ಯುಎಇಯುಎಇ ಕುಲಾಲ ಫ್ಯಾಮಿಲಿಯಿಂದ ಶ್ರೀಸತ್ಯನಾರಾಯಣ ಪೂಜೆ

ಯುಎಇ ಕುಲಾಲ ಫ್ಯಾಮಿಲಿಯಿಂದ ಶ್ರೀಸತ್ಯನಾರಾಯಣ ಪೂಜೆ

ದುಬೈ: ಇಲ್ಲಿನ ಗ್ಲೆಂಡೆಲ್ ಅಂತಾರಾಷ್ಟ್ರೀಯ ಶಾಲಾ ಸಭಾಂಗಣದಲ್ಲಿ ರವಿವಾರ ಸುಬ್ರಹ್ಮಣ್ಯ ಭಟ್ ಹಾಗೂ ಕೆ.ವಿ.ಅಡಿಗ ಇವರ ಪೌರೋಹಿತ್ಯದಲ್ಲಿ ಕುಲಾಲ ಫ್ಯಾಮಿಲಿ ಯುಎಇ ಆಯೋಜನೆಯ ಶ್ರೀ ಸತ್ಯನಾರಾಯಣ ಪೂಜೆ ಸಂಪನ್ನಗೊಂಡಿತು.

ಪದ್ಮರಾಜ್ ಕುಲಾಲ್ ಎಕ್ಕಾರ್ ಇವರ ನೇತ್ರತ್ವದಲ್ಲಿ ಹಾಗೂ ಅವರ ಜೊತೆಗೆ ಕೈ ಜೋಡಿಸಿದ ಕುಲಾಲ ಫ್ಯಾಮಿಲಿ ಅಡ್ಮಿನ್ ಬಳಗ ಆಯೋಜಿಸಿದ ಪೂಜಾ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನೆರವೇರಿತು.

ಕುಲಾಲ ಫ್ಯಾಮಿಲಿಯ ಸುಮಂಗಲಿಯರು, ದೀಪ ಪ್ರಜ್ವಲನೆ ಮಾಡುವ ಮೂಲಕ ಪೂಜಾ ವಿಧಿ ವಿಧಾನಗಳು ಆರಂಭಗೊಂಡಿತು. ಸುಜಾತ ಹಾಗೂ ಕಿರಣ್ ಕುಲಾಲ್ ದಂಪತಿಗಳು ಪೂಜೆಯ ಸಂಕಲ್ಪದಲ್ಲಿ ಪಾಲುಗೊಂಡರು. ಪದ್ಮರಾಜ್ ಎಕ್ಕಾರ್, ರಾಜೇಶ್ ಶೆಣೈ ಹಾಗೂ ಸಚಿನ್ ಕುಲಾಲ್ ‘ಶ್ರೀ ವಿಷ್ಣು ಸಹಸ್ರನಾಮಾವಳಿ’ ಪಠಣ ಮಾಡಿದರು.

ಶ್ರೀ ಓಂ ಶ್ರೀ ಭಕ್ತ ವೃಂದ ಶಾರ್ಜಾ ಇವರಿಂದ ಭಜನೆ ಸಂಕೀರ್ತನೆ ನಡೆಯಿತು. ಕುಲಾಲ ಸಮಾಜದ ಬಾಂಧವರು ನಡೆಸಿಕೊಟ್ಟ ಕುಣಿತ ಭಜನೆ ಸೇರಿದ ಭಕ್ತ ಜನರ ಮೆಚ್ಚುಗೆಗೆ ಪಾತ್ರವಾಯಿತು. ವಿದುಷಿ ಮಧುರಾ ವಿಶ್ವನಾಥ್ ಗಾಯನದ ಮುಖೇನ ನಡೆಸಿಕೊಟ್ಟ ಸತ್ಯನಾರಾಯಣ ದೇವರ ಕಥಾ ಕಾಲಕ್ಷೇಪಕ್ಕೆ ಸೇರಿದ ಭಕ್ತ ಸಮೂಹ ಭಾವ ಪರವಶರಾದರು. ಮಹಾಮಂಗಳಾರತಿ ಬಳಿಕ ದಾನಿಗಳನ್ನು ಗೌರವಿಸಿ, ಶ್ರೀ ದೇವರ ಪ್ರಸಾದ ನೀಡಲಾಯಿತು. ಭಕ್ತಾದಿಗಳು ಎಲ್ಲರೂ ಅನ್ನಸಂತರ್ಪಣೆಯ ಪ್ರಸಾದ ಸ್ವೀಕರಿಸಿ ಸಂತುಷ್ಟರಾದರು. ದುಬೈಯ ಹಲವು ಸಮಾಜದ ಗಣ್ಯರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಆರತಿ ಅಡಿಗ ಕಾರ್ಯಕ್ರಮ ನಿರೂಪಿಸಿದರು.

Hot this week

ದುಬೈ; ‘ಬ್ಯಾರೀಸ್ ಪ್ರೀಮಿಯರ್ ಲೀಗ್-2026’ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕ್ರೌನ್ ಹೊನ್ನಾವರ; ನಫೀಸ್ ಗ್ರೂಪ್ ರನ್ನರ್ ಅಪ್

ದುಬೈ: ಶಾರ್ಜಾದ ಬಿಜೋಯ್ಸ್ ಕ್ರಿಕೆಟ್ ಕ್ರೀಡಾಗಂಣದಲ್ಲಿ ರವಿವಾರ ನಡೆದ 'ಬ್ಯಾರೀಸ್ ಪ್ರೀಮಿಯರ್...

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಆಯ್ಕೆ

ದುಬೈ: ಕರ್ನಾಟಕ ಸಂಘ ಶಾರ್ಜಾ ಇದರ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ...

ರಮಝಾನ್-ಈದುಲ್ ಫಿತ್ರ್ ಅಂಗವಾಗಿ ಕನ್ನಡ ಸಂಘ ಬಹರೈನ್ ವತಿಯಿಂದ ಆಹಾರ ವಸ್ತುಗಳ ಕಿಟ್ ವಿತರಣೆ

ಬಹರೈನ್: ಪವಿತ್ರ ರಮಝಾನ್ ಮತ್ತು ಈದುಲ್ ಫಿತ್ರ್ ಹಬ್ಬದ ಅಂಗವಾಗಿ ಪ್ರಸ್ತುತ...

400 ಭಾರತೀಯರನ್ನು ತಾಯ್ನಾಡಿಗೆ ಕಳುಹಿಸಿದ ಬಹರೈನ್ ಕನ್ನಡ ಸಂಘ!

ಬಹರೈನ್: ತಾಯ್ನಾಡಿಗೆ ಮರಳಲು ಬಯಸಿದ ಸುಮಾರು 400 ಭಾರತೀಯರಿಗೆ ಕನ್ನಡ ಸಂಘ...

Related Articles

Popular Categories