ಯುಎಇಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ...

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ ವತಿಯಿಂದ ಹೊಸದಾಗಿ ನೇಮಕಗೊಂಡಿರುವ ಭಾರತದ ದುಬೈ ಕಾನ್ಸುಲ್ ಜನರಲ್ ಡಾ. ವಿಷ್ಣುವರ್ಧನ ರೆಡ್ಡಿ ಅವರನ್ನು ಭೇಟಿಯಾಗಿ, ದುಬೈ ಹಾಗೂ ಯುಎಇಯಲ್ಲಿರುವ ಅನಿವಾಸಿ ಕನ್ನಡಿಗರ ಪರವಾಗಿ ಆತ್ಮೀಯ ಸ್ವಾಗತ ಕೋರಲಾಯಿತು.

ಕನ್ನಡಿಗರ ಕೂಟದ ಅಧ್ಯಕ್ಷ ಅರುಣ್ ಕುಮಾರ್ ಎಂ.ಕೆ. ಅವರ ನೇತೃತ್ವದ ಪ್ರತಿನಿಧಿ ಮಂಡಳಿ ಡಾ. ವಿಷ್ಣುವರ್ಧನ ರೆಡ್ಡಿ ಅವರನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಕಳೆದ 24 ವರ್ಷಗಳಿಂದ ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆ ಹಾಗೂ ಸಾಮಾಜಿಕ ಕಲ್ಯಾಣ ಕ್ಷೇತ್ರಗಳಲ್ಲಿ ಕನ್ನಡಿಗರ ಕೂಟ ನೀಡಿರುವ ಮಹತ್ವದ ಕೊಡುಗೆಗಳ ಕುರಿತು ಡಾ. ರೆಡ್ಡಿ ಅವರಿಗೆ ವಿವರಿಸಲಾಯಿತು.

ಮುಂದಿನ ದಿನಗಳಲ್ಲಿ ಇನ್ನಷ್ಟು ಸಮುದಾಯಮುಖಿ ಕಾರ್ಯಕ್ರಮಗಳು ಹಾಗೂ ಕಲ್ಯಾಣ ಸೇವೆಗಳನ್ನು ವಿಸ್ತರಿಸುವ ಸಂಸ್ಥೆಯ ಬದ್ಧತೆಯನ್ನು ಅರುಣ್ ಕುಮಾರ್ ಎಂ.ಕೆ. ಅವರು ವ್ಯಕ್ತಪಡಿಸಿದರು.

ಕನ್ನಡಿಗರ ಕೂಟದ ಕಾರ್ಯಚಟುವಟಿಕೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಡಾ. ವಿಷ್ಣುವರ್ಧನ ರೆಡ್ಡಿ, ಕಾನ್ಸುಲೇಟ್ ಮಾರ್ಗಸೂಚಿಗಳ ವ್ಯಾಪ್ತಿಯಲ್ಲಿ ಸಾಧ್ಯವಿರುವ ಎಲ್ಲ ರೀತಿಯ ಸೇವೆ ಹಾಗೂ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಲಹಾ ಸಮಿತಿ ಸದಸ್ಯೆ ಉಮಾ ವಿದ್ಯಾಧರ ಹಾಗೂ ಕೋರ್ ಸಮಿತಿಯ ಸದಸ್ಯರಾದ ಮಲ್ಲಿಕಾರ್ಜುನ ಅಂಗಡಿ – ಉಪಾಧ್ಯಕ್ಷ, ಚೇತನ್ ಸುಬ್ರಹ್ಮಣ್ಯ – ಪ್ರಧಾನ ಕಾರ್ಯದರ್ಶಿ, ದೀಪಕ್ ಸೋಮಶೇಖರ – ಸಂಯುಕ್ತ ಪ್ರಧಾನ ಕಾರ್ಯದರ್ಶಿ, ವಿನೀತ್ ರಾಜ್ – ಖಜಾಂಚಿ, ವಿನಾಯಕ ಹೆಗಡೆ – ಸಾಂಸ್ಕೃತಿಕ ಕಾರ್ಯದರ್ಶಿ ಹಾಗೂ ಲಕ್ಷ್ಮೀಶ ಭಾರದ್ವಾಜ್ – ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Hot this week

ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ರಕ್ತದಾನದಿಂದ ಮಾನವೀಯತೆಯ ಸಂದೇಶ ಸಾರಿದ ಕರ್ನಾಟಕ ಸಂಘ ಶಾರ್ಜಾ

ದುಬೈ: ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ಕರ್ನಾಟಕ ಸಂಘ ಶಾರ್ಜಾ ಮತ್ತು...

ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್‌ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಸಲಾಲ(ಒಮಾನ್): ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್ ನಲ್ಲಿ ಬ್ಯಾರೀಸ್ ಕಮ್ಯುನಿಟಿ...

ಭಾರತದ 80ನೇ ಸ್ವಾತಂತ್ರ್ಯೋತ್ಸವದಲ್ಲಿ ಕರ್ನಾಟಕ ಸಂಘ ಖತರ್‌ನ ಅದ್ದೂರಿ ಭಾಗವಹಿಸುವಿಕೆ

ದೋಹಾ(ಖತರ್): ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಾರತೀಯ ರಾಯಭಾರ ಕಚೇರಿ ದೋಹಾ...

ಬಹರೈನ್; ಆಗಸ್ಟ್ 21ರಂದು ‘ಕೆಸಿಎಫ್’ನಿಂದ ಗ್ರ್ಯಾಂಡ್ ಮೀಲಾದ್ ಕಾನ್ಫರೆನ್ಸ್

ಮನಾಮ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ...

ಭಾರತೀಯ ರಾಯಭಾರ ಕಚೇರಿಯ ಡಾ.ಈಶ್ ಸಿಂಘಾಲ್​​ಗೆ ಭಾವಪೂರ್ಣ ಬೀಳ್ಕೊಡುಗೆ; ಕರ್ನಾಟಕ ಸಂಘ ಖತರ್‌ನಿಂದ ಅಭಿನಂದನೆ

ದೋಹಾ(ಖತರ್): ಖತರ್‌ನಲ್ಲಿ ತಮ್ಮ ಸೇವಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಭಾರತೀಯ ರಾಯಭಾರ ಕಚೇರಿಯ...

Related Articles

Popular Categories