ಯುಎಇಯುಎಇ ಕುಲಾಲ ಫ್ಯಾಮಿಲಿಯಿಂದ ಶ್ರೀಸತ್ಯನಾರಾಯಣ ಪೂಜೆ

ಯುಎಇ ಕುಲಾಲ ಫ್ಯಾಮಿಲಿಯಿಂದ ಶ್ರೀಸತ್ಯನಾರಾಯಣ ಪೂಜೆ

ದುಬೈ: ಇಲ್ಲಿನ ಗ್ಲೆಂಡೆಲ್ ಅಂತಾರಾಷ್ಟ್ರೀಯ ಶಾಲಾ ಸಭಾಂಗಣದಲ್ಲಿ ರವಿವಾರ ಸುಬ್ರಹ್ಮಣ್ಯ ಭಟ್ ಹಾಗೂ ಕೆ.ವಿ.ಅಡಿಗ ಇವರ ಪೌರೋಹಿತ್ಯದಲ್ಲಿ ಕುಲಾಲ ಫ್ಯಾಮಿಲಿ ಯುಎಇ ಆಯೋಜನೆಯ ಶ್ರೀ ಸತ್ಯನಾರಾಯಣ ಪೂಜೆ ಸಂಪನ್ನಗೊಂಡಿತು.

ಪದ್ಮರಾಜ್ ಕುಲಾಲ್ ಎಕ್ಕಾರ್ ಇವರ ನೇತ್ರತ್ವದಲ್ಲಿ ಹಾಗೂ ಅವರ ಜೊತೆಗೆ ಕೈ ಜೋಡಿಸಿದ ಕುಲಾಲ ಫ್ಯಾಮಿಲಿ ಅಡ್ಮಿನ್ ಬಳಗ ಆಯೋಜಿಸಿದ ಪೂಜಾ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನೆರವೇರಿತು.

ಕುಲಾಲ ಫ್ಯಾಮಿಲಿಯ ಸುಮಂಗಲಿಯರು, ದೀಪ ಪ್ರಜ್ವಲನೆ ಮಾಡುವ ಮೂಲಕ ಪೂಜಾ ವಿಧಿ ವಿಧಾನಗಳು ಆರಂಭಗೊಂಡಿತು. ಸುಜಾತ ಹಾಗೂ ಕಿರಣ್ ಕುಲಾಲ್ ದಂಪತಿಗಳು ಪೂಜೆಯ ಸಂಕಲ್ಪದಲ್ಲಿ ಪಾಲುಗೊಂಡರು. ಪದ್ಮರಾಜ್ ಎಕ್ಕಾರ್, ರಾಜೇಶ್ ಶೆಣೈ ಹಾಗೂ ಸಚಿನ್ ಕುಲಾಲ್ ‘ಶ್ರೀ ವಿಷ್ಣು ಸಹಸ್ರನಾಮಾವಳಿ’ ಪಠಣ ಮಾಡಿದರು.

ಶ್ರೀ ಓಂ ಶ್ರೀ ಭಕ್ತ ವೃಂದ ಶಾರ್ಜಾ ಇವರಿಂದ ಭಜನೆ ಸಂಕೀರ್ತನೆ ನಡೆಯಿತು. ಕುಲಾಲ ಸಮಾಜದ ಬಾಂಧವರು ನಡೆಸಿಕೊಟ್ಟ ಕುಣಿತ ಭಜನೆ ಸೇರಿದ ಭಕ್ತ ಜನರ ಮೆಚ್ಚುಗೆಗೆ ಪಾತ್ರವಾಯಿತು. ವಿದುಷಿ ಮಧುರಾ ವಿಶ್ವನಾಥ್ ಗಾಯನದ ಮುಖೇನ ನಡೆಸಿಕೊಟ್ಟ ಸತ್ಯನಾರಾಯಣ ದೇವರ ಕಥಾ ಕಾಲಕ್ಷೇಪಕ್ಕೆ ಸೇರಿದ ಭಕ್ತ ಸಮೂಹ ಭಾವ ಪರವಶರಾದರು. ಮಹಾಮಂಗಳಾರತಿ ಬಳಿಕ ದಾನಿಗಳನ್ನು ಗೌರವಿಸಿ, ಶ್ರೀ ದೇವರ ಪ್ರಸಾದ ನೀಡಲಾಯಿತು. ಭಕ್ತಾದಿಗಳು ಎಲ್ಲರೂ ಅನ್ನಸಂತರ್ಪಣೆಯ ಪ್ರಸಾದ ಸ್ವೀಕರಿಸಿ ಸಂತುಷ್ಟರಾದರು. ದುಬೈಯ ಹಲವು ಸಮಾಜದ ಗಣ್ಯರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಆರತಿ ಅಡಿಗ ಕಾರ್ಯಕ್ರಮ ನಿರೂಪಿಸಿದರು.

Hot this week

ಮಸ್ಕತ್ ನಲ್ಲಿ ತುಳು ಚಿತ್ರರಸಿಕರ ಮನಗೆದ್ದ ‘ಬೆಲ್ಲದ ಗಟ್ಟಿ’ ತುಳು ಸಿನೆಮಾ!

ಒಮಾನ್: ಕೌಟುಂಬಿಕ, ಸಾಮಾಜಿಕ, ಕುತೂಹಲ ಮೂಡಿಸುವ ಥ್ರಿಲ್ಲರ್ ಅಂಶಗಳನ್ನೊಳಗೊಂಡ ತುಳು ಚಲನಚಿತ್ರ...

ಅಟ್ಲಾಂಟ ಕನ್ನಡಿಗರಿಂದ ಸಂಕ್ರಾಂತಿ ಹಬ್ಬದ ಸಂಭ್ರಮಾಚರಣೆ

ಕೆ.ಆರ್. ಶ್ರೀನಾಥ್, ಅಟ್ಲಾಂಟ ಅಟ್ಲಾಂಟ: ಶನಿವಾರ ಅಟ್ಲಾಂಟದ ನೃಪತುಂಗ ಕನ್ನಡ ಕೂಟದ ಸದಸ್ಯರು...

KCWA celebrates Konkani Diwas 2026, Vodle Fest in grandeur

Kuwait: The Konkani-speaking community in Kuwait came together in...

ಅಬುಧಾಬಿಯ ಬಿಗ್ ಟಿಕೆಟ್ ಡ್ರಾದಲ್ಲಿ 49 ಕೋಟಿ ರೂ. ಗೆದ್ದ ಉಡುಪಿಯ ಶಾಂತನು ಶೆಟ್ಟಿಗಾರ್!

ದುಬೈ: ಒಮಾನ್​​​ನಲ್ಲಿ ಕೆಲಸ ಮಾಡುತ್ತಿರುವ ಉಡುಪಿಯ ಕಟಪಾಡಿ ಮಟ್ಟು ಮೂಲದ ಶಾಂತನು...

Related Articles

Popular Categories