ಯುಎಸ್‌ಎಅಟ್ಲಾಂಟ ಕನ್ನಡಿಗರಿಂದ ಅದ್ದೂರಿಯ ಯುಗಾದಿ ಸಂಭ್ರಮಾಚರಣೆ; ಸಂಗೀತ ಪ್ರಿಯರನ್ನು...

ಅಟ್ಲಾಂಟ ಕನ್ನಡಿಗರಿಂದ ಅದ್ದೂರಿಯ ಯುಗಾದಿ ಸಂಭ್ರಮಾಚರಣೆ; ಸಂಗೀತ ಪ್ರಿಯರನ್ನು ತಲೆದೂಗುವಂತೆ ಮಾಡಿದ ರಾಜೇಶ್ ಕೃಷ್ಣನ್ ಹಾಡು

ಅಮೆರಿಕಾದ ಅಟ್ಲಾಂಟ ಕನ್ನಡಿಗರು ಮೇ 4ರಂದು ರವಿವಾರ ಅದ್ದೂರಿಯಾಗಿ ಯುಗಾದಿ ಹಾಗೂ ಕನ್ನಡ ಹೊಸ ವರ್ಷವನ್ನು ಸಂಭ್ರಮದಿಂದ ಆಚರಿಸಿಕೊಂಡರು.

ನೃಪತುಂಗ ಕನ್ನಡ ಕೂಟದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಅವರ ಸಂಗೀತ ಸಂಜೆ ಮುಖ್ಯ ಆಕರ್ಷಣೆಯಾಗಿತ್ತು.

ಕನ್ನಡ ಶಾಲೆಯ ಶಿಕ್ಷಕರು ಮತ್ತು ಮಕ್ಕಳು

ಕಾರ್ಯಕ್ರಮದ ಒಂದು ವಾರದ ಮುಂಚೆಯೇ ಟಿಕೆಟ್ “ಸೋಲ್ಡ್ ಔಟ್” ಆಗಿದ್ದು ಕನ್ನಡಿಗರು ತಮ್ಮ ನೆಚ್ಚಿನ ಗಾಯಕನ ಹಾಡುಗಳನ್ನು ಸಂತೋಷದಿಂದ ಆನಂದಿಸಿದರು. ರಾಜೇಶ್ ಕೃಷ್ಣನ್ ತಮ್ಮ ಸುಮಧುರ ಗಾಯನ, ನಗು, ಪ್ರೀತಿಯಿಂದ ಅಭಿಮಾನಿಗಳ ಹೃದಯ ಗೆದ್ದರು. ಅಷ್ಟೇ ಅಲ್ಲದೆ ಪ್ರೋತ್ಸಾಹ ನೀಡಲು ಅಟ್ಲಾಂಟದ ಸ್ಥಳೀಯ ಪ್ರತಿಭೆಗಳನ್ನು ಸಹ ತಮ್ಮ ಜೊತೆ ಹಾಡಿಸಿ ಕನ್ನಡಿಗರ ಮನ ಗೆದ್ದರು.

ಸ್ಥಳೀಯ ಗಾಯಕರೊಂದಿಗೆ ಮನರಂಜಿಸಿದ ರಾಜೇಶ್ ಕೃಷ್ಣನ್

ಸ್ಥಳೀಯ ಪ್ರತಿಭೆಗಳಿಂದ ನೃತ್ಯ, ಗಾಯನ, ನಾಟಕಗಳನ್ನು ಆಯೋಜಿಸಲಾಗಿತ್ತು. ಕನ್ನಡ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಸ್ಥಳೀಯ ಕನ್ನಡಿಗರು ಭಾಗವಹಿಸಿ ಸಂತೋಷಪಟ್ಟರು. ಕೆ.ಆರ್.ಶ್ರೀನಾಥ್ ಅವರು ಕಾರ್ಯಕ್ರಮದಲ್ಲಿ ಕನ್ನಡ ಪ್ರಶ್ನಾವಳಿ ಕಾರ್ಯಕ್ರಮ ನಡೆಸಿಕೊಟ್ಟರು. ಕನ್ನಡ ಕೂಟ ತಂಡದವರು ಶ್ರಮವಹಿಸಿ ಇಡೀ ದಿನದ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಿ ಭರ್ಜರಿ ಭೋಜನದ ವ್ಯವಸ್ಥೆಯನ್ನು ಸಹ ಮಾಡಿದ್ದರು.

ವರದಿ: ಕೆ.ಆರ್.ಶ್ರೀನಾಥ್, ಅಟ್ಲಾಂಟ

Hot this week

ದುಬೈ; ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನಲ್ಲಿ ಓಣಂ ಹಬ್ಬ ಆಚರಣೆ

ದುಬೈ : ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಫಾರ್ಚೂನ್ ಗ್ರೂಪ್...

ಕನ್ನಡಿಗರ ಕೂಟ ದುಬೈ ವತಿಯಿಂದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್‌ಗೆ ಸನ್ಮಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ತಂಡವು ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ...

ಫ್ಲೋರಿಡಾ ತುಳು ಕೂಟದ 2ನೇ ವಾರ್ಷಿಕ ಪೊಟ್ಲಕ್ ಪಿಕ್ನಿಕ್ ಸಂಭ್ರಮ

ಅಮೇರಿಕದ ಫ್ಲೋರಿಡಾ ತುಳು ಕೂಟವು ಇತ್ತೀಚೆಗೆ ಕ್ಯಾಸೆಲ್‌ಬೆರ್ರಿ ಒರ್ಲಾಂಡೊದಲ್ಲಿ ತನ್ನ ಎರಡನೇ...

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

Related Articles

Popular Categories