿ ತರಗತಿಗೆ ಚಾಲನೆ

ಉತ್ತರ ಅಮೇರಿಕ: ಅಖಿಲ ಅಮೆರಿಕಾ ತುಳು ಅಸೋಸಿಯೇಷನ್ (ಆಟಾ) ವತಿಯಿಂದ ಏಪ್ರಿಲ್...

Related Articles

Popular Categories