ಯುಎಇದುಬೈಯಲ್ಲಿ ಸಂಕಷ್ಟಕ್ಕೀಡಾಗಿರುವ ಪ್ರವಾಸಿ ಕನ್ನಡಿಗರಿಗೆ ಧೈರ್ಯ ತುಂಬಿದ ಎಂ.ಎ.ಗಫೂರ್

ದುಬೈಯಲ್ಲಿ ಸಂಕಷ್ಟಕ್ಕೀಡಾಗಿರುವ ಪ್ರವಾಸಿ ಕನ್ನಡಿಗರಿಗೆ ಧೈರ್ಯ ತುಂಬಿದ ಎಂ.ಎ.ಗಫೂರ್

ದುಬೈ: ಅಮೇರಿಕ-ಇಸ್ರೇಲ್ ಹಾಗು ಇರಾನ್ ಮಧ್ಯೆಗಿನ ಸಂಘರ್ಷದಿಂದ ದುಬೈಯಲ್ಲಿ ಸಂಕಷ್ಟಕ್ಕೀಡಾಗಿರುವ ಕನ್ನಡಿಗ ಪ್ರವಾಸಿಗರ ಜೊತೆ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಅವರು ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಆದಷ್ಟು ಬೇಗ ಕರ್ನಾಟಕಕ್ಕೆ ಕರೆತರುವ ವ್ಯವಸ್ಥೆ ಮಾಡಿಸುವುದಾಗಿ ಭರವಸೆ ನೀಡಿದ್ದಾರೆ.

ಕನ್ನಡಿಗಾಸ್ ಹೆಲ್ಪ್ ಲೈನ್ ಸಂಯೋಜಕ, ಬಿಸಿಸಿಐ ಯುಎಇ ಅಧ್ಯಕ್ಷರಾದ ಹಿದಾಯತ್ ಅಡ್ಡೂರು ಅವರ ನೇತೃತ್ವದಲ್ಲಿ ತಂಡವೊಂದು ಸೋಮವಾರ ಸಂಜೆ ದುಬೈಯಲ್ಲಿ ಸಿಲುಕಿ ಹಾಕಿಕೊಂಡಿರುವ ಕನ್ನಡಿಗ ಪ್ರವಾಸಿಗರನ್ನು ಭೇಟಿಯಾಗಿ ಅವರಿಗೆ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಿತು.

ಈ ವೇಳೆ ದೂರವಾಣಿ ಮೂಲಕ ಕನ್ನಡಿಗ ಪ್ರವಾಸಿಗರ ಜೊತೆ ಮಾತನಾಡಿದ ಗಫೂರ್ ಅವರು, ನಿಮಗೆ ಎಲ್ಲ ರೀತಿಯಿಂದಲೂ ಕರ್ನಾಟಕ ಸರಕಾರ ರಕ್ಷಣೆಗೆ ಬದ್ಧವಾಗಿದೆ. ನೀವು ಯಾರು ಆತಂಕಕ್ಕೀಡಾಗಬೇಡಿ, ಸರಕಾರದ ಜೊತೆ ತಾನು ಮಾತನಾಡುವುದಾಗಿಯೂ ಧೈರ್ಯ ತುಂಬಿದರು.

ಈ ವೇಳೆ ಶಶಿಧರ್ ನಾಗರಾಜಪ್ಪ(ಅಧ್ಯಕ್ಷರು, ಕರ್ನಾಟಕ ಸಂಘ, ದುಬೈ), ಸಲೀಂ ಮೂಡಬಿದ್ರೆ(ಉದ್ಯಮಿ), ಇಕ್ರಂ ಮೊಹಮ್ಮದ್ ಮೂಳೂರು, ಸಮದ್ ಬಿರಾಲಿ, ಅದ್ದು ಹೊನ್ನಾವರ, ಸಿನಾನ್ ಸಿದ್ದಿಕಿ, ನವಾಝ್ ವಾಮಂಜೂರು ಸೇರಿದಂತೆ ಮತ್ತಿತರರು ಹಾಜರಿದ್ದರು.

Hot this week

ದುಬೈ; ನವೆಂಬರ್ 1ರಂದು 71ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾದ ಕರ್ನಾಟಕ ಸಂಘ ದುಬೈ

ದುಬೈ: ಯುಎಇಯಲ್ಲಿರುವ ಕನ್ನಡಿಗರ ಅತಿದೊಡ್ಡ ಮತ್ತು ಅತ್ಯಂತ ಹಳೆಯ ಸಂಘಟನೆಯಾದ ಕರ್ನಾಟಕ...

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

ಬಹರೈನ್‌; ‘ಕೆಸಿಎಫ್’ನಿಂದ ಈದ್ ಮಿಲಾದ್ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ

ಮನಾಮ: ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್) ಬಹರೈನ್‌ ವತಿಯಿಂದ ಪ್ರವಾದಿ ಮುಹಮ್ಮದ್‌ರವರ...

ಅಮೇರಿಕ; ಭಕ್ತಿ, ಬಸವತತ್ವ, ನಾಟಕ-ನೃತ್ಯ ವೈಭವದಿಂದ ಕಂಗೊಳಿಸಿದ VSNA ಮಹಾಸಮ್ಮೇಳನದ ಎರಡನೇ ದಿನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಸ್ಯಾನ್‌ಫೋರ್ಡ್ (ಉತ್ತರ ಕೆರೊಲಿನಾ: 48ನೇ ವೀರಶೈವ ಸೊಸೈಟಿ...

ಕನ್ನಡ ಸಂಘ ಬಹರೈನ್‌ನ ‘ಯಕ್ಷ ವೈಭವ 2026’ ಮುಹೂರ್ತ ಪೂಜೆ ಸಂಪನ್ನ

ಬಹರೈನ್‌: ಕನ್ನಡ ಸಂಘ ಬಹರೈನ್ ಅರ್ಪಿಸುವ ‘ಯಕ್ಷ ವೈಭವ 2026’ ರ...

Related Articles

Popular Categories