ಯುಎಇಯುಎಇ ಕುಲಾಲ ಫ್ಯಾಮಿಲಿಯಿಂದ ಶ್ರೀಸತ್ಯನಾರಾಯಣ ಪೂಜೆ

ಯುಎಇ ಕುಲಾಲ ಫ್ಯಾಮಿಲಿಯಿಂದ ಶ್ರೀಸತ್ಯನಾರಾಯಣ ಪೂಜೆ

ದುಬೈ: ಇಲ್ಲಿನ ಗ್ಲೆಂಡೆಲ್ ಅಂತಾರಾಷ್ಟ್ರೀಯ ಶಾಲಾ ಸಭಾಂಗಣದಲ್ಲಿ ರವಿವಾರ ಸುಬ್ರಹ್ಮಣ್ಯ ಭಟ್ ಹಾಗೂ ಕೆ.ವಿ.ಅಡಿಗ ಇವರ ಪೌರೋಹಿತ್ಯದಲ್ಲಿ ಕುಲಾಲ ಫ್ಯಾಮಿಲಿ ಯುಎಇ ಆಯೋಜನೆಯ ಶ್ರೀ ಸತ್ಯನಾರಾಯಣ ಪೂಜೆ ಸಂಪನ್ನಗೊಂಡಿತು.

ಪದ್ಮರಾಜ್ ಕುಲಾಲ್ ಎಕ್ಕಾರ್ ಇವರ ನೇತ್ರತ್ವದಲ್ಲಿ ಹಾಗೂ ಅವರ ಜೊತೆಗೆ ಕೈ ಜೋಡಿಸಿದ ಕುಲಾಲ ಫ್ಯಾಮಿಲಿ ಅಡ್ಮಿನ್ ಬಳಗ ಆಯೋಜಿಸಿದ ಪೂಜಾ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನೆರವೇರಿತು.

ಕುಲಾಲ ಫ್ಯಾಮಿಲಿಯ ಸುಮಂಗಲಿಯರು, ದೀಪ ಪ್ರಜ್ವಲನೆ ಮಾಡುವ ಮೂಲಕ ಪೂಜಾ ವಿಧಿ ವಿಧಾನಗಳು ಆರಂಭಗೊಂಡಿತು. ಸುಜಾತ ಹಾಗೂ ಕಿರಣ್ ಕುಲಾಲ್ ದಂಪತಿಗಳು ಪೂಜೆಯ ಸಂಕಲ್ಪದಲ್ಲಿ ಪಾಲುಗೊಂಡರು. ಪದ್ಮರಾಜ್ ಎಕ್ಕಾರ್, ರಾಜೇಶ್ ಶೆಣೈ ಹಾಗೂ ಸಚಿನ್ ಕುಲಾಲ್ ‘ಶ್ರೀ ವಿಷ್ಣು ಸಹಸ್ರನಾಮಾವಳಿ’ ಪಠಣ ಮಾಡಿದರು.

ಶ್ರೀ ಓಂ ಶ್ರೀ ಭಕ್ತ ವೃಂದ ಶಾರ್ಜಾ ಇವರಿಂದ ಭಜನೆ ಸಂಕೀರ್ತನೆ ನಡೆಯಿತು. ಕುಲಾಲ ಸಮಾಜದ ಬಾಂಧವರು ನಡೆಸಿಕೊಟ್ಟ ಕುಣಿತ ಭಜನೆ ಸೇರಿದ ಭಕ್ತ ಜನರ ಮೆಚ್ಚುಗೆಗೆ ಪಾತ್ರವಾಯಿತು. ವಿದುಷಿ ಮಧುರಾ ವಿಶ್ವನಾಥ್ ಗಾಯನದ ಮುಖೇನ ನಡೆಸಿಕೊಟ್ಟ ಸತ್ಯನಾರಾಯಣ ದೇವರ ಕಥಾ ಕಾಲಕ್ಷೇಪಕ್ಕೆ ಸೇರಿದ ಭಕ್ತ ಸಮೂಹ ಭಾವ ಪರವಶರಾದರು. ಮಹಾಮಂಗಳಾರತಿ ಬಳಿಕ ದಾನಿಗಳನ್ನು ಗೌರವಿಸಿ, ಶ್ರೀ ದೇವರ ಪ್ರಸಾದ ನೀಡಲಾಯಿತು. ಭಕ್ತಾದಿಗಳು ಎಲ್ಲರೂ ಅನ್ನಸಂತರ್ಪಣೆಯ ಪ್ರಸಾದ ಸ್ವೀಕರಿಸಿ ಸಂತುಷ್ಟರಾದರು. ದುಬೈಯ ಹಲವು ಸಮಾಜದ ಗಣ್ಯರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಆರತಿ ಅಡಿಗ ಕಾರ್ಯಕ್ರಮ ನಿರೂಪಿಸಿದರು.

Hot this week

ದುಬೈ; ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನಲ್ಲಿ ಓಣಂ ಹಬ್ಬ ಆಚರಣೆ

ದುಬೈ : ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಫಾರ್ಚೂನ್ ಗ್ರೂಪ್...

ಕನ್ನಡಿಗರ ಕೂಟ ದುಬೈ ವತಿಯಿಂದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್‌ಗೆ ಸನ್ಮಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ತಂಡವು ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ...

ಫ್ಲೋರಿಡಾ ತುಳು ಕೂಟದ 2ನೇ ವಾರ್ಷಿಕ ಪೊಟ್ಲಕ್ ಪಿಕ್ನಿಕ್ ಸಂಭ್ರಮ

ಅಮೇರಿಕದ ಫ್ಲೋರಿಡಾ ತುಳು ಕೂಟವು ಇತ್ತೀಚೆಗೆ ಕ್ಯಾಸೆಲ್‌ಬೆರ್ರಿ ಒರ್ಲಾಂಡೊದಲ್ಲಿ ತನ್ನ ಎರಡನೇ...

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

Related Articles

Popular Categories