ಯುಎಸ್‌ಎಅಟ್ಲಾಂಟ ಕನ್ನಡಿಗರಿಂದ ಸಂಭ್ರಮದ 70ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ

ಅಟ್ಲಾಂಟ ಕನ್ನಡಿಗರಿಂದ ಸಂಭ್ರಮದ 70ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ

ಅಟ್ಲಾಂಟ: ರವಿವಾರ (ನ. 2) ಅಟ್ಲಾಂಟ ನಗರದ ನೃಪತುಂಗ ಕನ್ನಡ ಕೂಟದ ವತಿಯಿಂದ ಕನ್ನಡಿಗರು ಸಂಭ್ರಮದಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸಿದರು.

ಬೆಳಿಗ್ಗೆ 9.30ರಿಂದ ರಾತ್ರಿ 8 ಗಂಟೆಯವರೆಗೂ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಕರ್ನಾಟಕದಿಂದ ಆಗಮಿಸಿದ್ದ ಕಲಾವಿದರಾದ ನಮಿತಾ ರಾವ್ ಹಾಗೂ ವಿಕ್ರಂ ಸೂರಿ ಅವರು ಸ್ಧಳೀಯ ಪ್ರತಿಭೆಗಳೊಂದಿಗೆ “ಮೋಹಿನಿ ಭಸ್ಮಾಸುರ” ನೃತ್ಯ ನಾಟಕವನ್ನು ಪ್ರದರ್ಶಿಸಿದರು. ಹಾಗೆಯೇ ಬೆಂಗಳೂರಿನಿಂದ ಆಗಮಿಸಿದ್ದ ಅಲೋಕ್ (All OK) ಹಾಗೂ ದಿವ್ಯಾ ರಾಮಚಂದ್ರ ಅವರು ತಮ್ಮ ವಿಷೇಶ ಗಾಯನದಿಂದ ಕನ್ನಡಿಗರನ್ನು ಖುಷಿಯಿಂದ ಕುಣಿಸಿದರು.

ಸ್ಥಳೀಯ ಕನ್ನಡಿಗರು ಕರ್ನಾಟಕದ ವಿವಿಧ ಪ್ರದೇಶಗಳ ವೇಷಭೂಷಣಗಳನ್ನು ಧರಿಸಿ ಆಯಾ ಪ್ರದೇಶದ ಕನ್ನಡ ಗೀತೆಗಳೊಂದಿಗೆ ನೃತ್ಯಮಾಡಿದರು. ಮುಂದಿನ ಪೀಳಿಗೆಯ ಮಕ್ಕಳಲ್ಲಿ ಕನ್ನಡ ಓದು, ಬರಹವನ್ನು ಉತ್ತೇಜಿಸಿ ಕಾಪಾಡಲು ಕನ್ನಡ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆಯನ್ನು ಸಹ ಏರ್ಪಡಿಸಲಾಗಿತ್ತು. ಅಟ್ಲಾಂಟ ನಗರದಲ್ಲಿರುವ ಹಲವಾರು ಕನ್ನಡ ಶಾಲೆಯ ಮಕ್ಕಳು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಕನ್ನಡ ಕೂಟದ ವತಿಯಿಂದ ಆಯೋಜಿಸಿದ್ದ ಪಿಕಲ್ ಬಾಲ್ ಟೂರ್ನಮೆಂಟ್ ವಿಜೇತರಿಗೆ ಬಹುಮಾನ ನೀಡಲಾಯಿತು.

ಭಾರತದ ಕೌನ್ಸಲೇಟ್ ಜನರಲ್ ಕಛೇರಿಯ ಅಧಿಕಾರಿ ಹಾಗೂ ಸ್ಥಳೀಯ ಕೌಂಟಿಯ ಕೌನ್ಸಲರ್ ಗಳೂ ಕಾರ್ಯಕ್ರಮಕ್ಕೆ ಆಗಮಿಸಿ ಅಟ್ಲಾಂಟ ಕನ್ನಡಿಗರು ತಮ್ಮ ಪರಿಶ್ರಮ ಹಾಗೂ ಪ್ರತಿಭೆಯಿಂದ ಸಮಾಜಕ್ಕೆ ನೀಡುತ್ತಿರುವ ಕೊಡುಗೆಯನ್ನು ಸ್ಮರಿಸಿ, ಪ್ರಶಂಸಿದರು. ಅಟ್ಲಾಂಟ ನಗರದಲ್ಲಿ ಮೊದಲ ಬಾರಿಗೆ ಕೆ.ಎಂ.ಎಫ್ ನ ‘ನಂದಿನಿ’ ಉತ್ಪನ್ನಗಳನ್ನು ಈ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು.

Hot this week

ಅಬುಧಾಬಿಗೆ ಸಚಿವ ಡಾ.ಜೈಶಂಕರ್ ಭೇಟಿ; ಕನ್ನಡಿಗರ ಕೂಟ ದುಬೈ-ಅಬುಧಾಬಿ ಕರ್ನಾಟಕ ಸಂಘ ಪ್ರತಿನಿಧಿತ್ವ

ಅಬುಧಾಬಿ: ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು...

ದುಬೈ; ‘ಬ್ಯಾರೀಸ್ ಪ್ರೀಮಿಯರ್ ಲೀಗ್-2026’ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕ್ರೌನ್ ಹೊನ್ನಾವರ; ನಫೀಸ್ ಗ್ರೂಪ್ ರನ್ನರ್ ಅಪ್

ದುಬೈ: ಶಾರ್ಜಾದ ಬಿಜೋಯ್ಸ್ ಕ್ರಿಕೆಟ್ ಕ್ರೀಡಾಗಂಣದಲ್ಲಿ ರವಿವಾರ ನಡೆದ 'ಬ್ಯಾರೀಸ್ ಪ್ರೀಮಿಯರ್...

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಆಯ್ಕೆ

ದುಬೈ: ಕರ್ನಾಟಕ ಸಂಘ ಶಾರ್ಜಾ ಇದರ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ...

ರಮಝಾನ್-ಈದುಲ್ ಫಿತ್ರ್ ಅಂಗವಾಗಿ ಕನ್ನಡ ಸಂಘ ಬಹರೈನ್ ವತಿಯಿಂದ ಆಹಾರ ವಸ್ತುಗಳ ಕಿಟ್ ವಿತರಣೆ

ಬಹರೈನ್: ಪವಿತ್ರ ರಮಝಾನ್ ಮತ್ತು ಈದುಲ್ ಫಿತ್ರ್ ಹಬ್ಬದ ಅಂಗವಾಗಿ ಪ್ರಸ್ತುತ...

Related Articles

Popular Categories