ಯುಎಸ್‌ಎಅಟ್ಲಾಂಟ ಕನ್ನಡಿಗರಿಂದ ಅದ್ದೂರಿಯ ಯುಗಾದಿ ಸಂಭ್ರಮಾಚರಣೆ; ಸಂಗೀತ ಪ್ರಿಯರನ್ನು...

ಅಟ್ಲಾಂಟ ಕನ್ನಡಿಗರಿಂದ ಅದ್ದೂರಿಯ ಯುಗಾದಿ ಸಂಭ್ರಮಾಚರಣೆ; ಸಂಗೀತ ಪ್ರಿಯರನ್ನು ತಲೆದೂಗುವಂತೆ ಮಾಡಿದ ರಾಜೇಶ್ ಕೃಷ್ಣನ್ ಹಾಡು

ಅಮೆರಿಕಾದ ಅಟ್ಲಾಂಟ ಕನ್ನಡಿಗರು ಮೇ 4ರಂದು ರವಿವಾರ ಅದ್ದೂರಿಯಾಗಿ ಯುಗಾದಿ ಹಾಗೂ ಕನ್ನಡ ಹೊಸ ವರ್ಷವನ್ನು ಸಂಭ್ರಮದಿಂದ ಆಚರಿಸಿಕೊಂಡರು.

ನೃಪತುಂಗ ಕನ್ನಡ ಕೂಟದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಅವರ ಸಂಗೀತ ಸಂಜೆ ಮುಖ್ಯ ಆಕರ್ಷಣೆಯಾಗಿತ್ತು.

ಕನ್ನಡ ಶಾಲೆಯ ಶಿಕ್ಷಕರು ಮತ್ತು ಮಕ್ಕಳು

ಕಾರ್ಯಕ್ರಮದ ಒಂದು ವಾರದ ಮುಂಚೆಯೇ ಟಿಕೆಟ್ “ಸೋಲ್ಡ್ ಔಟ್” ಆಗಿದ್ದು ಕನ್ನಡಿಗರು ತಮ್ಮ ನೆಚ್ಚಿನ ಗಾಯಕನ ಹಾಡುಗಳನ್ನು ಸಂತೋಷದಿಂದ ಆನಂದಿಸಿದರು. ರಾಜೇಶ್ ಕೃಷ್ಣನ್ ತಮ್ಮ ಸುಮಧುರ ಗಾಯನ, ನಗು, ಪ್ರೀತಿಯಿಂದ ಅಭಿಮಾನಿಗಳ ಹೃದಯ ಗೆದ್ದರು. ಅಷ್ಟೇ ಅಲ್ಲದೆ ಪ್ರೋತ್ಸಾಹ ನೀಡಲು ಅಟ್ಲಾಂಟದ ಸ್ಥಳೀಯ ಪ್ರತಿಭೆಗಳನ್ನು ಸಹ ತಮ್ಮ ಜೊತೆ ಹಾಡಿಸಿ ಕನ್ನಡಿಗರ ಮನ ಗೆದ್ದರು.

ಸ್ಥಳೀಯ ಗಾಯಕರೊಂದಿಗೆ ಮನರಂಜಿಸಿದ ರಾಜೇಶ್ ಕೃಷ್ಣನ್

ಸ್ಥಳೀಯ ಪ್ರತಿಭೆಗಳಿಂದ ನೃತ್ಯ, ಗಾಯನ, ನಾಟಕಗಳನ್ನು ಆಯೋಜಿಸಲಾಗಿತ್ತು. ಕನ್ನಡ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಸ್ಥಳೀಯ ಕನ್ನಡಿಗರು ಭಾಗವಹಿಸಿ ಸಂತೋಷಪಟ್ಟರು. ಕೆ.ಆರ್.ಶ್ರೀನಾಥ್ ಅವರು ಕಾರ್ಯಕ್ರಮದಲ್ಲಿ ಕನ್ನಡ ಪ್ರಶ್ನಾವಳಿ ಕಾರ್ಯಕ್ರಮ ನಡೆಸಿಕೊಟ್ಟರು. ಕನ್ನಡ ಕೂಟ ತಂಡದವರು ಶ್ರಮವಹಿಸಿ ಇಡೀ ದಿನದ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಿ ಭರ್ಜರಿ ಭೋಜನದ ವ್ಯವಸ್ಥೆಯನ್ನು ಸಹ ಮಾಡಿದ್ದರು.

ವರದಿ: ಕೆ.ಆರ್.ಶ್ರೀನಾಥ್, ಅಟ್ಲಾಂಟ

Hot this week

ಬಹರೈನ್: ಯಕ್ಷಗುರು ದೀಪಕ್ ರಾವ್ ಪೇಜಾವರರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಬಹರೈನ್: ಕಳೆದ ಒಂದು ದಶಕದಿಂದ ಬಹರೈನ್ ದ್ವೀಪರಾಷ್ಟ್ರದಲ್ಲಿ ನೆಲೆಸಿರುವ ಖ್ಯಾತ ಯಕ್ಷಗಾನ...

ನ್ಯೂಯಾರ್ಕ್ ಮೇಯರ್ ಆಗಿ ಭಾರತೀಯ ಮೂಲದ ಝೊಹ್ರಾನ್ ಮಮ್ದಾನಿ ಆಯ್ಕೆ ಸಂಭವ; ಗೆದ್ದರೆ, ಹಲವು ಇತಿಹಾಸ ಸೃಷ್ಟಿ!

ಜೂನ್ 24 ರಂದು ನಡೆದ ನ್ಯೂಯಾರ್ಕ್ ಮೇಯರ್ ಹುದ್ದೆಗೆ ಪಕ್ಷಗಳ ಅಭ್ಯರ್ಥಿಯ...

ಗಲ್ಫ್‌ನಲ್ಲಿ ಮತ್ತೆ ಕವಿದ ಯುದ್ಧದ ಕಾರ್ಮೋಡ; ವಲಸಿಗರನ್ನು ಕಾಡುತ್ತಿವೆ 1991ರ ಕೊಲ್ಲಿ ಯುದ್ಧದ ಕಹಿ ನೆನಪುಗಳು…!

ಇರಾನ್-ಇಸ್ರೇಲ್ ದಾಳಿಯಲ್ಲಿ ಅಮೇರಿಕ ನೇರವಾಗಿ ಭಾಗವಹಿಸುತ್ತಿರುವುದರಿಂದ , ಅಮೇರಿಕದ ಮಿತ್ರ ರಾಷ್ಟ್ರಗಳಾದ...

ಜೂನ್ 29ರಂದು ಯುಎಇ ಯಕ್ಷಗಾನ ಅಭ್ಯಾಸ ಕೇಂದ್ರದ ದಶಮಾನೋತ್ಸವ: 7 ಮಂದಿ ಸಾಧಕರಿಗೆ-ಮೂರು ಸಾಧಕ ಸಂಸ್ಥೆಗಳಿಗೆ ಸನ್ಮಾನ

ದುಬೈ:ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಕಾರ್ಯಕ್ರಮವು ಜೂನ್ 29ರಂದು...

Related Articles

Popular Categories