ಯುಎಸ್‌ಎಅಟ್ಲಾಂಟ ಕನ್ನಡಿಗರಿಂದ ಸಂಭ್ರಮದ 70ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ

ಅಟ್ಲಾಂಟ ಕನ್ನಡಿಗರಿಂದ ಸಂಭ್ರಮದ 70ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ

ಅಟ್ಲಾಂಟ: ರವಿವಾರ (ನ. 2) ಅಟ್ಲಾಂಟ ನಗರದ ನೃಪತುಂಗ ಕನ್ನಡ ಕೂಟದ ವತಿಯಿಂದ ಕನ್ನಡಿಗರು ಸಂಭ್ರಮದಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸಿದರು.

ಬೆಳಿಗ್ಗೆ 9.30ರಿಂದ ರಾತ್ರಿ 8 ಗಂಟೆಯವರೆಗೂ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಕರ್ನಾಟಕದಿಂದ ಆಗಮಿಸಿದ್ದ ಕಲಾವಿದರಾದ ನಮಿತಾ ರಾವ್ ಹಾಗೂ ವಿಕ್ರಂ ಸೂರಿ ಅವರು ಸ್ಧಳೀಯ ಪ್ರತಿಭೆಗಳೊಂದಿಗೆ “ಮೋಹಿನಿ ಭಸ್ಮಾಸುರ” ನೃತ್ಯ ನಾಟಕವನ್ನು ಪ್ರದರ್ಶಿಸಿದರು. ಹಾಗೆಯೇ ಬೆಂಗಳೂರಿನಿಂದ ಆಗಮಿಸಿದ್ದ ಅಲೋಕ್ (All OK) ಹಾಗೂ ದಿವ್ಯಾ ರಾಮಚಂದ್ರ ಅವರು ತಮ್ಮ ವಿಷೇಶ ಗಾಯನದಿಂದ ಕನ್ನಡಿಗರನ್ನು ಖುಷಿಯಿಂದ ಕುಣಿಸಿದರು.

ಸ್ಥಳೀಯ ಕನ್ನಡಿಗರು ಕರ್ನಾಟಕದ ವಿವಿಧ ಪ್ರದೇಶಗಳ ವೇಷಭೂಷಣಗಳನ್ನು ಧರಿಸಿ ಆಯಾ ಪ್ರದೇಶದ ಕನ್ನಡ ಗೀತೆಗಳೊಂದಿಗೆ ನೃತ್ಯಮಾಡಿದರು. ಮುಂದಿನ ಪೀಳಿಗೆಯ ಮಕ್ಕಳಲ್ಲಿ ಕನ್ನಡ ಓದು, ಬರಹವನ್ನು ಉತ್ತೇಜಿಸಿ ಕಾಪಾಡಲು ಕನ್ನಡ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆಯನ್ನು ಸಹ ಏರ್ಪಡಿಸಲಾಗಿತ್ತು. ಅಟ್ಲಾಂಟ ನಗರದಲ್ಲಿರುವ ಹಲವಾರು ಕನ್ನಡ ಶಾಲೆಯ ಮಕ್ಕಳು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಕನ್ನಡ ಕೂಟದ ವತಿಯಿಂದ ಆಯೋಜಿಸಿದ್ದ ಪಿಕಲ್ ಬಾಲ್ ಟೂರ್ನಮೆಂಟ್ ವಿಜೇತರಿಗೆ ಬಹುಮಾನ ನೀಡಲಾಯಿತು.

ಭಾರತದ ಕೌನ್ಸಲೇಟ್ ಜನರಲ್ ಕಛೇರಿಯ ಅಧಿಕಾರಿ ಹಾಗೂ ಸ್ಥಳೀಯ ಕೌಂಟಿಯ ಕೌನ್ಸಲರ್ ಗಳೂ ಕಾರ್ಯಕ್ರಮಕ್ಕೆ ಆಗಮಿಸಿ ಅಟ್ಲಾಂಟ ಕನ್ನಡಿಗರು ತಮ್ಮ ಪರಿಶ್ರಮ ಹಾಗೂ ಪ್ರತಿಭೆಯಿಂದ ಸಮಾಜಕ್ಕೆ ನೀಡುತ್ತಿರುವ ಕೊಡುಗೆಯನ್ನು ಸ್ಮರಿಸಿ, ಪ್ರಶಂಸಿದರು. ಅಟ್ಲಾಂಟ ನಗರದಲ್ಲಿ ಮೊದಲ ಬಾರಿಗೆ ಕೆ.ಎಂ.ಎಫ್ ನ ‘ನಂದಿನಿ’ ಉತ್ಪನ್ನಗಳನ್ನು ಈ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು.

Hot this week

ಜರ್ಮನಿ; ನಾಟ್ಯಫೆಸ್ಟ್ 2026: ಸಂಸ್ಕೃತಿ ಮತ್ತು ಸೃಜನಾತ್ಮಕತೆಯ ರಂಜಕ ವೇದಿಕೆ

ಫ್ರಾಂಕ್‌ಫರ್ಟ್‌ (ಜರ್ಮನಿ): ಇತ್ತೀಚೆಗೆ ಮ್ಯೂನಿಕ್‌ನ ಐನ್‌ಸ್ಟೈನ್ ಕಲ್ಚರ್ ವೇದಿಕೆ ನಾಟ್ಯಫೆಸ್ಟ್ 2026...

ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ದೋಹಾ(ಖತರ್‌): ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ...

ಜರ್ಮನಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಜಾನಪದ ವೈಭವ; ಸಂಸ್ಕೃತಿಯ ಗತ ವೈಭವ ಸೃಷ್ಟಿ

ಜರ್ಮನಿ: ರೈನ್ ಮೈನ್ ಕನ್ನಡ ಸಂಘದಿಂದ ಇದೇ ಮೊದಲ ಬಾರಿಗೆ ಶನಿವಾರ...

ಕನ್ನಡ ಸಂಘ ಬಹರೈನ್‌ನಿಂದ ಆರೋಗ್ಯ ದಿನ; ಉಚಿತ ವೈದ್ಯಕೀಯ ಶಿಬಿರ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಅಲ್ ಹಿಲಾಲ್ ಹೆಲ್ತ್ ಕೇರ್...

ಕರ್ನಾಟಕ ಸಂಘ ಖತರ್‌ಗೆ ನೂತನ ಆಡಳಿತ ಸಮಿತಿ ಆಯ್ಕೆ; 2026–2028 ಅವಧಿಗೆ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವಿರೋಧ ಆಯ್ಕೆ

ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ...

Related Articles

Popular Categories