ಯುಎಇಅ.25ರಂದು 'ದುಬೈ ಗಡಿನಾಡ ಉತ್ಸವ -2025 '; ಪೋಸ್ಟರ್...

ಅ.25ರಂದು ‘ದುಬೈ ಗಡಿನಾಡ ಉತ್ಸವ -2025 ‘; ಪೋಸ್ಟರ್ ಬಿಡುಗಡೆ

ದುಬೈ: ಯುಎಇಯಲ್ಲಿ ಇರುವ ಎಲ್ಲಾ ಗಡಿನಾಡಿನ ಹಾಗೂ ಕರುನಾಡಿನ ಕನ್ನಡಿಗರನ್ನು ಒಟ್ಟುಗೂಡಿಸಿ “ದುಬೈ ಗಡಿನಾಡ ಉತ್ಸವ -2025″ವನ್ನು ಅದ್ದೂರಿಯಾಗಿ ಆಚರಿಸುವ ಹಾಗೂ ಈ ಕಾರ್ಯಕ್ರಮ ಒಳ್ಳೆಯ ರೀತಿಯಲ್ಲಿ ಮೂಡಿಬರಲಿ ಎಂದು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ಗಲ್ಫ್ ನ ಅಧ್ಯಕ್ಷರಾದ ಅಶ್ರಫ್ ಶಾ ಮಾಂತುರು ಹೇಳಿದ್ದಾರೆ.

ಇತ್ತೀಚಿಗೆ ದುಬೈ ಗಡಿನಾಡ ಉತ್ಸವ -2025ರ ಪೋಸ್ಟರ್ ಬಿಡುಗಡೆ ಮಾಡಿ ಅವರು ಶುಭವನ್ನು ಹಾರೈಸಿದರು.

ಅಕ್ಟೋಬರ್ 25 ರಂದು ಸಂಜೆ 4ರಿಂದ ರಾತ್ರಿ ಹನ್ನೊಂದರ ವರೆಗೆ ಔದ್ ಮೇಥದ ಗ್ಲೆಂಡೇಲ್ ಅಂತಾರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ ನಡೆಯುವ ನಾಲ್ಕನೇ ವರ್ಷದ “ದುಬೈ ಗಡಿನಾಡ ಉತ್ಸವ -2025″ರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ದುಬೈ ಘಟಕದ ಅಮರ್ ದೀಪ್ ಕಲ್ಲುರಾಯ ಮಾತನಾಡಿ, ಕಳೆದ ಮೂರು ವರ್ಷಗಳಿಂದ ದುಬೈನಲ್ಲಿ ಗಡಿನಾಡ ಉತ್ಸವ ಆಚರಿಸುವ ಮೂಲಕ ನಮ್ಮ ಗಡಿನಾಡಿನ ಕಲೆ,ಸಾಹಿತ್ಯ, ಸಂಸ್ಕೃತಿಯನ್ನು ಅನಾವರಣಗೊಳಿಸುತ್ತಿದ್ದೇವೆ. ಈ ವರ್ಷ ನಮ್ಮ ನಾಲ್ಕನೇ ವರ್ಷದ ಕಾರ್ಯಕ್ರಮ ಯುಎಇಯಲ್ಲಿ ಇರುವ ಎಲ್ಲಾ ಕನ್ನಡಿಗರೂ ಈ ಉತ್ಸವದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಉದ್ಯಮಿ ಮಂಜುನಾಥ ರಾಜನ್, ದುಬೈಯ ಕನ್ನಡ ನಿರೂಪಕಿ ಆರತಿ ಅಡಿಗ, ಶಾರ್ಜಾ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ ನೋಯೆಲ್ಅ ಲ್ಮೇಡಾರವರು ಅಕ್ಟೋಬರ್ 25 ರಂದು ನಡೆಯುವ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಘಟಕದ ಪದಾಧಿಕಾರಿಗಳಾದ ಸುಗಂದರಾಜ್ ಬೇಕಲ್, ಮಂಜುನಾಥ ಕಾಸರಗೋಡು, ವಿಜಯಕುಮಾರ್ ಶೆಟ್ಟಿ ಗಾಣದಮೂಲೆ, ಯೂಸುಫ್ ಶೇಣಿ, ಅಶ್ರಫ್ ಪಿ.ಪಿ. ಬಾಯರ್, ಬಾಬ ಬಾಜೂರಿ, ಅನೀಶ್ ಅಡಪ ಮಡಂದೂರು, ರಾಮಚಂದ್ರ ಬೆದ್ರಡ್ಕ, ಆಶೀಕ್ ಮಿಯಾ, ಮನ್ಸೂರ್ ಮರ್ಥ್ಯ ಉಪಸ್ಥಿತರಿದ್ದರು. ಕಾರ್ಯದರ್ಶಿ ಬಾಬ ಬಾಜೂರಿ ಸ್ವಾಗತಿಸಿ, ಅಶ್ರಫ್ ಪಿ.ಪಿ.ಬಾಯರ್ ಧನ್ಯವಾದವಿತ್ತರು.

Hot this week

ದುಬೈ; ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನಲ್ಲಿ ಓಣಂ ಹಬ್ಬ ಆಚರಣೆ

ದುಬೈ : ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಫಾರ್ಚೂನ್ ಗ್ರೂಪ್...

ಕನ್ನಡಿಗರ ಕೂಟ ದುಬೈ ವತಿಯಿಂದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್‌ಗೆ ಸನ್ಮಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ತಂಡವು ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ...

ಫ್ಲೋರಿಡಾ ತುಳು ಕೂಟದ 2ನೇ ವಾರ್ಷಿಕ ಪೊಟ್ಲಕ್ ಪಿಕ್ನಿಕ್ ಸಂಭ್ರಮ

ಅಮೇರಿಕದ ಫ್ಲೋರಿಡಾ ತುಳು ಕೂಟವು ಇತ್ತೀಚೆಗೆ ಕ್ಯಾಸೆಲ್‌ಬೆರ್ರಿ ಒರ್ಲಾಂಡೊದಲ್ಲಿ ತನ್ನ ಎರಡನೇ...

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

Related Articles

Popular Categories