ಯುಎಇಅ.25ರಂದು 'ದುಬೈ ಗಡಿನಾಡ ಉತ್ಸವ -2025 '; ಪೋಸ್ಟರ್...

ಅ.25ರಂದು ‘ದುಬೈ ಗಡಿನಾಡ ಉತ್ಸವ -2025 ‘; ಪೋಸ್ಟರ್ ಬಿಡುಗಡೆ

ದುಬೈ: ಯುಎಇಯಲ್ಲಿ ಇರುವ ಎಲ್ಲಾ ಗಡಿನಾಡಿನ ಹಾಗೂ ಕರುನಾಡಿನ ಕನ್ನಡಿಗರನ್ನು ಒಟ್ಟುಗೂಡಿಸಿ “ದುಬೈ ಗಡಿನಾಡ ಉತ್ಸವ -2025″ವನ್ನು ಅದ್ದೂರಿಯಾಗಿ ಆಚರಿಸುವ ಹಾಗೂ ಈ ಕಾರ್ಯಕ್ರಮ ಒಳ್ಳೆಯ ರೀತಿಯಲ್ಲಿ ಮೂಡಿಬರಲಿ ಎಂದು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ಗಲ್ಫ್ ನ ಅಧ್ಯಕ್ಷರಾದ ಅಶ್ರಫ್ ಶಾ ಮಾಂತುರು ಹೇಳಿದ್ದಾರೆ.

ಇತ್ತೀಚಿಗೆ ದುಬೈ ಗಡಿನಾಡ ಉತ್ಸವ -2025ರ ಪೋಸ್ಟರ್ ಬಿಡುಗಡೆ ಮಾಡಿ ಅವರು ಶುಭವನ್ನು ಹಾರೈಸಿದರು.

ಅಕ್ಟೋಬರ್ 25 ರಂದು ಸಂಜೆ 4ರಿಂದ ರಾತ್ರಿ ಹನ್ನೊಂದರ ವರೆಗೆ ಔದ್ ಮೇಥದ ಗ್ಲೆಂಡೇಲ್ ಅಂತಾರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ ನಡೆಯುವ ನಾಲ್ಕನೇ ವರ್ಷದ “ದುಬೈ ಗಡಿನಾಡ ಉತ್ಸವ -2025″ರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ದುಬೈ ಘಟಕದ ಅಮರ್ ದೀಪ್ ಕಲ್ಲುರಾಯ ಮಾತನಾಡಿ, ಕಳೆದ ಮೂರು ವರ್ಷಗಳಿಂದ ದುಬೈನಲ್ಲಿ ಗಡಿನಾಡ ಉತ್ಸವ ಆಚರಿಸುವ ಮೂಲಕ ನಮ್ಮ ಗಡಿನಾಡಿನ ಕಲೆ,ಸಾಹಿತ್ಯ, ಸಂಸ್ಕೃತಿಯನ್ನು ಅನಾವರಣಗೊಳಿಸುತ್ತಿದ್ದೇವೆ. ಈ ವರ್ಷ ನಮ್ಮ ನಾಲ್ಕನೇ ವರ್ಷದ ಕಾರ್ಯಕ್ರಮ ಯುಎಇಯಲ್ಲಿ ಇರುವ ಎಲ್ಲಾ ಕನ್ನಡಿಗರೂ ಈ ಉತ್ಸವದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಉದ್ಯಮಿ ಮಂಜುನಾಥ ರಾಜನ್, ದುಬೈಯ ಕನ್ನಡ ನಿರೂಪಕಿ ಆರತಿ ಅಡಿಗ, ಶಾರ್ಜಾ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ ನೋಯೆಲ್ಅ ಲ್ಮೇಡಾರವರು ಅಕ್ಟೋಬರ್ 25 ರಂದು ನಡೆಯುವ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಘಟಕದ ಪದಾಧಿಕಾರಿಗಳಾದ ಸುಗಂದರಾಜ್ ಬೇಕಲ್, ಮಂಜುನಾಥ ಕಾಸರಗೋಡು, ವಿಜಯಕುಮಾರ್ ಶೆಟ್ಟಿ ಗಾಣದಮೂಲೆ, ಯೂಸುಫ್ ಶೇಣಿ, ಅಶ್ರಫ್ ಪಿ.ಪಿ. ಬಾಯರ್, ಬಾಬ ಬಾಜೂರಿ, ಅನೀಶ್ ಅಡಪ ಮಡಂದೂರು, ರಾಮಚಂದ್ರ ಬೆದ್ರಡ್ಕ, ಆಶೀಕ್ ಮಿಯಾ, ಮನ್ಸೂರ್ ಮರ್ಥ್ಯ ಉಪಸ್ಥಿತರಿದ್ದರು. ಕಾರ್ಯದರ್ಶಿ ಬಾಬ ಬಾಜೂರಿ ಸ್ವಾಗತಿಸಿ, ಅಶ್ರಫ್ ಪಿ.ಪಿ.ಬಾಯರ್ ಧನ್ಯವಾದವಿತ್ತರು.

Hot this week

ಡಿ.12ರಂದು ಬಹರೈನ್ ಕನ್ನಡ ಸಂಘದಿಂದ ‘ಕನ್ನಡ ವೈಭವ’ ಸಾಂಸ್ಕೃತಿಕ ಕಾರ್ಯಕ್ರಮ; ಮುತ್ತುಗಳ ದ್ವೀಪದಲ್ಲಿ ಹಾಡು, ಹಾಸ್ಯ, ನೃತ್ಯಗಳ ಮಹಾ ಸಂಗಮ

ಬಹರೈನ್: ಇಲ್ಲಿನ ರಾಜ್ಯಪ್ರಶಸ್ತಿ ಪುರಸ್ಕೃತ ಕನ್ನಡ ಸಂಘದ ವಾರ್ಷಿಕ ಕಾರ್ಯಕ್ರಮವಾದ "ಕನ್ನಡ...

ದುಬೈಯಲ್ಲಿ ‘ಕುಲಾಲ ಫ್ಯಾಮಿಲಿ’ಯಿಂದ ಯಶಸ್ವಿಯಾಗಿ ನಡೆದ ‘ವಿಹಾರ ಕೂಟ 2025’

ದುಬೈ: 'ಕುಲಾಲ ಫ್ಯಾಮಿಲಿ ದುಬೈ ಯುಎಇ' ವತಿಯಿಂದ ಮಂಗಳವಾರ ದುಬೈಯ ಝಬೀಲ್...

Related Articles

Popular Categories